ಬ್ರೇಕಿಂಗ್ ನ್ಯೂಸ್
15-09-20 07:39 pm Headline Karnataka News Network ಕ್ರೈಂ
ಆಲಪ್ಪುಳ, ಸೆಪ್ಟೆಂಬರ್15: ಸೆಲ್ಫಿ ಹುಚ್ಚಿನಿಂದ ಏನೆಲ್ಲ ದುರಂತ ಎದುರಾದ್ರೂ ಜನರು ಎಚ್ಚತ್ತುಕೊಂಡಿಲ್ಲ. ಇಲ್ಲೊಬ್ಬಳು ತಾಯಿ, ಬೀಚ್ ನಲ್ಲಿ ನಿಂತು ಮಗುವಿನ ಜೊತೆ ಸೆಲ್ಫೀ ಕ್ಲಿಕ್ಕಿಸಲು ಹೋಗಿ ಮಗುವನ್ನೇ ಕಳಕೊಂಡಿದ್ದಾಳೆ. ತಾಯಿಯ ಸೆಲ್ಫೀ ಹುಚ್ಚಿನಿಂದಾಗಿ ಕೈನಲ್ಲಿ ಹಿಡಿದುಕೊಂಡಿದ್ದ ಎರಡು ವರ್ಷದ ಮಗು ಸಮುದ್ರಪಾಲಾದ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ.
ಭಾನುವಾರ ಸಂಜೆ ಘಟನೆ ನಡೆದಿದ್ದು ಪೊಲೀಸರು ಮತ್ತು ಸ್ಥಳೀಯರ ಹುಡುಕಾಟದ ಬಳಿಕ ಮಗುವಿನ ಶವ ಎರಡು ದಿನಗಳ ನಂತರ ಆಲಪ್ಪುಳದ ಗೆಲಿಲಿಯೋ ಬೀಚ್ ನಲ್ಲಿ ಪತ್ತೆಯಾಗಿದೆ. ಮೃತ ಮಗುವಿನ ಹೆಸರು ಅಧಿಕೃಷ್ಣ ಎಂದು ದಿ ಹಿಂದು ಪತ್ರಿಕೆ ವರದಿ ಮಾಡಿದೆ. ತಟರಕ್ಷಣಾ ಪಡೆ ಮತ್ತು ಸ್ಥಳೀಯ ಮೀನುಗಾರರು ಪತ್ತೆ ಕಾರ್ಯಾಚರಣೆ ನಡೆಸಿದ್ದರು.
ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ತನ್ನಿಬ್ಬರು ಮಕ್ಕಳು ಮತ್ತು ಸದರನ ಇನ್ನೊಂದು ಮಗುವಿನ ಜೊತೆ ಬೀಚ್ ನೋಡಲು ಬಂದಿದ್ದರು. ಸಮುದ್ರ ಅಬ್ಬರ ಹೆಚ್ಚಿದ್ದರಿಂದ ಅಲ್ಲಿನ ಸೆಕ್ಯುರಿಟಿ ಬೀಚ್ ಹೋಗದಂತೆ ತಡೆಯುತ್ತಿದ್ದ. ಆದರೆ ತಾಯಿ, ಮಕ್ಕಳು ಸೆಕ್ಯುರಿಟಿಯ ಕಣ್ಣು ತಪ್ಪಿಸಿ ಅಲ್ಲಿನ ಇಎಸ್ಐ ಆಸ್ಪತ್ರೆಯ ಎಡೆಯಿಂದ ನುಸುಳಿಕೊಂಡು ಬೀಚ್ ನತ್ತ ಬಂದಿದ್ದರು. ಬೀಚ್ ನಲ್ಲಿ ಮಕ್ಕಳ ಜೊತೆ ನಿಂತು ಸೆಲ್ಫಿ ಕ್ಲಿಕ್ಕಿಸುತ್ತಿದ್ದಾಗ ಬೃಹತ್ ಅಲೆಯೊಂದು ಎದ್ದು ಬಂದಿದ್ದು ತಾಯಿ, ಮಕ್ಕಳು ಬ್ಯಾಲೆನ್ಸ್ ತಪ್ಪಿ ನೀರಿಗೆ ಬಿದ್ದಿದ್ದಾರೆ. ಈ ವೇಳೆ, ದೂರದಲ್ಲಿ ನಿಂತಿದ್ದ ಸಂಬಂಧಿಕನೊಬ್ಬ ಓಡಿ ಬಂದು ಮಹಿಳೆ ಮತ್ತು ಆರು ಮತ್ತು ಏಳು ವರ್ಷದ ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಈ ವೇಳೆ ಎರಡೂವರೆ ವರ್ಷದ ಮಗು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಒಂದು ಕ್ಷಣದ ಮೈಮರೆವು ಮಗುವನ್ನು ಬಲಿ ತೆಗೆದುಕೊಂಡಿತ್ತು.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm