ಬ್ರೇಕಿಂಗ್ ನ್ಯೂಸ್
26-12-21 01:10 pm Mangalore Correspondent ಕ್ರೈಂ
ಮಂಗಳೂರು, ಡಿ.26 : ಕ್ರಿಸ್ತಿಯನ್ ಹುಡುಗಿಯನ್ನು ಮದುವೆಯಾಗುವುದಾಗಿ ನಂಬಿಸಿ, ಡ್ರಗ್ಸ್ ಕೊಟ್ಟು ಲೈಂಗಿಕವಾಗಿ ದುರ್ಬಳಕೆ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದ್ದು ಈ ಬಗ್ಗೆ ನೊಂದ ಹುಡುಗಿಯ ತಾಯಿ ಮಂಗಳೂರಿನ ವಿಶ್ವ ಹಿಂದು ಪರಿಷತ್ ಮುಖಂಡರಿಗೆ ರಕ್ಷಣೆಗೆ ಮನವಿ ಮಾಡಿದ್ದಾರೆ.
ಯುವತಿ ಮಂಗಳೂರಿನ ಬಿಜೈ ನಿವಾಸಿಯಾಗಿದ್ದು ಆಕೆಯನ್ನು ಕಾಟಿಪಳ್ಳದ ಕೃಷ್ಣಾಪುರ ನಿವಾಸಿ ಮಹಮ್ಮದ್ ಶರೀಫ್ ಸಿದ್ದಿಕ್ ಎಂಬಾತ ಕಳೆದ ಮೂರು ವರ್ಷಗಳಿಂದ ದುರುಪಯೋಗ ಮಾಡುತ್ತಿದ್ದಾನೆ ಎಂದು ದೂರಲಾಗಿದೆ. ಸಿದ್ದಿಕ್ ಮಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಆಗಿದ್ದು ಹಲವಾರು ಕೇಸು ಎದುರಿಸುತ್ತಿದ್ದಾನೆ ಎನ್ನಲಾಗಿದೆ.
ಯುವತಿ ಅಲೋಶಿಯಸ್ ಕಾಲೇಜಿನಲ್ಲಿ ಕಾಲೇಜು ಮುಗಿಸಿದ್ದು ಅಲ್ಲಿಯೇ ಡ್ರಗ್ಸ್ ಚಟ ಹತ್ತಿಸಿಕೊಂಡಿದ್ದಳು. ಆನಂತರ ಡ್ರಗ್ಸ್ ಇಲ್ಲದೆ ಬದುಕುವುದೇ ಅಸಾಧ್ಯ ಎನ್ನುವಷ್ಟರ ಮಟ್ಟಿಗೆ ಡ್ರಗ್ಸ್ ಚಟಕ್ಕೆ ಬಿದ್ದಿದ್ದಳು. ನಡುರಾತ್ರಿಯಲ್ಲಿ ಬೈಕಿನಲ್ಲಿ ಬರುವ ಯುವಕರು ಯುವತಿಯನ್ನು ಕರೆದೊಯ್ಯುತ್ತಿದ್ದು ಆಬಳಿಕ ಹಲವು ದಿನಗಳ ಕಾಲ ಇಟ್ಟುಕೊಳ್ಳುತ್ತಿದ್ದರು. ಮಗಳು ಎಲ್ಲಿದ್ದಾಳೆ ಎನ್ನುವುದು ತಿಳಿಯದೆ ಹೆತ್ತವರು ಆತಂಕಕ್ಕೆ ಒಳಗಾಗುತ್ತಿದ್ದರು. ಮಗಳ ಈ ರೀತಿಯ ನಡತೆಯಿಂದ ತೀವ್ರ ಬೇಸತ್ತಿದ್ದ ತಂದೆ ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾಗಿ ಸಾವು ಕಂಡಿದ್ದರು.

ಯುವತಿ ತನ್ನನ್ನು ಸಿದ್ದಿಕ್ ಮದುವೆಯಾಗುವುದಾಗಿ ಹೇಳುತ್ತಿದ್ದು ಅದೇ ಭ್ರಮೆಯಲ್ಲಿ ಆತನ ಜೊತೆ ತಿರುಗಾಡುತ್ತಿದ್ದಾಳೆ. ಈ ಬಗ್ಗೆ ಯುವತಿಯ ತಾಯಿ ಕ್ರಿಸ್ತಿಯನ್ ಧರ್ಮಗುರುಗಳಿಗೂ ದೂರು ನೀಡಿದ್ದಾರೆ. ಅಲ್ಲದೆ, ಉರ್ವಾ ಠಾಣೆಯಲ್ಲಿ ದೂರನ್ನೂ ನೀಡಿದ್ದಾರೆ.
ಮಹಮ್ಮದ್ ಸಿದ್ದಿಕ್ ಈಗಾಗಲೇ ಎರಡು- ಮೂರು ಮದುವೆಯಾಗಿದ್ದಾನೆ ಎನ್ನುವ ಮಾಹಿತಿಗಳಿವೆ. ಅಲ್ಲದೆ, ಮಂಗಳೂರು ಮತ್ತು ಕೊಡಗಿನಲ್ಲಿ ಡ್ರಗ್ಸ್ ಪೂರೈಸುತ್ತಿರುವ ವಹಿವಾಟು ನಡೆಸುತ್ತಿದ್ದಾನೆ ಎಂದು ವಿಶ್ವ ಹಿಂದು ಪರಿಷತ್ ನಾಯಕರು ಆರೋಪಿಸಿದ್ದಾರೆ. ಕೂಡಲೇ ಆರೋಪಿಯನ್ನು ಬಂಧಿಸಿ, ಡ್ರಗ್ಸ್ ಸೆಕ್ಸ್ ಜಿಹಾದಿಗೆ ಬಲಿಯಾಗಿರುವ ಯುವತಿಗೆ ನ್ಯಾಯ ಕೊಡಿಸಬೇಕೆಂದು ವಿಹಿಂಪ ನಾಯಕ ಶರಣ್ ಪಂಪ್ವೆಲ್ ಒತ್ತಾಯಿಸಿದ್ದಾರೆ.
Mangalore Christian girl cheated of Love and sex victims mother approaches VHP for help.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm