ಬ್ರೇಕಿಂಗ್ ನ್ಯೂಸ್
13-01-22 08:02 pm HK Desk news ಕ್ರೈಂ
ಬೆಳ್ತಂಗಡಿ, ಜ.13 : ಜಮೀನು ವಿಚಾರದಲ್ಲಿ ತಕರಾರು ಹಿನ್ನೆಲೆಯಲ್ಲಿ ಮಾತಿಗೆ ಮಾತು ಬೆಳೆದು ನೆರೆಮನೆಯ ವ್ಯಕ್ತಿಯೊಬ್ಬ ಯುವಕನನ್ನು ಕತ್ತಿಯಿಂದ ಕಡಿದು ಕೊಂದ ಘಟನೆ ಧರ್ಮಸ್ಥಳ ಠಾಣೆ ವ್ಯಾಪ್ತಿಯ ರೆಖ್ಯ ಗ್ರಾಮದ ದೇವಸ ಎಂಬಲ್ಲಿ ನಡೆದಿದೆ.
ರೆಖ್ಯ ಗ್ರಾಮದ ನಿವಾಸಿ ಸಾಂತಪ್ಪ ಗೌಡ (42) ಮೃತ ವ್ಯಕ್ತಿ. ಸಾಂತಪ್ಪ ಗೌಡ ಎಲ್ಲೈಸಿಯಲ್ಲಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದು, ಇಂದು ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿದ್ದಾಗ ಮನೆ ಬಳಿಯ ಮಣ್ಣಿನ ರಸ್ತೆ ಬದಿಯಲ್ಲಿ ನೆರೆಮನೆಯ ಜಯಚಂದ್ರ ಮತ್ತು ಇತರ ಕೆಲಸದಾಳುಗಳು ಕೆಲಸ ಮಾಡುತ್ತಿದ್ದರು.

ರಸ್ತೆಯ ಇಕ್ಕೆಲಗಳನ್ನು ಸವರಿ ಸರಿಪಡಿಸುತ್ತಿದ್ದಾಗ ಅದನ್ನು ನೋಡಿದ ಸಾಂತಪ್ಪ ಗೌಡ ಆಕ್ಷೇಪಿಸಿದ್ದಾರೆ. ರಸ್ತೆಯ ಭಾಗದಲ್ಲಿ ಹುಲ್ಲು ಸವರುತ್ತಿದ್ದುದನ್ನು ಪ್ರಶ್ನೆ ಮಾಡಿದ್ದು, ಇದೇ ವಿಚಾರದಲ್ಲಿ ಜಯಚಂದ್ರ ಮತ್ತು ಸಾಂತಪ್ಪ ಗೌಡರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ವೇಳೆ, ಜಯಚಂದ್ರ ತನ್ನ ಕೈಯಲ್ಲಿದ್ದ ಕತ್ತಿಯಿಂದ ಏಕಾಏಕಿ ಸಾಂತಪ್ಪ ಗೌಡನ ಕುತ್ತಿಗೆ ಮತ್ತು ತಲೆಗೆ ಕಡಿದಿದ್ದು ಆತ ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಇದೇ ವೇಳೆ, ಸಾಂತಪ್ಪ ಗೌಡನ ಅಕ್ಕ ಮೀನಾಕ್ಷಿ ಮತ್ತು ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಮಾಡುತ್ತಿದ್ದ ಜೋಸೆಫ್ ಓಡಿ ಬಂದಿದ್ದು, ಅಷ್ಟರಲ್ಲಿ ಜಯಚಂದ್ರ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾನೆ. ಈ ಬಗ್ಗೆ ಮೀನಾಕ್ಷಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ.
Belthangady Murder LIC agent hacked to death by neighbour over land dispute. The deceased has been identified as Santappa Gowda.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm