ಬ್ರೇಕಿಂಗ್ ನ್ಯೂಸ್
23-12-21 12:46 pm Mangalore Correspondent ಕ್ರೈಂ
ಮಂಗಳೂರು, ಡಿ.23 : ಮೊಬೈಲ್ ಕದ್ದ ನೆಪದಲ್ಲಿ ಮೀನುಗಾರ ಕಾರ್ಮಿಕನನ್ನು ತಲೆಕೆಳಗಾಗಿಸಿ ನೇತು ಹಾಕಿ ಹಲ್ಲೆ ನಡೆಸಿದ ಕೃತ್ಯದ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಆಂಧ್ರಪ್ರದೇಶ ರಾಜ್ಯದ ನೆಲ್ಲೂರು ಜಿಲ್ಲೆಯ ಕೊಂಡೂರು ಪೋಲಯ್ಯ(23), ಅವುಲ ರಾಜಕುಮಾರ್(26), ಪ್ರಕಾಶಂ ಜಿಲ್ಲೆಯ ಕಾಟಂಗರಿ ಮನೋಹರ್ (21), ವೂಟುಕೋರಿ ಜಾಲಯ್ಯ(30), ನೆಲ್ಲೂರು ಜಿಲ್ಲೆಯ ಕರಪಿಂಗಾರ ರವಿ(27), ಪ್ರಲಯ ಕಾವೇರಿ ಗೋವಿಂದಯ್ಯ(47) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ದಕ್ಕೆಯಲ್ಲಿ ಜೋನ್ ಶೈಲೇಶ್ -2 ಎಂಬ ಹೆಸರಿನ ಮೀನುಗಾರಿಕಾ ಬೋಟಿನಲ್ಲಿ ಕೆಲಸ ಮಾಡುತ್ತಿದ್ದರು.


ಡಿ.15ರಂದು ರಾತ್ರಿ ಆರೋಪಿಗಳಿದ್ದ ಬೋಟಿಗೆ ತೆರಳಿದ್ದ ಪ್ರಕಾಶಂ ಜಿಲ್ಲೆಯ ನಿವಾಸಿ ವೈಲ ಶೀನು ಎಂಬಾತ ಬಳಿಕ ಸ್ವಲ್ಪ ಹೊತ್ತಿನ ಬಳಿಕ ಮರಳಿದ್ದು, ತಾನು ಕೆಲಸ ಮಾಡುವ ಬೋಟಿನಲ್ಲಿ ಮಲಗಿದ್ದ. ಮರುದಿನ ಬೆಳಗ್ಗೆ ಆರೋಪಿಗಳ ಪೈಕಿ ಒಬ್ಬಾತನ ಮೊಬೈಲ್ ಕಳವಾಗಿದ್ದನ್ನು ತಿಳಿದು ಅದನ್ನು ವೈಲ ಶೀನುವೇ ತೆಗೆದಿದ್ದಾನೆಂದು ನಂಬಿ, ಆತನನ್ನು ಹಿಡಿದು ತಾವಿದ್ದ ಬೋಟಿಗೆ ಕರೆತಂದಿದ್ದರು. ಬಳಿಕ ವೈಲ ಶೀನುವಿಗೆ ಹಲ್ಲೆ ನಡೆಸಿ, ಬಾಯಿಗೆ ಬಟ್ಟೆ ತುರುಕಿ ಕಾಲುಗಳನ್ನು ಕಟ್ಟಿ, ಹಗ್ಗದಿಂದ ಬೋಟಿನ ಮೇಲ್ಭಾಗದ ಕೊಕ್ಕೆಗೆ ಸಿಕ್ಕಿಸಿದ್ದರು.

ಆನಂತರ, ಮರದ ಸಲಾಕೆ, ಕಬ್ಬಿಣದ ಸರಪಳಿಯಿಂದ ಹಲ್ಲೆ ನಡೆಸಿ, ಮೊಬೈಲ್ ಎಲ್ಲಿಟ್ಟಿದ್ದೀಯಾ ಹೇಳು ಎಂದು ಬೆದರಿಸಿದ್ದಾರೆ. ಅಲ್ಲದೆ, ಯುವಕನನ್ನು ಕೈಕಾಲು ಕಟ್ಟಿ ಸಮುದ್ರಕ್ಕೆ ಎಸೆದು ಕೊಲೆ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದರು. ಆದರೆ, ಈ ವೇಳೆ ಇತರೇ ಸಾರ್ವಜನಿಕರು ಬಂದು ವೈಲ ಶೀನುವನ್ನು ರಕ್ಷಿಸಿದ್ದಾರೆ. ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಡಿ.21ರಂದು ಅಪಹರಣ ಮತ್ತು ಕೊಲೆಯತ್ನ ಪ್ರಕರಣ ದಾಖಲಾಗಿತ್ತು. ಇದೇ ವೇಳೆ, ತಲೆ ಕೆಳಗಾಗಿಸಿ ಹಲ್ಲೆ ನಡೆಸಿದ್ದ ವಿಡಿಯೋ ಹೊರಬಂದಿದ್ದು, ಅದನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಮೀನು ಕಾರ್ಮಿಕನ ತಲೆ ಕೆಳಗಾಗಿಸಿ ನೇತು ಹಾಕಿ ದೌರ್ಜನ್ಯ ; ಮಂಗಳೂರಿನ ದಕ್ಕೆಯಲ್ಲಿ ತಾಲಿಬಾನ್ ಕೃತ್ಯ !
Six accused were arrested regarding the case where a fisherman was hung upside down from a crane in Bunder area in the city and tortured. The arrested are Konduru Polayya (23), Avula Raj Kumar (26), Kaatangari Manohar (21), Vutukori Jalayya (30), Karpingari Ravi (27) and Pralaya Kaveri Govindayya (47). All hail from Andhra Pradesh. The victim in the horrific incident is Vaila Sheenu, a member of the fishermen community from Andhra Pradesh.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm