ಬ್ರೇಕಿಂಗ್ ನ್ಯೂಸ್
16-01-22 09:50 pm Mangalore Correspondent ಕ್ರೈಂ
Photo credits : Headline Karnataka
ಮಂಗಳೂರು, ಜ.16 : ಕೃಷ್ಣಾಪುರ ಕಾಟಿಪಳ್ಳ 9ನೇ ಬ್ಲಾಕ್ ನಿವಾಸಿ ಮಹಿಳೆಯೊಬ್ಬರಿಗೆ ಗಂಡ ಅಬ್ದುಲ್ ಖಾದರ್ ಇಸ್ಮಾಯಿಲ್, ಮಾವ ಟಿ.ಎ. ಮುಹಮ್ಮದ್ ಮತ್ತು ಅತ್ತೆ ಖತೀಜಾ ಸೇರಿ ವರದಕ್ಷಿಣೆ ತರುವಂತೆ ಪೀಡಿಸಿ ಕಿರುಕುಳ ನೀಡುತ್ತಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಶ್ರಿನಾ ಎಂಬ ಮಹಿಳೆಯನ್ನು 7 ವರ್ಷದ ಹಿಂದೆ ಅಬ್ದುಲ್ ಖಾದರ್ ಮದುವೆಯಾಗಿದ್ದು ಇವರಿಗೆ ಮೂವರು ಹೆಣ್ಣು ಮಕ್ಕಳನ್ನು ಹೊಂದಿದ್ದಾರೆ. ಮದುವೆಯ ಸಂದರ್ಭ 50 ಪವನ್ ಚಿನ್ನಭರಣವನ್ನು ವರದಕ್ಷಿಣೆ ರೂಪದಲ್ಲಿ ನೀಡಲಾಗಿತ್ತು. ಬಸ್ ತೆಗೆಯಲೆಂದು ಪತ್ನಿಯ ಚಿನ್ನವನ್ನು ಪತಿ ಅಬ್ದುಲ್ ಖಾದರ್ ಬ್ಯಾಂಕಿನಲ್ಲಿ ಅಡವಿಟ್ಟು ಸಾಲ ಪಡೆದಿದ್ದರು. ನಂತರ ಬ್ಯಾಂಕಿನ ಸಾಲದ ಬಡ್ಡಿ ಕಟ್ಟಲು ಹಣ ಇಲ್ಲವೆಂದು ಹಣ ತಂದು ಕೊಡುವಂತೆ ಪತ್ನಿಯನ್ನು ಒತ್ತಾಯಿಸುತ್ತಿದ್ದ. ಈ ಬಗ್ಗೆ ಹಲವು ಬಾರಿ ತನ್ನ ಅಣ್ಣನಿಂದ ಹಣ ಕೇಳಿ ತೆಗೆದುಕೊಟ್ಟಿದ್ದೇನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಆದರೆ ಕಳೆದ ಬಾರಿಯೂ ಸಾಲದ ಬಡ್ಡಿ ಹಣ ಕಟ್ಟಲು ಇಲ್ಲ ಎಂದಾಗ ಮಾವ ಜಮಾಲ್ ಎಂಬವರಿಂದ ಸಾಲ ಪಡೆದು 2.60 ಲಕ್ಷ ರೂ. ಬಡ್ಡಿ ಹಣವನ್ನು ಸಂದಾಯ ಮಾಡಿದ್ದೆ. ಮದುವೆ ಆದ 4 ವರ್ಷದಿಂದಲೇ ನನಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದಾರೆ. ಈ ಬಗ್ಗೆ 7 - 8 ಬಾರಿ ನನ್ನ ಮನೆಯವರ ಕಡೆಯಿಂದ ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯಿತಿಗೆ ಮಾಡಲಾಗಿದೆ. ಇಷ್ಟೆಲ್ಲಾ ಆದ್ರೂ ಪತಿ ತನ್ನ ನೀಚ ಬುದ್ದಿಯನ್ನು ಬಿಟ್ಟಿರಲಿಲ್ಲ.
ಇದಲ್ಲದೆ ಪತಿ ಅಬ್ದುಲ್ ಖಾದರ್, ತನ್ನ ಬಸ್ಸಿನಲ್ಲಿ ಬರುವ ಹೆಣ್ಣು ಮಕ್ಕಳ ಜೊತೆ ಹಾಗೂ ಬೇರೆ ಹೆಣ್ಣು ಮಕ್ಕಳ ಜೊತೆ ಫೋನ್ ಮೂಲಕ ಮಾತನಾಡುವುದು ಮತ್ತು ವಾಟ್ಸಪ್ ಮೂಲಕ ಮೆಸೇಜ್ ಮಾಡುತ್ತಿರುವುದು ಕೂಡ ಇತ್ತು. ಅಲ್ಲದೆ ಬೇರೆ ಹೆಣ್ಣುಮಕ್ಕಳ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು ತನ್ನ ಬಸ್ಸಿನಲ್ಲಿ ಸಂಪಾದಿಸಿದ್ದನ್ನೆಲ್ಲ ಅವರಿಗೆ ಖರ್ಚು ಮಾಡುತ್ತಿದ್ದ. ಪತ್ನಿಯಾಗಿ ಅದನ್ನರಿತು ಪ್ರಶ್ನೆ ಮಾಡಿದರೆ ನನಗೆ ಮಕ್ಕಳ ಮುಂದೇನೆ ಚಿತ್ರಹಿಂಸೆ ನೀಡುತ್ತಿದ್ದರು. ಇದಕ್ಕೂ ಮೊದಲು ನನಗೆ ದೈಹಿಕವಾಗಿ ಹಲ್ಲೆ ನಡೆಸಿ, ಮನೆಯವರಿಗೆ ಫೋನ್ ಮಾಡಿ ಹಣ ಕೇಳಲು ಒತ್ತಾಯಿಸುತ್ತಿದ್ದರು. ನಾನು ಫೋನ್ ಮಾಡಿಲ್ಲ ಎಂಬ ಕಾರಣಕ್ಕೆ ಸಿಟ್ಟಿನಿಂದ ನನಗೆ ಹಲ್ಲೆ ಮಾಡಿ ನನ್ನಲ್ಲಿದ್ದ ಮೊಬೈಲ್ ಫೋನನ್ನು ತೆಗೆದುಕೊಂಡು ಒಡೆದು ಹಾಕಿದ್ದಾರೆ.

ಮಾನಸಿಕ ಹಿಂಸೆ ನೀಡಿದ ಸಂದರ್ಭದಲ್ಲಿ ನಾವು ಮಹಿಳಾ ಸಮಾಜಕ್ಕೂ ಕಂಪ್ಲೇಂಟ್ ಮಾಡಿದ್ದೆವು. ಮತ್ತು ಪಾಂಡೇಶ್ವರ ಮಹಿಳಾ ಸ್ಟೇಷನ್ ನಲ್ಲಿ ಕಂಪ್ಲೇಂಟ್ ಕೊಟ್ಟಿದ್ದೆವು. ಅಲ್ಲಿಯೂ ಕೂಡ ನನಗೆ ನ್ಯಾಯ ಸಿಗಲಿಲ್ಲ. ಇಷ್ಟೆಲ್ಲ ಆಗಿಯೂ ಮೊನ್ನೆ ಜ.4 ರಂದು ಸಂಜೆ 5ಕ್ಕೆ ಮಾವ ಮತ್ತು ಅತ್ತೆಯ ಸಮ್ಮುಖದಲ್ಲಿ ಮಾನಸಿಕ ಹಿಂಸೆ ನೀಡಿ ಮತ್ತಷ್ಟು ಹಣ ತಂದು ಕೊಡುವಂತೆ ಒತ್ತಾಯಿಸಿ ಮನಬಂದಂತೆ ಹಲ್ಲೆ ನಡೆಸಿ ನನ್ನ ಬಟ್ಟೆಗಳನ್ನೆಲ್ಲ ಹರಿದು ಹಾಕಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದರಂತೆ ಪತಿ ಅಶೀಲ್ ಟ್ರಾವೆಲ್ಸ್ ಮಾಲೀಕ ಅಬ್ದುಲ್ ಖಾದರ್ ಇಸ್ಮಾಯಿಲ್, ಮಾವ ಚೊಕ್ಕಬೆಟ್ಟಿನ ಅಜ್ಮೀರ್ ರೆಡಿಮೇಡ್ ಶಾಪ್ ಮಾಲಕ ಟಿ.ಎ.ಮಹಮ್ಮದ್ ಮತ್ತು ಅತ್ತೆ ಖತೀಜಾ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಮೂವರು ಕೂಡ ತಲೆಮರೆಸಿಕೊಂಡಿದ್ದಾರೆ.
Mangalore Domestic violence wife files complaint against against husband who is a Bus Owner and Mother in law at Surathkal Police Station. Marina was tortured for dowry to clear the loan that was taken for the purchase of Bus. A case has been registered against three over domestic violence.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm