ಬ್ರೇಕಿಂಗ್ ನ್ಯೂಸ್
14-09-20 08:46 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 14: ಸ್ಯಾಂಡಲ್ ವುಡ್ ಡ್ರಗ್ಸ್ ಆರೋಪ ಪ್ರಕರಣ ಸಂಬಂಧ ನಟಿ ರಾಗಿಣಿ ದ್ವಿವೇದಿ ಸೇರಿ ಐವರನ್ನು ನಗರದ 1ನೆ ಎಸಿಎಂಎಂ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಹಿನ್ನೆಲೆ ಆರೋಪಿಗಳನ್ನು ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ ರವಾನೆ ಮಾಡಲಾಯಿತು.
ಇಂದು ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಜನಾ, ರಾಗಿಣಿ ಜೊತೆ ಆರೋಪಿಗಳನ್ನು 1ನೇ ಎಸಿಎಂಎಂ ಕೋರ್ಟ್ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ರಾಗಿಣಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರೆ ನಟಿ ಸಂಜನಾರನ್ನು 2 ದಿನ ಪೊಲೀಸ್ ಕಸ್ಟಡಿಗೆ ನೀಡಿತು.
ವಿಧಿವಿಜ್ಞಾನ ಕೇಂದ್ರದಲ್ಲಿ ಒಬ್ಬರನ್ನೊಬ್ಬರು ಬಿಟ್ಟು ಹೋಗುವಾಗ ಇಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ. ಸಂಜನಾ ಕಣ್ಣೀರು ಹಾಕಿ ರಾಗಿಣಿಗೆ ವಿದಾಯ ಹೇಳಿದ್ದಾರೆ.
ಡ್ರಗ್ಸ್ ಪ್ರಕರಣಕ್ಕೂ ಮೊದಲು ಇಬ್ಬರ ಸಂಬಂಧ ಅಷ್ಟಕ್ಕಷ್ಟೇ ಇತ್ತು. ಆದರೆ ಕಳೆದ 8 ದಿನಗಳಿಂದ ರಾಗಿಣಿ ಮತ್ತು ಸಂಜನಾ ಒಂದಾಗಿದ್ದರು. ಮೊದ ಮೊದಲು ಇಬ್ಬರ ನಡುವೆ ಅಸಮಾಧಾನವಿದ್ದರೂ ನಂತರ ಇಬ್ಬರು ಜೊತೆಯಾಗಿದ್ದರು.
ರೀಲ್ ನಲ್ಲಿ ಪೊಲೀಸ್ ಆಗಿದ್ದ ರಾಗಿಣಿ ಇಂದು ರಿಯಲ್ಲಾಗಿ ಖೈದಿಯಾಗುತ್ತಿದ್ದಾರೆ. ರಾಗಿಣಿ ಐಪಿಎಸ್ ಚಿತ್ರದಲ್ಲಿ ಕಾಪ್ ರೋಲ್ ನಲ್ಲಿ ರಾಗಿಣಿ ಮಿಂಚಿಸಿದ್ದಾರೆ.
ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ಅವರನ್ನು ವಾಹನದಲ್ಲಿ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋದರು. ಈ ಮೂಲಕ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲುಪಾಲದ ಮೊದಲ ನಟಿ ಎಂಬ ಕುಖ್ಯಾತಿಗೆ ರಾಗಿಣಿ ಪಾತ್ರವಾಗಿದ್ದಾರೆ.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm