ಬ್ರೇಕಿಂಗ್ ನ್ಯೂಸ್
26-12-21 01:10 pm Mangalore Correspondent ಕ್ರೈಂ
ಮಂಗಳೂರು, ಡಿ.26 : ಕ್ರಿಸ್ತಿಯನ್ ಹುಡುಗಿಯನ್ನು ಮದುವೆಯಾಗುವುದಾಗಿ ನಂಬಿಸಿ, ಡ್ರಗ್ಸ್ ಕೊಟ್ಟು ಲೈಂಗಿಕವಾಗಿ ದುರ್ಬಳಕೆ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದ್ದು ಈ ಬಗ್ಗೆ ನೊಂದ ಹುಡುಗಿಯ ತಾಯಿ ಮಂಗಳೂರಿನ ವಿಶ್ವ ಹಿಂದು ಪರಿಷತ್ ಮುಖಂಡರಿಗೆ ರಕ್ಷಣೆಗೆ ಮನವಿ ಮಾಡಿದ್ದಾರೆ.
ಯುವತಿ ಮಂಗಳೂರಿನ ಬಿಜೈ ನಿವಾಸಿಯಾಗಿದ್ದು ಆಕೆಯನ್ನು ಕಾಟಿಪಳ್ಳದ ಕೃಷ್ಣಾಪುರ ನಿವಾಸಿ ಮಹಮ್ಮದ್ ಶರೀಫ್ ಸಿದ್ದಿಕ್ ಎಂಬಾತ ಕಳೆದ ಮೂರು ವರ್ಷಗಳಿಂದ ದುರುಪಯೋಗ ಮಾಡುತ್ತಿದ್ದಾನೆ ಎಂದು ದೂರಲಾಗಿದೆ. ಸಿದ್ದಿಕ್ ಮಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಆಗಿದ್ದು ಹಲವಾರು ಕೇಸು ಎದುರಿಸುತ್ತಿದ್ದಾನೆ ಎನ್ನಲಾಗಿದೆ.
ಯುವತಿ ಅಲೋಶಿಯಸ್ ಕಾಲೇಜಿನಲ್ಲಿ ಕಾಲೇಜು ಮುಗಿಸಿದ್ದು ಅಲ್ಲಿಯೇ ಡ್ರಗ್ಸ್ ಚಟ ಹತ್ತಿಸಿಕೊಂಡಿದ್ದಳು. ಆನಂತರ ಡ್ರಗ್ಸ್ ಇಲ್ಲದೆ ಬದುಕುವುದೇ ಅಸಾಧ್ಯ ಎನ್ನುವಷ್ಟರ ಮಟ್ಟಿಗೆ ಡ್ರಗ್ಸ್ ಚಟಕ್ಕೆ ಬಿದ್ದಿದ್ದಳು. ನಡುರಾತ್ರಿಯಲ್ಲಿ ಬೈಕಿನಲ್ಲಿ ಬರುವ ಯುವಕರು ಯುವತಿಯನ್ನು ಕರೆದೊಯ್ಯುತ್ತಿದ್ದು ಆಬಳಿಕ ಹಲವು ದಿನಗಳ ಕಾಲ ಇಟ್ಟುಕೊಳ್ಳುತ್ತಿದ್ದರು. ಮಗಳು ಎಲ್ಲಿದ್ದಾಳೆ ಎನ್ನುವುದು ತಿಳಿಯದೆ ಹೆತ್ತವರು ಆತಂಕಕ್ಕೆ ಒಳಗಾಗುತ್ತಿದ್ದರು. ಮಗಳ ಈ ರೀತಿಯ ನಡತೆಯಿಂದ ತೀವ್ರ ಬೇಸತ್ತಿದ್ದ ತಂದೆ ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾಗಿ ಸಾವು ಕಂಡಿದ್ದರು.

ಯುವತಿ ತನ್ನನ್ನು ಸಿದ್ದಿಕ್ ಮದುವೆಯಾಗುವುದಾಗಿ ಹೇಳುತ್ತಿದ್ದು ಅದೇ ಭ್ರಮೆಯಲ್ಲಿ ಆತನ ಜೊತೆ ತಿರುಗಾಡುತ್ತಿದ್ದಾಳೆ. ಈ ಬಗ್ಗೆ ಯುವತಿಯ ತಾಯಿ ಕ್ರಿಸ್ತಿಯನ್ ಧರ್ಮಗುರುಗಳಿಗೂ ದೂರು ನೀಡಿದ್ದಾರೆ. ಅಲ್ಲದೆ, ಉರ್ವಾ ಠಾಣೆಯಲ್ಲಿ ದೂರನ್ನೂ ನೀಡಿದ್ದಾರೆ.
ಮಹಮ್ಮದ್ ಸಿದ್ದಿಕ್ ಈಗಾಗಲೇ ಎರಡು- ಮೂರು ಮದುವೆಯಾಗಿದ್ದಾನೆ ಎನ್ನುವ ಮಾಹಿತಿಗಳಿವೆ. ಅಲ್ಲದೆ, ಮಂಗಳೂರು ಮತ್ತು ಕೊಡಗಿನಲ್ಲಿ ಡ್ರಗ್ಸ್ ಪೂರೈಸುತ್ತಿರುವ ವಹಿವಾಟು ನಡೆಸುತ್ತಿದ್ದಾನೆ ಎಂದು ವಿಶ್ವ ಹಿಂದು ಪರಿಷತ್ ನಾಯಕರು ಆರೋಪಿಸಿದ್ದಾರೆ. ಕೂಡಲೇ ಆರೋಪಿಯನ್ನು ಬಂಧಿಸಿ, ಡ್ರಗ್ಸ್ ಸೆಕ್ಸ್ ಜಿಹಾದಿಗೆ ಬಲಿಯಾಗಿರುವ ಯುವತಿಗೆ ನ್ಯಾಯ ಕೊಡಿಸಬೇಕೆಂದು ವಿಹಿಂಪ ನಾಯಕ ಶರಣ್ ಪಂಪ್ವೆಲ್ ಒತ್ತಾಯಿಸಿದ್ದಾರೆ.
Mangalore Christian girl cheated of Love and sex victims mother approaches VHP for help.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm