ಬ್ರೇಕಿಂಗ್ ನ್ಯೂಸ್
14-01-22 04:28 pm HK Desk news ಕ್ರೈಂ
ತಿರುವನಂತಪುರ, ಜ.14 : ಸಿಸ್ಟರ್ ಅತ್ಯಾಚಾರ ಪ್ರಕರಣದಲ್ಲಿ ರಾಷ್ಟ್ರದ ಗಮನ ಸೆಳೆದಿದ್ದ ಆರೋಪಿ ಕೆಥೋಲಿಕ್ ಬಿಷಪ್ ಫ್ರಾಂಕೋ ಮುಲ್ಲಕ್ಕಲ್ ಅವರನ್ನು ಕೊಟ್ಟಾಯಂ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆರೋಪದಿಂದ ಮುಕ್ತಗೊಳಿಸಿ ತೀರ್ಪು ನೀಡಿದೆ.
105 ದಿನಗಳ ವಿಚಾರಣೆ, 39 ಮಂದಿ ಸಾಕ್ಷಿಗಳು, 122 ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ ಬಳಿಕ ನ್ಯಾಯಾಧೀಶ ಗೋಪಕುಮಾರ್, ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಆರೋಪಿಯನ್ನು ಖುಲಾಸೆಗೊಳಿಸಿದ್ದಾರೆ. ಫ್ರಾಂಕೋ ಮುಲ್ಲಕ್ಕಾಲ್ ಜಲಂಧರ್ ಡಯಾಸಿಸ್ ವಿಭಾಗದ ಬಿಷಪ್ ಆಗಿದ್ದಾಗ 2014-16ರಲ್ಲಿ ಕೇರಳದ 46 ವರ್ಷದ ನನ್ ಒಬ್ಬರನ್ನು ಅತ್ಯಾಚಾರ ನಡೆಸಿದ್ದಾರೆ ಎಂದು ಪ್ರಕರಣ ದಾಖಲಾಗಿತ್ತು.
ಕೇರಳಕ್ಕೆ ಭೇಟಿ ನೀಡುತ್ತಿದ್ದಾಗ ಎರಡು ವರ್ಷದ ಅವಧಿಯಲ್ಲಿ 13 ಬಾರಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದರು ಎಂದು ಸಿಸ್ಟರ್ ಆರೋಪಿಸಿದ್ದರು. 2018ರ ಜೂನ್ ನಲ್ಲಿ ಬಿಷಪ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆನಂತರ ಜಲಂಧರ್ ಬಿಷಪ್ ಹುದ್ದೆಯಿಂದ ತೆರವು ಮಾಡಲಾಗಿತ್ತು. 2018ರ ಸೆಪ್ಟಂಬರ್ 21ರಂದು ಮುಲ್ಲಕ್ಕಾಲ್ ಅವರನ್ನು ಬಂಧಿಸಲಾಗಿತ್ತು. ಒಂದು ತಿಂಗಳ ನಂತರ ಅಕ್ಟೋಬರ್ 18ರಂದು ಫ್ರಾಂಕೋ ಮುಲ್ಲಕ್ಕಾಲ್ ಜಾಮೀನಿನಲ್ಲಿ ಬಿಡುಗಡೆಯಾಗಿದ್ದರು.

ಆನಂತರ ತನಿಖೆ ನಡೆಸಿದ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದು, 83 ಸಾಕ್ಷಿಗಳನ್ನು ಕಲೆಹಾಕಿದ್ದರು. ಸೀರೋ ಮಲಬಾರ್ ಕೆಥೋಲಿಕ್ ಚರ್ಚ್ ಕಾರ್ಡಿನಲ್ ಜಾರ್ಜ್ ಆಲಂಚೇರಿ, ಮೂರು ಬಿಷಪ್, 11 ಪಾದ್ರಿಗಳು, 22 ಸಿಸ್ಟರ್ ಗಳು ಪ್ರಕರಣದಲ್ಲಿ ಸಾಕ್ಷಿಯಾಗಿದ್ದರು. ಈ ಪೈಕಿ 39 ಮಂದಿ ಸಾಕ್ಷ್ಯ ಹೇಳಲು ಕೋರ್ಟಿಗೆ ಹಾಜರಾಗಿದ್ದರು. ಈ ನಡುವೆ, ತನ್ನ ಮೇಲೆ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೇರಳ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿಗೂ ಫ್ರಾಂಕೋ ಮುಲ್ಲಕ್ಕಲ್ ಅರ್ಜಿ ಸಲ್ಲಿಸಿದ್ದರು. ಆದರೆ ಮೇಲಿನ ಕೋರ್ಟ್ ಗಳು ಪ್ರಕರಣ ರದ್ದು ಪಡಿಸಲು ನಿರಾಕರಿಸಿದ್ದವು.
ಕೋರ್ಟಿನಲ್ಲಿ ಖುಲಾಸೆಗೊಳ್ಳುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಫ್ರಾಂಕೋ ಮುಲ್ಲಕ್ಕಾಲ್, ದೇವರ ಮೇಲಿನ ಪ್ರಾರ್ಥನೆ ಫಲಿಸಿತು. ದೇವರು ಕೊನೆಗೂ ಸತ್ಯ ತೋರಿಸಿದ್ದಾನೆ ಎಂದು ಹೇಳಿದ್ದಾರೆ. ಆದರೆ, ತನಿಖೆ ನಡೆಸಿದ್ದ ಕೊಟ್ಟಾಯಂ ಎಸ್ಪಿ ಹರಿಸೇಖರನ್ ನ್ಯಾಯಾಧೀಶರ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಮೇಲಿನ ಕೋರ್ಟಿನಲ್ಲಿ ಪ್ರಶ್ನೆ ಮಾಡುವುದಾಗಿ ತಿಳಿಸಿದ್ದಾರೆ.
Thiruvananthapuram, A special court in Kottayam is set to deliver its verdict in the 2018 rape case against former Bishop of Jalandhar Franco Mulakkal, officials familiar with developments said on Thursday. In June 2018, a nun had accused Mulakkal of sexually abusing her several times between 2014 and 2016.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm