ಬ್ರೇಕಿಂಗ್ ನ್ಯೂಸ್
04-01-22 12:45 pm HK Desk news ಕ್ರೈಂ
ಥಾಣೆ, ಜ.3 : ಮನೆಯಲ್ಲಿ 50 ರೂಪಾಯಿ ಕದ್ದಿದ್ದಕ್ಕೆ ಮಗನನ್ನು ಸಾಯುವ ಮಟ್ಟಕ್ಕೆ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ ತಂದೆಯನ್ನು ಕಲ್ವಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಿರಣ್(10) ತಂದೆಯ ಹೊಡೆತಕ್ಕೆ ಸಾವನ್ನಪ್ಪಿರುವ ಬಾಲಕ. ಬಬ್ಲು ಓಮ್ಪ್ರಕಾಶ್ ಪ್ರಜಾಪತಿ(41) ಕೊಲೆ ಮಾಡಿರುವ ಆರೋಪಿ.
ಕಲ್ವಾ ಠಾಣೆಯ ವ್ಯಾಪ್ತಿ ಥಕುರ್ಪದ ಕೊಳೆಗೇರಿಯಲ್ಲಿ ಈ ಘಟನೆ ನಡೆದಿದ್ದು, ಕಳೆದ ಡಿ.29ರಂದು ರಾತ್ರಿ ಕಿರಣ್ನನ್ನು ತಂದೆ ಥಳಿಸಿದಾಗ ಆತನ ಏಟಿಗೆ ಮಗ ರಾತ್ರಿಯೆಲ್ಲ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಬಳಿಕ ಜೈ ಮಾ ಸಂತೋಷಿ ಚಾವಲ್ನ ಗೈಯ್ಕರ್ ಮೈದಾನ್ನಲ್ಲಿ ಬ್ಲಾಂಕೆಟ್ನಿಂದ ಸುತ್ತಿದ್ದ ಹಲವು ಗಾಯಗಳ ಗುರುತುಗಳಿದ್ದ ಬಾಲಕನನ್ನು ಕಂಡ ದಾರಿಹೋಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಸ್ಥಳಕ್ಕೆ ದೌಡಾಯಿಸಿದ ಕಾಲ್ವ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಕೂಡಲೇ ಆತನನ್ನು ಚತ್ರಪತಿ ಶಿವಾಜಿ ಮಹಾರಾಜ್ ಹಾಸ್ಪಟೆಲ್ಗೆ ಕರೆದೊಯ್ದಾಗ ಆತ ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದು, ಬಾಲಕನ ಭುಜ ಮತ್ತು ಕಾಲಿಗೆ ಮುರಿತವಾಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದಿರುವುದರಿಂದ ಆತ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.
ಘಟನೆ ಸಂಬಂಧ ತನಿಖೆ ಕೈಗೊಂಡ ಪೊಲೀಸರು ನೆರೆಹೊರೆಯವರನ್ನು ವಿಚಾರಿಸಿದಾಗ ಬಾಲಕನ ವಿವರಗಳು ಪತ್ತೆಯಾಗಿವೆ. ಬಳಿಕ ಮೃತ ಬಾಲಕನ ಸಹೋದರಿಯಿಂದ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದರು.
ಮಗನನ್ನು ಕೊಂದು ಪರಾರಿಯಾಗಿದ್ದ ತಂದೆ ಓಂಪ್ರಕಾಶ್ ಬಳಿಕ ತನ್ನ ಏರಿಯಾದಲ್ಲಿ ತಿರುಗಾಡುತ್ತಿರುವುದನ್ನು ಖಚಿತಪಡಿಸಿಕೊಂಡ ಪೊಲೀಸರು ಇದೀಗ ಆರೋಪಿಯನ್ನು ಹಿಡಿದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Kalwa police arrested a 38-year-old man on Thursday for beating his 10-year-old son to death for stealing ₹50 from his wallet. The father beat him up with different objects on Wednesday night and the boy fell unconscious. The father later wrapped him in a blanket and left him unattended till the next day.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm