ಬ್ರೇಕಿಂಗ್ ನ್ಯೂಸ್
11-12-21 12:16 pm HK Desk news ಕ್ರೈಂ
ಬೆಂಗಳೂರು, ಡಿ.11 : ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲು ಮುಂದಾದ ಜೆ.ಬಿ.ನಗರ ಠಾಣೆ ವ್ಯಾಪ್ತಿಯ ರೌಡಿಶೀಟರ್ ಚಲ್ಲಘಟ್ಟ ಲೋಹಿತ್ @ ರೋಹಿತ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಎಚ್ಎಸ್ಆರ್ ಲೇಔಟ್ ಮತ್ತು ಬನ್ನೇರುಘಟ್ಟ ಠಾಣೆಯ ರೌಡಿಶೀಟರ್ ಆಗಿರುವ ಲೋಹಿತ್ @ ರೋಹಿತ್ ವಿರುದ್ಧ ರಾಬರಿ, ಅಪಹರಣ, ಕೊಲೆ, ಹಲ್ಲೆ ಸೇರಿದಂತೆ ಹಲವು ಪ್ರಕರಣ ದಾಖಲಾಗಿದೆ. ಕೋಲಾರ ಮಾಜಿ ಶಾಸಕ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಈ ಹಿಂದೆ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿಯಾಗಿದ್ದ ಕವಿರಾಜ್ ನನ್ನ ಪೊಲೀಸರು ಬಂಧಿಸಿದ್ದರು.
ಇಂದಿರಾನಗರ ಠಾಣೆ ಕೊಲೆ, ಅಪಹರಣ ಪ್ರಕರಣದಲ್ಲಿ ಹಾಗೂ ಇತರೆ 17 ಪ್ರಕರಣ ಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ ರೋಹಿತ್ ನನ್ನು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ.
ಜೆಬಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚಲ್ಲಘಟ್ಟದಲ್ಲಿ ಆರೋಪಿ ಇರುವ ಬಗ್ಗೆ ಮಾಹಿತಿ ಪಡೆದು ಇಂದಿರಾನಗರ ಠಾಣೆ ಪೊಲೀಸರು ತೆರಳಿದ್ದರು. ಈ ವೇಳೆ ಹೆಡ್ ಕಾನ್ಸ್ ಸ್ಟೇಬಲ್ ಸೈಯದ್ ಮೊಯೀನುಲ್ಲಾ ಮೇಲೆ ಆರೋಪಿ ಮಚ್ಚಿನಿಂದ ಹಲ್ಲೆಗೆ ಮುಂದಾಗಿದ್ದು, ಪಿಐ ಹರೀಶ್ ಆರೋಪಿಗೆ ಶರಣಾಗುವಂತೆ ಹೇಳಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆರೋಪಿ ಹಲ್ಲೆಗೆ ಮುಂದಾಗಿದ್ದು ಇಂದಿರಾನಗರ ಠಾಣೆ ಪಿಎಸ್ಐ ಅಮರೇಶ್ ಜೇಗರಕಲ್ ಅವರು ರೌಡಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
Bangalore Police open fire at main accused of Varthur Prakash kidnap case.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm