ಬ್ರೇಕಿಂಗ್ ನ್ಯೂಸ್
14-01-22 11:14 pm HK Desk news ಕ್ರೈಂ
ಪುತ್ತೂರು, ಜ.14 : ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭಪಾತ ಮಾಡಿಸಿದ ಪ್ರಕರಣದಲ್ಲಿ ಆರೋಪಿ ಕಡಬ ಪೊಲೀಸ್ ಪೇದೆಗೆ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.
ಪ್ರಕರಣದಲ್ಲಿ ಆರೋಪಿ ಕಡಬ ಪೊಲೀಸ್ ಪೇದೆ ಶಿವರಾಜ್ ನನ್ನು ಕಳೆದ ಸೆಪ್ಟೆಂಬರ್ 28 ರಂದು ಬಂಧಿಸಲಾಗಿತ್ತು. ಆಬಳಿಕ ಆರೋಪಿ ವಿರುದ್ದ ತನಿಖೆ ನಡೆಸಿ ಚಾರ್ಜ್ ಶೀಟ್ ಹಾಕಲಾಗಿದ್ದು ಈ ವೇಳೆ ಆರೋಪಿ ಜೈಲಿನಲ್ಲಿ 100 ದಿನಗಳನ್ನು ಪೂರೈಸಿದ್ದಾನೆ. ಈ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಗಾಗಿ ಪುತ್ತೂರಿನ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದ. ಆದರೆ ಪ್ರಕರಣ ಗಂಭೀರವಾಗಿದ್ದನ್ನು ಪರಿಗಣಿಸಿ ನ್ಯಾಯಾಧೀಶರು ಜಾಮೀನು ನೀಡಲು ನಿರಾಕರಿಸಿದ್ದಾರೆ.
ಎರಡು ವರ್ಷಗಳ ಹಿಂದೆ ಬಾಲಕಿ ತನ್ನ ಮೇಲೆ ಅತ್ಯಾಚಾರ ನಡೆಸಿರುವ ಬಗ್ಗೆ ದೂರು ನೀಡಲು ಕಡಬ ಠಾಣೆಗೆ ಬಂದಿದ್ದಳು. ಇದರಿಂದ ಪರಿಚಯ ಆಗಿದ್ದ ಬಾಲಕಿಯನ್ನು ಆರೋಪಿ ಶಿವರಾಜ್ ಪುಸಲಾಯಿಸಿ, ಆಕೆಯ ಮನೆಗೆ ತೆರಳಲು ಆರಂಭಿಸಿದ್ದ. ಸಮನ್ಸ್ ನೀಡಲು ಬರುತ್ತಿರುವುದಾಗಿ ಹೇಳಿ ಬಾಲಕಿ ಜೊತೆಗೆ ಸಂಬಂಧ ಬೆಳೆಸಿದ್ದ. ಆನಂತರ ಮದುವೆಯಾಗುತ್ತೇನೆಂದು ಹೇಳಿ ಲೈಂಗಿಕ ಸಂಬಂಧ ಮಾಡಿಕೊಂಡಿದ್ದ. ಆಬಳಿಕ ಬಾಲಕಿ ಗರ್ಭ ಧರಿಸಿದ್ದು ಮನೆಯವರು ಸಂಶಯದಿಂದ ತಪಾಸಣೆ ನಡೆಸಿದಾಗ ಐದೂವರೆ ತಿಂಗಳ ಗರ್ಭಿಣಿ ಎಂದು ತಿಳಿದುಬಂದಿತ್ತು. ಈ ಬಗ್ಗೆ ಬಾಲಕಿಯನ್ನು ಮದುವೆಯಾಗಲು ಮನೆಯವರು ಒತ್ತಾಯಿಸಿದ್ದಾರೆ. ಆದರೆ ಆರೋಪಿ ನಿರಾಕರಿಸಿದ್ದರಿಂದ ಆಕೆಯ ತಂದೆ ಕಡಬ ಠಾಣೆಯಲ್ಲಿ ಅತ್ಯಾಚಾರ ದೂರು ನೀಡಿದ್ದರು.
ಇದೇ ವೇಳೆ, ಆರೋಪಿ ಶಿವರಾಜ್ ಬಾಲಕಿಯ ತಾಯಿಗೆ 35 ಸಾವಿರ ಹಣ ಕೊಟ್ಟು ಮಂಗಳೂರಿಗೆ ಕರೆದೊಯ್ದು ಗರ್ಭಪಾತ ಮಾಡಿಸಿದ್ದಾನೆ. ಈ ವಿಷಯ ಮಾಧ್ಯಮದಲ್ಲಿ ಬರುತ್ತಿದ್ದಂತೆ ಆರೋಪಿ ಶಿವರಾಜ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ಆಬಳಿಕ ಶಿವರಾಜ್ ನನ್ನು ಪೊಲೀಸ್ ಸೇವೆಯಿಂದ ವಜಾ ಮಾಡಲಾಗಿತ್ತು.
ಕಡಬ ಠಾಣೆಯಲ್ಲಿ ಆರೋಪಿ ವಿರುದ್ದ ಪ್ರಮುಖ ಸೆಕ್ಷನ್ ಹಾಕಲಾಗಿದ್ದು ಅಪರಾಧವನ್ನು ಎಸ್ಪಿ ಋಷಿಕುಮಾರ್ ಸೋನವಾಣೆ ಗಂಭೀರವಾಗಿ ಪರಿಗಣಿಸಿದ್ದರು. ಒಬ್ಬ ಪೊಲೀಸ್ ಅಧಿಕಾರಿಯಾಗಿ ದೂರುದಾರ ಯುವತಿಯ ಮುಗ್ಧತೆಯನ್ನು ದುರುಪಯೋಗ ಪಡಿಸಿ ಅತ್ಯಾಚಾರ ನಡೆಸಿದ್ದಕ್ಕಾಗಿ 376(2) ಅಡಿ ಮತ್ತು 506 ಎ ಹಾಗೂ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಲಾಗಿತ್ತು.
The court has rejected the bail plea of a police constable who was arrested on charges of sexually exploiting a minor rape survivor. The Puttur Fifth District and Sessions Court gave the order on Thursday.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 09:02 pm
Mangalurur Staffer
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm