ಬ್ರೇಕಿಂಗ್ ನ್ಯೂಸ್
26-12-21 01:10 pm Mangalore Correspondent ಕ್ರೈಂ
ಮಂಗಳೂರು, ಡಿ.26 : ಕ್ರಿಸ್ತಿಯನ್ ಹುಡುಗಿಯನ್ನು ಮದುವೆಯಾಗುವುದಾಗಿ ನಂಬಿಸಿ, ಡ್ರಗ್ಸ್ ಕೊಟ್ಟು ಲೈಂಗಿಕವಾಗಿ ದುರ್ಬಳಕೆ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದ್ದು ಈ ಬಗ್ಗೆ ನೊಂದ ಹುಡುಗಿಯ ತಾಯಿ ಮಂಗಳೂರಿನ ವಿಶ್ವ ಹಿಂದು ಪರಿಷತ್ ಮುಖಂಡರಿಗೆ ರಕ್ಷಣೆಗೆ ಮನವಿ ಮಾಡಿದ್ದಾರೆ.
ಯುವತಿ ಮಂಗಳೂರಿನ ಬಿಜೈ ನಿವಾಸಿಯಾಗಿದ್ದು ಆಕೆಯನ್ನು ಕಾಟಿಪಳ್ಳದ ಕೃಷ್ಣಾಪುರ ನಿವಾಸಿ ಮಹಮ್ಮದ್ ಶರೀಫ್ ಸಿದ್ದಿಕ್ ಎಂಬಾತ ಕಳೆದ ಮೂರು ವರ್ಷಗಳಿಂದ ದುರುಪಯೋಗ ಮಾಡುತ್ತಿದ್ದಾನೆ ಎಂದು ದೂರಲಾಗಿದೆ. ಸಿದ್ದಿಕ್ ಮಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಆಗಿದ್ದು ಹಲವಾರು ಕೇಸು ಎದುರಿಸುತ್ತಿದ್ದಾನೆ ಎನ್ನಲಾಗಿದೆ.
ಯುವತಿ ಅಲೋಶಿಯಸ್ ಕಾಲೇಜಿನಲ್ಲಿ ಕಾಲೇಜು ಮುಗಿಸಿದ್ದು ಅಲ್ಲಿಯೇ ಡ್ರಗ್ಸ್ ಚಟ ಹತ್ತಿಸಿಕೊಂಡಿದ್ದಳು. ಆನಂತರ ಡ್ರಗ್ಸ್ ಇಲ್ಲದೆ ಬದುಕುವುದೇ ಅಸಾಧ್ಯ ಎನ್ನುವಷ್ಟರ ಮಟ್ಟಿಗೆ ಡ್ರಗ್ಸ್ ಚಟಕ್ಕೆ ಬಿದ್ದಿದ್ದಳು. ನಡುರಾತ್ರಿಯಲ್ಲಿ ಬೈಕಿನಲ್ಲಿ ಬರುವ ಯುವಕರು ಯುವತಿಯನ್ನು ಕರೆದೊಯ್ಯುತ್ತಿದ್ದು ಆಬಳಿಕ ಹಲವು ದಿನಗಳ ಕಾಲ ಇಟ್ಟುಕೊಳ್ಳುತ್ತಿದ್ದರು. ಮಗಳು ಎಲ್ಲಿದ್ದಾಳೆ ಎನ್ನುವುದು ತಿಳಿಯದೆ ಹೆತ್ತವರು ಆತಂಕಕ್ಕೆ ಒಳಗಾಗುತ್ತಿದ್ದರು. ಮಗಳ ಈ ರೀತಿಯ ನಡತೆಯಿಂದ ತೀವ್ರ ಬೇಸತ್ತಿದ್ದ ತಂದೆ ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾಗಿ ಸಾವು ಕಂಡಿದ್ದರು.

ಯುವತಿ ತನ್ನನ್ನು ಸಿದ್ದಿಕ್ ಮದುವೆಯಾಗುವುದಾಗಿ ಹೇಳುತ್ತಿದ್ದು ಅದೇ ಭ್ರಮೆಯಲ್ಲಿ ಆತನ ಜೊತೆ ತಿರುಗಾಡುತ್ತಿದ್ದಾಳೆ. ಈ ಬಗ್ಗೆ ಯುವತಿಯ ತಾಯಿ ಕ್ರಿಸ್ತಿಯನ್ ಧರ್ಮಗುರುಗಳಿಗೂ ದೂರು ನೀಡಿದ್ದಾರೆ. ಅಲ್ಲದೆ, ಉರ್ವಾ ಠಾಣೆಯಲ್ಲಿ ದೂರನ್ನೂ ನೀಡಿದ್ದಾರೆ.
ಮಹಮ್ಮದ್ ಸಿದ್ದಿಕ್ ಈಗಾಗಲೇ ಎರಡು- ಮೂರು ಮದುವೆಯಾಗಿದ್ದಾನೆ ಎನ್ನುವ ಮಾಹಿತಿಗಳಿವೆ. ಅಲ್ಲದೆ, ಮಂಗಳೂರು ಮತ್ತು ಕೊಡಗಿನಲ್ಲಿ ಡ್ರಗ್ಸ್ ಪೂರೈಸುತ್ತಿರುವ ವಹಿವಾಟು ನಡೆಸುತ್ತಿದ್ದಾನೆ ಎಂದು ವಿಶ್ವ ಹಿಂದು ಪರಿಷತ್ ನಾಯಕರು ಆರೋಪಿಸಿದ್ದಾರೆ. ಕೂಡಲೇ ಆರೋಪಿಯನ್ನು ಬಂಧಿಸಿ, ಡ್ರಗ್ಸ್ ಸೆಕ್ಸ್ ಜಿಹಾದಿಗೆ ಬಲಿಯಾಗಿರುವ ಯುವತಿಗೆ ನ್ಯಾಯ ಕೊಡಿಸಬೇಕೆಂದು ವಿಹಿಂಪ ನಾಯಕ ಶರಣ್ ಪಂಪ್ವೆಲ್ ಒತ್ತಾಯಿಸಿದ್ದಾರೆ.
Mangalore Christian girl cheated of Love and sex victims mother approaches VHP for help.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm