ಬ್ರೇಕಿಂಗ್ ನ್ಯೂಸ್
17-01-22 03:26 pm Shivamogga Correspondent ಕ್ರೈಂ
ಶಿವಮೊಗ್ಗ, ಜ.17: ಪತ್ನಿಯದ್ದೇ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್ಮೇಲ್ ಮಾಡಿದ್ದಲ್ಲದೆ, ವರದಕ್ಷಿಣೆ ಹಣ ತರುವಂತೆ ಕಿರುಕುಳ ನೀಡುತ್ತಿದ್ದ ಪತಿ ಮತ್ತು ಅತ್ತೆ, ಮಾವನ ವಿರುದ್ಧ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆತ್ತಲೆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟು ಮಾನ ಹರಾಜು ಹಾಕುವುದಾಗಿ ಹೇಳಿ ಬೆದರಿಕೆ ಒಡ್ಡಿದ್ದಲ್ಲದೆ, ತಂದೆಯ ಬಳಿಯಿಂದ ಹಣ ಕೇಳಿ ತರುವಂತೆ ಒತ್ತಡ ಹೇರುತ್ತಿದ್ದ ಬಗ್ಗೆ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಿವಾಸಿ ಸಲ್ಮಾನ್, ಅತ್ತೆ ಸಾಹಿರಾ, ಮಾವ ಶೌಕತ್ ಖಾನ್, ನಾದಿನಿ ಸಮೀನಾ ವಿರುದ್ಧ ದೂರು ನೀಡಿದ್ದು, ಶಿವಮೊಗ್ಗದ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ರಿಪ್ಪನ್ ಪೇಟೆ ಠಾಣೆ ವ್ಯಾಪ್ತಿಯ ಹುಂಚ ನಿವಾಸಿಯಾಗಿದ್ದು, 2021ರ ಮೇ 22ರಂದು ಈಕೆಯನ್ನು ಶೃಂಗೇರಿಯ ಸಲ್ಮಾನ್ ಜೊತೆ ಮದುವೆ ಮಾಡಲಾಗಿತ್ತು. ಮದುವೆಯ ಸಂದರ್ಭ 90 ಗ್ರಾಮ್ ಚಿನ್ನಾಭರಣ ಮತ್ತು ಮೂರು ಲಕ್ಷ ನಗದು ವರದಕ್ಷಿಣೆ ನೀಡುವ ಬಗ್ಗೆ ಮಾತುಕತೆ ನಡೆದಿತ್ತು. ಮದುವೆಯ ನಂತರ 90 ಗ್ರಾಮ್ ಚಿನ್ನಾಭರಣ, ಎರಡು ಲಕ್ಷ ನಗದು ಮತ್ತು ಮನೆಯ ಇನ್ನಿತರ ಸಾಮಾನುಗಳನ್ನು ಖರೀದಿಸಿ ಕೊಡಲಾಗಿತ್ತು.
ಒಂದು ಲಕ್ಷ ನಗದು ಕೊಡಲು ಬಾಕಿಯಾಗಿದ್ದ ವಿಚಾರದಲ್ಲಿ ಇವರ ನಡುವೆ ಜಗಳ ನಡೆದಿದ್ದು, ಪದೇ ಪದೇ ಯುವತಿಗೆ ಕಿರುಕುಳ ನೀಡಲಾಗಿತ್ತು. ಇದಕ್ಕಾಗಿ ಅತ್ತೆ ಮತ್ತು ಮಾವ ನಿರಂತರ ಕಿರುಕುಳ ನೀಡಿದ್ದು, ಇದಕ್ಕೆ ಗಂಡ ಸಲ್ಮಾನ್ ಮತ್ತು ನಾದಿನಿ ಸಮೀನಾ ಸಾಥ್ ನೀಡಿದ್ದರು. ಇದಲ್ಲದೆ, ಗಂಡ ಸಲ್ಮಾನ್ ಈಕೆಯನ್ನು ಬೆತ್ತಲಾಗಿಸಿ ವಿಡಿಯೋ ಮಾಡಿದ್ದು, ಅದೇ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಲಾರಂಭಿಸಿದ್ದ. ಒಂದೋ ಹಣ ತಂದು ಕೊಡಬೇಕು, ಇಲ್ಲದಿದ್ದರೆ ವಿಡಿಯೋ ಹೊರಬಿಟ್ಟು ನಡತೆ ಸರಿ ಇಲ್ಲ ಎಂದು ಸುದ್ದಿ ಹಬ್ಬಿಸುತ್ತೇನೆ ಎಂದು ಬೆದರಿಸಿದ್ದ.
ಗಂಡ ಮತ್ತು ಅತ್ತೆ, ಮಾವಂದಿರ ಕಿರುಕುಳದಿಂದ ಬೇಸತ್ತ ಯುವತಿ ಇತ್ತೀಚೆಗೆ ತನ್ನ ರಿಪ್ಪನ್ ಪೇಟೆ ಬಳಿಯ ತವರು ಮನೆಗೆ ಬಂದಿದ್ದಳು. ಅಲ್ಲಿಗೆ ಬಂದಿದ್ದ ಸಲ್ಮಾನ್, ತಲಾಖ್ ನೀಡುವುದಾಗಿ ಹೇಳಿ ಹೋಗಿದ್ದ. ಆನಂತರ ಫೋನ್ ಮಾಡಿ, ವಿಡಿಯೋ ತನ್ನಲ್ಲಿದೆ, ಅದನ್ನು ಹರಿಯಬಿಡುತ್ತೇನೆ ಎಂದು ಹೇಳಿದ್ದ. ಅಲ್ಲದೆ, ಉಳಿದ ಹಣವನ್ನು ಕೂಡಲೇ ತಂದು ಕೊಡು, ಇಲ್ಲದಿದ್ದರೆ ಕೊಂದು ಹಾಕುತ್ತೇನೆ ಎಂದು ಬೆದರಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
Shivamogga Husband booked for blackmailing, uploading wifes nude video for dowry. A case has been registered at Ripponpet police station.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm