ಬ್ರೇಕಿಂಗ್ ನ್ಯೂಸ್
04-01-22 09:44 pm HK Desk news ಕ್ರೈಂ
ಮುಂಬೈ, ಜ.4 : ಮುಸ್ಲಿಂ ಮಹಿಳೆಯರ ಫೋಟೋ ಕದ್ದು ಹರಾಜಿಗಿಟ್ಟ ಪ್ರಕರಣದಲ್ಲಿ ಮುಂಬೈ ಸೈಬರ್ ಪೊಲೀಸರು ಉತ್ತರಾಖಂಡದಲ್ಲಿ ಪ್ರಮುಖ ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.
ಸೋಮವಾರ ಬೆಂಗಳೂರಿನಲ್ಲಿ 21 ವರ್ಷದ ವಿಶಾಲ್ ಕುಮಾರ್ ಎಂಬ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಿ ಮುಂಬೈಗೆ ಒಯ್ದಿದ್ದರು. ಮುಂಬೈನಲ್ಲಿ ಕೋರ್ಟಿಗೆ ಹಾಜರುಪಡಿಸಿ ಜ.10ರ ವರೆಗೆ ಪೊಲೀಸ್ ಕಸ್ಟಡಿ ಪಡೆದಿದ್ದಾರೆ. ಆತನ ಮಾಹಿತಿಯಂತೆ, ಉತ್ತರಾಖಂಡದಲ್ಲಿ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.
ಮಹಿಳೆ ಮತ್ತು ಯುವಕ ಫೇಸ್ಬುಕ್, ಇನ್ ಸ್ಟಾಗ್ರಾಮಿನಲ್ಲಿ ಗೆಳೆಯರಾಗಿದ್ದು ಸಮಾನ ಉದ್ದೇಶದಿಂದ ಸೋಶಿಯಲ್ ಮೀಡಿಯಾದಿಂದ ಮುಸ್ಲಿಮ್ ಮಹಿಳೆಯರ ಫೋಟೋಗಳನ್ನು ತೆಗೆದು ಏಪ್ ಕ್ರಿಯೇಟ್ ಮಾಡಿದ್ದರು. ಗಿಟ್ ಹಬ್ ಅನ್ನುವ ಪ್ಲಾಟ್ ಫಾರಂನಲ್ಲಿ ಬುಲ್ಲಿ ಬಾಯ್ಸ್ ಹೆಸರಲ್ಲಿ ಏಪ್ ಸೃಷ್ಟಿಸಿ ನೂರಕ್ಕೂ ಹೆಚ್ಚು ಮಹಿಳೆಯರ ಫೋಟೋಗಳನ್ನು ಅಪ್ಲೋಡ್ ಮಾಡಿ, ಸಾರ್ವಜನಿಕ ಹರಾಜಿಗೆ ಹಾಕಿದ್ದರು. ಜನವರಿ 1ರಂದು ಈ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಭಾರೀ ಆಕ್ರೋಶ ಕೇಳಿಬಂದಿತ್ತು.
ಬುಲ್ಲಿ ಬಾಯ್ ಪ್ರಕರಣವನ್ನು ದೆಹಲಿ ಪೊಲೀಸರು ಸೈಬರ್ ಸೆಲ್ ಸ್ಪೆಷಲ್ ಯೂನಿಟ್ ವಿಭಾಗಕ್ಕೆ ಹಸ್ತಾಂತರ ಮಾಡಿದ್ದಾರೆ. ಉತ್ತರಾಖಂಡದಲ್ಲಿ ವಶಕ್ಕೆ ಪಡೆದಿರುವ ಮಹಿಳೆಯನ್ನು ಅಲ್ಲಿನ ಕೋರ್ಟಿನಲ್ಲಿ ಹಾಜರು ಪಡಿಸಿ ಟ್ರಾನ್ಸಿಟ್ ವಾರಂಟ್ ಪಡೆದು ಮುಂಬೈಗೆ ಕರೆತರಲಿದ್ದಾರೆ. ಇದೇ ವೇಳೆ, ಮುಂಬೈ ಪೊಲೀಸರು ವಿಶಾಲ್ ಕುಮಾರ್ ಇದ್ದ ಬೆಂಗಳೂರಿನ ಮನೆಯನ್ನು ಸರ್ಚ್ ಮಾಡಲು ವಾರಂಟ್ ಪಡೆದಿದ್ದಾರೆ.
ಕೃತ್ಯದಲ್ಲಿ ಇವರಿಬ್ಬರೇ ಭಾಗಿಯಾಗಿದ್ದೇ ಇನ್ನೂ ಹಲವರಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪ್ರಾಥಮಿಕ ತನಿಖೆಯಲ್ಲಿ ಇವರ ಪಾತ್ರ ಕಂಡುಬಂದಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮುಸ್ಲಿಮ್ ಮಹಿಳೆಯರ ಹರಾಜು ಪ್ರಕರಣ ; ಬೆಂಗಳೂರಿನಲ್ಲಿ ಶಂಕಿತ ಆರೋಪಿ ವಶಕ್ಕೆ
ಮುಸ್ಲಿಂ ಮಹಿಳೆಯರ ಹರಾಜು ; ಬುಲ್ಲಿ ಬಾಯ್ ಬಗ್ಗೆ ಟ್ವಿಟರ್ ಬಳಿ ಮಾಹಿತಿ ಕೇಳಿದ ದೆಹಲಿ ಪೊಲೀಸರು
ಮುಸ್ಲಿಂ ಮಹಿಳೆಯರ ಫೋಟೋ ಕದ್ದು ಸಾರ್ವಜನಿಕ ಹರಾಜಿಗಿಟ್ಟ GitHub ; ದೆಹಲಿಯಲ್ಲಿ ಕಿಡಿ ಎಬ್ಬಿಸಿದ ಸೋಶಿಯಲ್ ಮೀಡಿಯಾ !
A woman has been detained from Uttarakhand by the Mumbai Police in connection with the 'Bulli Bai' controversy. The Mumbai Police has detained a woman, the main accused in the 'Bulli Bai' case -- in which photos of Muslim women were uploaded on an app for 'auction', from Uttarakhand. The woman is being brought to Mumbai for investigation.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm