ಬ್ರೇಕಿಂಗ್ ನ್ಯೂಸ್
13-01-22 08:02 pm HK Desk news ಕ್ರೈಂ
ಬೆಳ್ತಂಗಡಿ, ಜ.13 : ಜಮೀನು ವಿಚಾರದಲ್ಲಿ ತಕರಾರು ಹಿನ್ನೆಲೆಯಲ್ಲಿ ಮಾತಿಗೆ ಮಾತು ಬೆಳೆದು ನೆರೆಮನೆಯ ವ್ಯಕ್ತಿಯೊಬ್ಬ ಯುವಕನನ್ನು ಕತ್ತಿಯಿಂದ ಕಡಿದು ಕೊಂದ ಘಟನೆ ಧರ್ಮಸ್ಥಳ ಠಾಣೆ ವ್ಯಾಪ್ತಿಯ ರೆಖ್ಯ ಗ್ರಾಮದ ದೇವಸ ಎಂಬಲ್ಲಿ ನಡೆದಿದೆ.
ರೆಖ್ಯ ಗ್ರಾಮದ ನಿವಾಸಿ ಸಾಂತಪ್ಪ ಗೌಡ (42) ಮೃತ ವ್ಯಕ್ತಿ. ಸಾಂತಪ್ಪ ಗೌಡ ಎಲ್ಲೈಸಿಯಲ್ಲಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದು, ಇಂದು ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿದ್ದಾಗ ಮನೆ ಬಳಿಯ ಮಣ್ಣಿನ ರಸ್ತೆ ಬದಿಯಲ್ಲಿ ನೆರೆಮನೆಯ ಜಯಚಂದ್ರ ಮತ್ತು ಇತರ ಕೆಲಸದಾಳುಗಳು ಕೆಲಸ ಮಾಡುತ್ತಿದ್ದರು.

ರಸ್ತೆಯ ಇಕ್ಕೆಲಗಳನ್ನು ಸವರಿ ಸರಿಪಡಿಸುತ್ತಿದ್ದಾಗ ಅದನ್ನು ನೋಡಿದ ಸಾಂತಪ್ಪ ಗೌಡ ಆಕ್ಷೇಪಿಸಿದ್ದಾರೆ. ರಸ್ತೆಯ ಭಾಗದಲ್ಲಿ ಹುಲ್ಲು ಸವರುತ್ತಿದ್ದುದನ್ನು ಪ್ರಶ್ನೆ ಮಾಡಿದ್ದು, ಇದೇ ವಿಚಾರದಲ್ಲಿ ಜಯಚಂದ್ರ ಮತ್ತು ಸಾಂತಪ್ಪ ಗೌಡರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ವೇಳೆ, ಜಯಚಂದ್ರ ತನ್ನ ಕೈಯಲ್ಲಿದ್ದ ಕತ್ತಿಯಿಂದ ಏಕಾಏಕಿ ಸಾಂತಪ್ಪ ಗೌಡನ ಕುತ್ತಿಗೆ ಮತ್ತು ತಲೆಗೆ ಕಡಿದಿದ್ದು ಆತ ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಇದೇ ವೇಳೆ, ಸಾಂತಪ್ಪ ಗೌಡನ ಅಕ್ಕ ಮೀನಾಕ್ಷಿ ಮತ್ತು ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಮಾಡುತ್ತಿದ್ದ ಜೋಸೆಫ್ ಓಡಿ ಬಂದಿದ್ದು, ಅಷ್ಟರಲ್ಲಿ ಜಯಚಂದ್ರ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾನೆ. ಈ ಬಗ್ಗೆ ಮೀನಾಕ್ಷಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ.
Belthangady Murder LIC agent hacked to death by neighbour over land dispute. The deceased has been identified as Santappa Gowda.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm