ಬ್ರೇಕಿಂಗ್ ನ್ಯೂಸ್
16-01-22 02:21 pm Mangalore Correspondent ಕ್ರೈಂ
ಮಂಗಳೂರು, ಜ.16 : ಎಂಬಿಬಿಎಸ್ ಕಲಿಯುತ್ತಿರುವ ಹಿಂದು ವಿದ್ಯಾರ್ಥಿನಿಗೆ ಮುಸ್ಲಿಂ ಹುಡುಗನ ಜೊತೆ ಸಂಬಂಧ ಇದೆಯೆಂದು ಆಕೆಯ ಫೋಟೋ ಎಡಿಟ್ ಮಾಡಿ, ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ 3ನೇ ವರ್ಷದ ಎಂಬಿಬಿಎಸ್ ಓದುತ್ತಿರುವ ಹಿಂದು ಹುಡುಗಿಯೊಬ್ಬಳ ಫೋಟೋವನ್ನು ಆಕೆಯ ಇನ್ ಸ್ಟಾಗ್ರಾಮ್ ಪೇಜ್ ನಿಂದ ಕದ್ದು ಎಡಿಟ್ ಮಾಡಲಾಗಿತ್ತು. ಈಕೆಗೆ ಮುಲ್ಲಾ ರಹಿಮಾನ್ ಜೊತೆಗೆ ಕುಚಿಕು ಇದೆಯೆಂದು ಬರೆದು ಮುಸ್ಲಿಂ ಹುಡುಗನ ಫೋಟೋ ಜೊತೆಗಿಟ್ಟು ಎಡಿಟ್ ಮಾಡಲಾಗಿತ್ತು. ಈ ಫೋಟೋವನ್ನು ಕೆಲವು ಪೇಜ್ ಗಳಲ್ಲಿ ವೈರಲ್ ಮಾಡಿದ್ದು, ಎಡಿಟೆಡ್ ಫೋಟೋ ವಿದ್ಯಾರ್ಥಿನಿಗೂ ಲಭಿಸಿತ್ತು.
ಇದೇ ವೇಳೆ, ಮುಸ್ಲಿಂ ಹುಡುಗನ ಜೊತೆಗೆ ಹಿಂದು ವಿದ್ಯಾರ್ಥಿನಿಯ ಕುಚಿಕು ಅನ್ನುವ ವಿಚಾರ ಹಿಂದು ಸಂಘಟನೆಗಳ ಕಾರ್ಯಕರ್ತರ ವಿರೋಧಕ್ಕೂ ಕಾರಣವಾಗಿತ್ತು. ಆನಂತರ, ಫೋಟೋಗೂ ಆಕೆಗೂ ಯಾವುದೇ ಸಂಬಂಧ ಇಲ್ಲ ಅನ್ನುವುದು ಕುಟುಂಬಸ್ಥರಿಗೂ ಗೊತ್ತಾಗಿತ್ತು. ಆದರೆ ಎಡಿಟೆಡ್ ಫೋಟೋ ವೈರಲ್ ಆಗುತ್ತಿದ್ದುದರಿಂದ ಪರ – ವಿರೋಧವೂ ಕೇಳಿಬಂದಿತ್ತು. ವಿದ್ಯಾರ್ಥಿನಿ ಕುಟುಂಬಸ್ಥರು ಘಟನೆ ಬಗ್ಗೆ ತನಿಖೆ ನಡೆಸುವಂತೆ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಹಿಂದೆ ಯಾರೋ ದುಷ್ಕರ್ಮಿಗಳಿದ್ದು, ಉದ್ದೇಶ ಪೂರ್ವಕವಾಗಿ ಈ ರೀತಿಯ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Mangalore Mbbs student photo Morphed with Muslim Youth on Instagram, girl files case at women police station. Her photo was edited and stated as Mulla Rahimans Kuchiku with Muslim guy.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 12:51 pm
HK News Staffer
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm