ಬ್ರೇಕಿಂಗ್ ನ್ಯೂಸ್
23-12-21 03:41 pm HK Desk news ಕ್ರೈಂ
ಬಿಹಾರ, ಡಿ 23: ಲೈಂಗಿಕ ದೌರ್ಜನ್ಯ ವಿರೋಧಿಸಿದ 8ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಆರೋಪಿ 13 ಸೆಕೆಂಡ್ನಲ್ಲಿ 8 ಬಾರಿ ಇರಿದಿರುವ ಆಘಾತಕಾರಿ ಘಟನೆ ಬಿಹಾರದ ಗೋಪಾಲ್ಗಂಜ್ನಲ್ಲಿ ನಡೆದಿದೆ.
ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಇಬ್ಬರು ಆಕೆಗೆ ಕಿರುಕುಳ ನೀಡಲು ಮುಂದಾಗಿದ್ದರು. ಈ ವೇಳೆ ಬಾಲಕಿ ವಿರೋಧಿಸಿದ್ದಾಳೆ. ಇದರಿಂದ ಕುಪಿತಗೊಂಡ ವ್ಯಕ್ತಿ ಆಕೆಯನ್ನು ನೆಲದ ಮೇಲೆ ತಳ್ಳಿ ಚಾಕುವಿನಿಂದ ಚುಚ್ಚು ಚುಚ್ಚಿ ಇರಿದು ಕೊಂದಿರುವ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.
ಕಳೆದ ಮೂರು ದಿನಗಳ ಹಿಂದೆ ಅಂದರೆ ಡಿಸೆಂಬರ್ 19ರಂದು ಈ ಘಟನೆ ನಡೆದಿರುವುದಾಗಿ ದೈನಿಕ್ ಬಾಸ್ಕರ್ ವರದಿ ಮಾಡಿದೆ. ಬಾಲಕಿ ತನ್ನ ಇಬ್ಬರು ಗೆಳತಿಯರೊಂದಿಗೆ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಳು. ಈ ವೇಳೆ ಮಾರ್ಗ ಮಧ್ಯೆ ಅವಿತು ಕುಳಿತುಕೊಂಡಿದ್ದ ಆರೋಪಿ ಮತ್ತು ಆತನ ಸ್ನೇಹಿತ ಈ ಕೃತ್ಯ ಎಸಗಿದ್ದಾನೆ.
ಸಿಸಿಟಿವಿ ದೃಶ್ಯ ವೈರಲ್ ;
ಈ ಘಟನೆ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಬ್ಬ ಯುವಕ ಆತನ ಗೆಳೆಯನನನ್ನು ಎಷ್ಟೇ ಬಿಗಿ ಹಿಡಿದು ಎಳೆದರೂ ಆರೋಪಿ ಪದೇ ಪದೇ ಬಾಲಕಿಗೆ ಚಾಕುವಿನಿಂದ ಚುಚ್ಚಿರುವುದು ಕಂಡು ಬಂದಿದೆ. ತಕ್ಷಣಕ್ಕೆ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಆಕೆಗೆ ಹೆಚ್ಚಿನ ಚಿಕಿತ್ಸೆಗೆ ಪಾಟ್ನಾ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚಿಸಿದ್ದಾರೆ.
ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿದ್ದು, ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಆರೋಪಿ ಇದಕ್ಕೂ ಮುನ್ನ ಆಕೆಗೆ ಅನೇಕ ಬಾರಿ ಕಿರುಕುಳ ನೀಡಿದ್ದ, ಶಾಲೆಗೆ ಹೋಗುವಾಗ ಬರುವಾಗ ಆಕೆಗೆ ಹಿಂಸೆ ನೀಡುತ್ತಿದ್ದ ಎಂದು ಸಂತ್ರಸ್ತೆ ಕುಟುಂಬ ತಿಳಿಸಿದೆ.
A class 8 student in Bihar's Gopalganj district was stabbed eight times in 13 seconds by her alleged stalker after she resisted molestation attempts.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm