ಬ್ರೇಕಿಂಗ್ ನ್ಯೂಸ್
23-12-21 12:46 pm Mangalore Correspondent ಕ್ರೈಂ
ಮಂಗಳೂರು, ಡಿ.23 : ಮೊಬೈಲ್ ಕದ್ದ ನೆಪದಲ್ಲಿ ಮೀನುಗಾರ ಕಾರ್ಮಿಕನನ್ನು ತಲೆಕೆಳಗಾಗಿಸಿ ನೇತು ಹಾಕಿ ಹಲ್ಲೆ ನಡೆಸಿದ ಕೃತ್ಯದ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಆಂಧ್ರಪ್ರದೇಶ ರಾಜ್ಯದ ನೆಲ್ಲೂರು ಜಿಲ್ಲೆಯ ಕೊಂಡೂರು ಪೋಲಯ್ಯ(23), ಅವುಲ ರಾಜಕುಮಾರ್(26), ಪ್ರಕಾಶಂ ಜಿಲ್ಲೆಯ ಕಾಟಂಗರಿ ಮನೋಹರ್ (21), ವೂಟುಕೋರಿ ಜಾಲಯ್ಯ(30), ನೆಲ್ಲೂರು ಜಿಲ್ಲೆಯ ಕರಪಿಂಗಾರ ರವಿ(27), ಪ್ರಲಯ ಕಾವೇರಿ ಗೋವಿಂದಯ್ಯ(47) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ದಕ್ಕೆಯಲ್ಲಿ ಜೋನ್ ಶೈಲೇಶ್ -2 ಎಂಬ ಹೆಸರಿನ ಮೀನುಗಾರಿಕಾ ಬೋಟಿನಲ್ಲಿ ಕೆಲಸ ಮಾಡುತ್ತಿದ್ದರು.
ಡಿ.15ರಂದು ರಾತ್ರಿ ಆರೋಪಿಗಳಿದ್ದ ಬೋಟಿಗೆ ತೆರಳಿದ್ದ ಪ್ರಕಾಶಂ ಜಿಲ್ಲೆಯ ನಿವಾಸಿ ವೈಲ ಶೀನು ಎಂಬಾತ ಬಳಿಕ ಸ್ವಲ್ಪ ಹೊತ್ತಿನ ಬಳಿಕ ಮರಳಿದ್ದು, ತಾನು ಕೆಲಸ ಮಾಡುವ ಬೋಟಿನಲ್ಲಿ ಮಲಗಿದ್ದ. ಮರುದಿನ ಬೆಳಗ್ಗೆ ಆರೋಪಿಗಳ ಪೈಕಿ ಒಬ್ಬಾತನ ಮೊಬೈಲ್ ಕಳವಾಗಿದ್ದನ್ನು ತಿಳಿದು ಅದನ್ನು ವೈಲ ಶೀನುವೇ ತೆಗೆದಿದ್ದಾನೆಂದು ನಂಬಿ, ಆತನನ್ನು ಹಿಡಿದು ತಾವಿದ್ದ ಬೋಟಿಗೆ ಕರೆತಂದಿದ್ದರು. ಬಳಿಕ ವೈಲ ಶೀನುವಿಗೆ ಹಲ್ಲೆ ನಡೆಸಿ, ಬಾಯಿಗೆ ಬಟ್ಟೆ ತುರುಕಿ ಕಾಲುಗಳನ್ನು ಕಟ್ಟಿ, ಹಗ್ಗದಿಂದ ಬೋಟಿನ ಮೇಲ್ಭಾಗದ ಕೊಕ್ಕೆಗೆ ಸಿಕ್ಕಿಸಿದ್ದರು.
ಆನಂತರ, ಮರದ ಸಲಾಕೆ, ಕಬ್ಬಿಣದ ಸರಪಳಿಯಿಂದ ಹಲ್ಲೆ ನಡೆಸಿ, ಮೊಬೈಲ್ ಎಲ್ಲಿಟ್ಟಿದ್ದೀಯಾ ಹೇಳು ಎಂದು ಬೆದರಿಸಿದ್ದಾರೆ. ಅಲ್ಲದೆ, ಯುವಕನನ್ನು ಕೈಕಾಲು ಕಟ್ಟಿ ಸಮುದ್ರಕ್ಕೆ ಎಸೆದು ಕೊಲೆ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದರು. ಆದರೆ, ಈ ವೇಳೆ ಇತರೇ ಸಾರ್ವಜನಿಕರು ಬಂದು ವೈಲ ಶೀನುವನ್ನು ರಕ್ಷಿಸಿದ್ದಾರೆ. ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಡಿ.21ರಂದು ಅಪಹರಣ ಮತ್ತು ಕೊಲೆಯತ್ನ ಪ್ರಕರಣ ದಾಖಲಾಗಿತ್ತು. ಇದೇ ವೇಳೆ, ತಲೆ ಕೆಳಗಾಗಿಸಿ ಹಲ್ಲೆ ನಡೆಸಿದ್ದ ವಿಡಿಯೋ ಹೊರಬಂದಿದ್ದು, ಅದನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಮೀನು ಕಾರ್ಮಿಕನ ತಲೆ ಕೆಳಗಾಗಿಸಿ ನೇತು ಹಾಕಿ ದೌರ್ಜನ್ಯ ; ಮಂಗಳೂರಿನ ದಕ್ಕೆಯಲ್ಲಿ ತಾಲಿಬಾನ್ ಕೃತ್ಯ !
Six accused were arrested regarding the case where a fisherman was hung upside down from a crane in Bunder area in the city and tortured. The arrested are Konduru Polayya (23), Avula Raj Kumar (26), Kaatangari Manohar (21), Vutukori Jalayya (30), Karpingari Ravi (27) and Pralaya Kaveri Govindayya (47). All hail from Andhra Pradesh. The victim in the horrific incident is Vaila Sheenu, a member of the fishermen community from Andhra Pradesh.
25-08-25 03:02 pm
Bangalore Correspondent
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 12:24 pm
Mangalore Correspondent
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm