ಬ್ರೇಕಿಂಗ್ ನ್ಯೂಸ್
15-12-21 08:14 pm HK Desk news ಕ್ರೈಂ
Photo credits : Headline Karnataka
ಉಳ್ಳಾಲ, ಡಿ.15 : ವೈಯಕ್ತಿಕ ಕಾರಣ ಮುಂದಿಟ್ಟು ಆಟೋ ಚಾಲಕನೊಬ್ಬ ಇನ್ನೊಬ್ಬ ಆಟೋ ಚಾಲಕನ ಮನೆ ಆವರಣಕ್ಕೆ ನುಗ್ಗಿ ಕೊಲೆಗೆ ಯತ್ನಿಸಿದ್ದಲ್ಲದೆ, ತಡೆಯಲು ಬಂದವನನ್ನೂ ಇರಿದು ಗಾಯಗೊಳಿಸಿದ ಘಟನೆ ಕುಂಪಲ ಹನುಮಾನ್ ನಗರದಲ್ಲಿ ನಡೆದಿದೆ.
ಕುಂಪಲ ಹುನುಮಾನ್ ನಗರದ ನಿವಾಸಿ ರಿಕ್ಷಾ ಚಾಲಕ ಸುನಿಲ್ ಇರಿತದಿಂದ ಗಂಭೀರ ಗಾಯಗೊಂಡಿದ್ದು, ತಡೆಯಲು ಬಂದ ಇನ್ನೋರ್ವ ರಿಕ್ಷಾ ಚಾಲಕರಾದ ಜಯಪ್ರಕಾಶ್ ಕೂಡ ಇರಿತಕ್ಕೊಳಗಾಗಿದ್ದಾರೆ. ಕುಂಪಲ ಬಗಂಬಿಲ ನಿವಾಸಿ ರೋಕೇಶ್ ಯಾನೆ ರೋಸ್ ಎಂಬಾತ ತನ್ನ ಗೆಳೆಯ ದುರ್ಗೇಶ್ ಜೊತೆ ಆಟೋ ರಿಕ್ಷಾದಲ್ಲಿ ಹನುಮಾನ್ ನಗರದ ಸುನಿಲ್ ಎಂಬವರ ಮನೆ ಆವರಣಕ್ಕೆ ಮಂಗಳವಾರ ರಾತ್ರಿ ನುಗ್ಗಿದ್ದು ಧಾಂದಲೆ ನಡೆಸಿದ್ದಾನೆ. ಸುನಿಲ್ ನನ್ನು ಮನೆಯಿಂದ ಹೊರ ಕರೆದ ರೋಕೇಶ್ ಚಾಕುವಿನಿಂದ ತೋಳು, ಹೊಟ್ಟೆ, ಕಾಲು, ಬೆನ್ನಿಗೆ ಇರಿದಿದ್ದಾನೆನ್ನಲಾಗಿದೆ. ಗಲಾಟೆಯನ್ನ ತಡೆಯಲು ಬಂದ ಸುನಿಲ್ ಸ್ನೇಹಿತ ಜಯಪ್ರಕಾಶ್ ಎಂಬವರಿಗೂ ರೋಕೇಶ್ ಇರಿದಿದ್ದು ಗಾಯಾಳುಗಳು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.



ರೋಕೇಶ್ ಯಾನೆ ರೋಸ್, ಸುನಿಲ್, ಜಯಪ್ರಕಾಶ್ ಎಂಬ ಮೂವರೂ ಕುಂಪಲ ಬೈಪಾಸ್ ರಿಕ್ಷಾ ಪಾರ್ಕಲ್ಲಿ ಆಟೋ ಚಲಾಯಿಸುವ ವೃತ್ತಿ ನಡೆಸುತ್ತಿದ್ದಾರೆ. ವೈಯಕ್ತಿಕ ವಿಚಾರವನ್ನೇ ಮುಂದಿಟ್ಟು ರೋಕೇಶ್ ಮಂಗಳವಾರ ರಾತ್ರಿ ಸ್ನೇಹಿತ ದುರ್ಗೇಶ್ ಜತೆಗೂಡಿ ಸುನಿಲ್ ಮೇಲೆ ಇರಿದಿದ್ದಾನೆ. ರೋಕೇಶ್ ಯಾನೆ ರೋಸ್ ಹೆಣ್ಣು ಪೀಡಕನಾಗಿದ್ದು ಈ ಹಿಂದೆಯೂ ತನ್ನ ಕಚ್ಚೇ ಹರಕುತನ ತೋರಿಸಲು ಹೋಗಿ ಸ್ಥಳೀಯರಿಂದ ಅನೇಕ ಬಾರಿ ಶಾಸ್ತಿ ಮಾಡಿಸಿಕೊಂಡಿದ್ದ. ಈತನ ಸಹೋದರ ವಕೀಲನಾಗಿದ್ದು ತಮ್ಮನ ಪುಂಡಾಟಿಕೆಗೆ ಬೆಂಗಾವಲಿದ್ದಾನೆಂದು ಸ್ಥಳೀಯರು ಆರೋಪಿಸಿದ್ದಾರೆ.
ರೋಸ್ ಯಾನೆ ರೋಕೇಶ್ ಮತ್ತು ದುರ್ಗೇಶ್ ಘಟನೆ ಬಳಿಕ ತಲೆಮರೆಸಿದ್ದು ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Auto driver stabs two persons over personal gredge in Kumpala. Kampala resident Rokesh is accused of doing this crime over personal reasons. Both who are stabbed are also said to be auto drivers.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm