ಬ್ರೇಕಿಂಗ್ ನ್ಯೂಸ್
11-12-21 05:15 pm HK Desk news ಕ್ರೈಂ
ಹಾಸನ, ಡಿ.11 : ಅನಾರೋಗ್ಯ ಪೀಡಿತ ಮಹಿಳೆಯನ್ನು ಗುಣಪಡಿಸುವ ನೆಪದಲ್ಲಿ ಪೂಜೆ ಮಾಡಿ, ಪೂಜಾರಿ ಬೆತ್ತದ ಏಟು ನೀಡಿದ ಪರಿಣಾಮ ಮಹಿಳೆ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಬೆಕ್ಕ ಗ್ರಾಮದಲ್ಲಿ ನಡೆದಿದೆ.
ದೇವರು ಹೆಸರಿನಲ್ಲಿ ವಂಚನೆ ಮಾಡುವುದನ್ನು ನೋಡಿದ್ದೀವಿ, ದೇವರ ಹೆಸರಿನಲ್ಲಿ ಶಿಕ್ಷೆ ನೀಡುವುದನ್ನು ನೋಡಿದ್ದೀವಿ, ಆದರೆ ಇಲ್ಲೊಬ್ಬ ಪೂಜಾರಿ ಪೂಜೆ ವೇಳೆ ನನಗೆ ದೇವರು ಬಂದಿದೆ, ನಾನು ನಿನ್ನನ್ನು ಕಾಯಿಲೆಯಿಂದ ಗುಣಪಡಿಸುತ್ತೇನೆಂದು ಹೇಳಿ ಬೆತ್ತದ ಕೋಲಿನಲ್ಲಿ ತಲೆಗೆ ಬಲವಾಗಿ ಹೊಡೆದು ಮಹಿಳೆಯೇ ಸಾಯುವಂತಾಗಿದೆ.
ಪೂಜಾರಿ ನೀಡಿದ ಬೆತ್ತದ ಏಟಿಗೆ 47 ವರ್ಷದ ಪಾರ್ವತಿ ಮೃತಪಟ್ಟಿದ್ದಾಳೆ. ಕಳೆದ ಕೆಲ ದಿನಗಳಿಂದ ತಲೆ ನೋವಿನಿಂದ ಬಳಲುತ್ತಿದ್ದ ಪಾರ್ವತಿ, ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ. ಹೀಗಾಗಿ ಕುಟುಂಬಸ್ಥರು ದೇವರ ಮೊರೆ ಹೋಗಿದ್ದರು.
ನೀವು ಗುಣಮುಖರಾಗಲು ಪೂಜೆ ಮಾಡಿಸಬೇಕು ಎಂದು ಮಹಿಳೆಗೆ ದೇವಸ್ಥಾನದ ಪೂಜಾರಿ ತಿಳಿಸಿದ್ದು ಅದರಂತೆ ಪೂಜೆ ಮಾಡುವುದಾಗಿ ಹೇಳಿ ಮಹಿಳೆ ತಲೆಗೆ ಪೂಜಾರಿ ಬೆತ್ತದಿಂದ ಹೊಡೆದಿದ್ದಾರೆ. ಹಿರಿಯಾಪಟ್ಟಣದ ದೇವಸ್ಥಾನದ ಪೂಜಾರಿಯು ಬೆತ್ತದಿಂದ ತಲೆಗೆ ಹೊಡೆದ ಪರಿಣಾಮ ಮಹಿಳೆ ಅಸ್ವಸ್ಥಗೊಂಡಿದ್ದಾರೆ. ತೀವ್ರ ಅಸ್ವಸ್ಥಗೊಂಡ ಆಕೆ ಚಿಕಿತ್ಸೆ ಫಲಕಾರಿಯಾಗದೇ ಹಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಘಟನೆ ನಂತರ ಪೂಜಾರಿ ಮಧು ನಾಪತ್ತೆಯಾಗಿದ್ದು, ಈ ಸಂಬಂಧ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
A woman who was beaten up by a priest in the guise of removing evil spirits bothering her health died at Hassan Institute of Medical Sciences in Hassan on Wednesday. Parvathi, 37, of Gowdarahalli in Channarayapatna was allegedly beaten up by Manu, a priest at Bekka village in Channarayapatna taluk, on Tuesday.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm