ಬ್ರೇಕಿಂಗ್ ನ್ಯೂಸ್
10-12-21 11:39 pm HK Desk news ಕ್ರೈಂ
ಮಂಗಳೂರು, ಡಿ.10 : ನಗರ ಹೊರವಲಯದ ನೀರುಮಾರ್ಗ ಬಳಿಯ ಪಡು ಎಂಬಲ್ಲಿ ಹಿಂದು ಯುವತಿಯ ಜೊತೆ ಕಾರಿನಲ್ಲಿ ತೆರಳುತ್ತಿದ್ದ ಮುಸ್ಲಿಂ ಯುವಕನನ್ನು ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಅಡ್ಯಾರು ಪದವು ನಿವಾಸಿ ಅಬ್ದುಲ್ ರಜಾಕ್ ಯಾನೆ ರಿಯಾಜ್ ಹಲ್ಲೆಗೊಳಗಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಂದು ಯುವತಿ ಜೊತೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ನೀರುಮಾರ್ಗದ ಬಳಿ ಯುವಕರ ತಂಡ ತಡೆದು ನಿಲ್ಲಿಸಿದೆ.


ಯುವಕ, ಯುವತಿಯನ್ನು ಕಾರಿನಲ್ಲಿ ಮಲ್ಲೂರು ಕಡೆಗೆ ಕರೆದೊಯ್ಯುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮೊದಲೇ ಮಾಹಿತಿ ಇದ್ದ ಯುವಕರ ತಂಡ, ಪಡು ಅಂಚೆ ಕಚೇರಿ ಬಳಿ ಕಾರನ್ನು ತಡೆದು ಯುವತಿ ಮತ್ತು ಯುವಕನನ್ನು ಪ್ರಶ್ನೆ ಮಾಡಿದ್ದಾರೆ. ಇದೇ ವೇಳೆ ಮಾತಿಗೆ ಮಾತು ಬೆಳೆದಿದ್ದು ಅಬ್ದುಲ್ ರಜಾಕ್ ಮೇಲೆ ಐದಾರು ಮಂದಿಯ ತಂಡ ಹಲ್ಲೆ ನಡೆಸಿದೆ. ಯುವಕನ ತಲೆಗೆ ಬೀಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದು ತಲೆಗೆ ಏಟು ಬಿದ್ದು ಗಾಯಗಳಾಗಿವೆ. ಸ್ಥಳೀಯರು ಕೂಡಲೇ ಆತನನ್ನು ಅಂಬುಲೆನ್ಸ್ನಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ಯುವತಿ ಮೇಲೂ ಏಟು ಬಿದ್ದಿದ್ದು ಆಕೆ ಓಡಿ ತಪ್ಪಿಸಿಕೊಂಡಿದ್ದಾಳೆ.


ಮಂಗಳೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪೊಲೀಸ್ ಕಮಿಷನರ್ ಶಶಿಕುಮಾರ್ ಕೂಡ ಸ್ಥಳಕ್ಕೆ ತೆರಳಿದ್ದು ಕ್ರಮಕ್ಕೆ ಸೂಚಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಹಲ್ಲೆಯಾದ ಯುವಕ ಅಪಾಯದಿಂದ ಪಾರಾಗಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
Mangalore Hindu activists assault Muslim youth with beer bottle as Hindu girl was in the car in Adyarpadavu. He has been admitted to the private hospital in city and is said to be out of danger. A case has been registered at the Rural Police Station.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm