ಬ್ರೇಕಿಂಗ್ ನ್ಯೂಸ್
15-09-20 07:39 pm Headline Karnataka News Network ಕ್ರೈಂ
ಆಲಪ್ಪುಳ, ಸೆಪ್ಟೆಂಬರ್15: ಸೆಲ್ಫಿ ಹುಚ್ಚಿನಿಂದ ಏನೆಲ್ಲ ದುರಂತ ಎದುರಾದ್ರೂ ಜನರು ಎಚ್ಚತ್ತುಕೊಂಡಿಲ್ಲ. ಇಲ್ಲೊಬ್ಬಳು ತಾಯಿ, ಬೀಚ್ ನಲ್ಲಿ ನಿಂತು ಮಗುವಿನ ಜೊತೆ ಸೆಲ್ಫೀ ಕ್ಲಿಕ್ಕಿಸಲು ಹೋಗಿ ಮಗುವನ್ನೇ ಕಳಕೊಂಡಿದ್ದಾಳೆ. ತಾಯಿಯ ಸೆಲ್ಫೀ ಹುಚ್ಚಿನಿಂದಾಗಿ ಕೈನಲ್ಲಿ ಹಿಡಿದುಕೊಂಡಿದ್ದ ಎರಡು ವರ್ಷದ ಮಗು ಸಮುದ್ರಪಾಲಾದ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ.
ಭಾನುವಾರ ಸಂಜೆ ಘಟನೆ ನಡೆದಿದ್ದು ಪೊಲೀಸರು ಮತ್ತು ಸ್ಥಳೀಯರ ಹುಡುಕಾಟದ ಬಳಿಕ ಮಗುವಿನ ಶವ ಎರಡು ದಿನಗಳ ನಂತರ ಆಲಪ್ಪುಳದ ಗೆಲಿಲಿಯೋ ಬೀಚ್ ನಲ್ಲಿ ಪತ್ತೆಯಾಗಿದೆ. ಮೃತ ಮಗುವಿನ ಹೆಸರು ಅಧಿಕೃಷ್ಣ ಎಂದು ದಿ ಹಿಂದು ಪತ್ರಿಕೆ ವರದಿ ಮಾಡಿದೆ. ತಟರಕ್ಷಣಾ ಪಡೆ ಮತ್ತು ಸ್ಥಳೀಯ ಮೀನುಗಾರರು ಪತ್ತೆ ಕಾರ್ಯಾಚರಣೆ ನಡೆಸಿದ್ದರು.
ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ತನ್ನಿಬ್ಬರು ಮಕ್ಕಳು ಮತ್ತು ಸದರನ ಇನ್ನೊಂದು ಮಗುವಿನ ಜೊತೆ ಬೀಚ್ ನೋಡಲು ಬಂದಿದ್ದರು. ಸಮುದ್ರ ಅಬ್ಬರ ಹೆಚ್ಚಿದ್ದರಿಂದ ಅಲ್ಲಿನ ಸೆಕ್ಯುರಿಟಿ ಬೀಚ್ ಹೋಗದಂತೆ ತಡೆಯುತ್ತಿದ್ದ. ಆದರೆ ತಾಯಿ, ಮಕ್ಕಳು ಸೆಕ್ಯುರಿಟಿಯ ಕಣ್ಣು ತಪ್ಪಿಸಿ ಅಲ್ಲಿನ ಇಎಸ್ಐ ಆಸ್ಪತ್ರೆಯ ಎಡೆಯಿಂದ ನುಸುಳಿಕೊಂಡು ಬೀಚ್ ನತ್ತ ಬಂದಿದ್ದರು. ಬೀಚ್ ನಲ್ಲಿ ಮಕ್ಕಳ ಜೊತೆ ನಿಂತು ಸೆಲ್ಫಿ ಕ್ಲಿಕ್ಕಿಸುತ್ತಿದ್ದಾಗ ಬೃಹತ್ ಅಲೆಯೊಂದು ಎದ್ದು ಬಂದಿದ್ದು ತಾಯಿ, ಮಕ್ಕಳು ಬ್ಯಾಲೆನ್ಸ್ ತಪ್ಪಿ ನೀರಿಗೆ ಬಿದ್ದಿದ್ದಾರೆ. ಈ ವೇಳೆ, ದೂರದಲ್ಲಿ ನಿಂತಿದ್ದ ಸಂಬಂಧಿಕನೊಬ್ಬ ಓಡಿ ಬಂದು ಮಹಿಳೆ ಮತ್ತು ಆರು ಮತ್ತು ಏಳು ವರ್ಷದ ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಈ ವೇಳೆ ಎರಡೂವರೆ ವರ್ಷದ ಮಗು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಒಂದು ಕ್ಷಣದ ಮೈಮರೆವು ಮಗುವನ್ನು ಬಲಿ ತೆಗೆದುಕೊಂಡಿತ್ತು.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am