ಬ್ರೇಕಿಂಗ್ ನ್ಯೂಸ್
17-01-22 03:26 pm Shivamogga Correspondent ಕ್ರೈಂ
ಶಿವಮೊಗ್ಗ, ಜ.17: ಪತ್ನಿಯದ್ದೇ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್ಮೇಲ್ ಮಾಡಿದ್ದಲ್ಲದೆ, ವರದಕ್ಷಿಣೆ ಹಣ ತರುವಂತೆ ಕಿರುಕುಳ ನೀಡುತ್ತಿದ್ದ ಪತಿ ಮತ್ತು ಅತ್ತೆ, ಮಾವನ ವಿರುದ್ಧ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆತ್ತಲೆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟು ಮಾನ ಹರಾಜು ಹಾಕುವುದಾಗಿ ಹೇಳಿ ಬೆದರಿಕೆ ಒಡ್ಡಿದ್ದಲ್ಲದೆ, ತಂದೆಯ ಬಳಿಯಿಂದ ಹಣ ಕೇಳಿ ತರುವಂತೆ ಒತ್ತಡ ಹೇರುತ್ತಿದ್ದ ಬಗ್ಗೆ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಿವಾಸಿ ಸಲ್ಮಾನ್, ಅತ್ತೆ ಸಾಹಿರಾ, ಮಾವ ಶೌಕತ್ ಖಾನ್, ನಾದಿನಿ ಸಮೀನಾ ವಿರುದ್ಧ ದೂರು ನೀಡಿದ್ದು, ಶಿವಮೊಗ್ಗದ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ರಿಪ್ಪನ್ ಪೇಟೆ ಠಾಣೆ ವ್ಯಾಪ್ತಿಯ ಹುಂಚ ನಿವಾಸಿಯಾಗಿದ್ದು, 2021ರ ಮೇ 22ರಂದು ಈಕೆಯನ್ನು ಶೃಂಗೇರಿಯ ಸಲ್ಮಾನ್ ಜೊತೆ ಮದುವೆ ಮಾಡಲಾಗಿತ್ತು. ಮದುವೆಯ ಸಂದರ್ಭ 90 ಗ್ರಾಮ್ ಚಿನ್ನಾಭರಣ ಮತ್ತು ಮೂರು ಲಕ್ಷ ನಗದು ವರದಕ್ಷಿಣೆ ನೀಡುವ ಬಗ್ಗೆ ಮಾತುಕತೆ ನಡೆದಿತ್ತು. ಮದುವೆಯ ನಂತರ 90 ಗ್ರಾಮ್ ಚಿನ್ನಾಭರಣ, ಎರಡು ಲಕ್ಷ ನಗದು ಮತ್ತು ಮನೆಯ ಇನ್ನಿತರ ಸಾಮಾನುಗಳನ್ನು ಖರೀದಿಸಿ ಕೊಡಲಾಗಿತ್ತು.
ಒಂದು ಲಕ್ಷ ನಗದು ಕೊಡಲು ಬಾಕಿಯಾಗಿದ್ದ ವಿಚಾರದಲ್ಲಿ ಇವರ ನಡುವೆ ಜಗಳ ನಡೆದಿದ್ದು, ಪದೇ ಪದೇ ಯುವತಿಗೆ ಕಿರುಕುಳ ನೀಡಲಾಗಿತ್ತು. ಇದಕ್ಕಾಗಿ ಅತ್ತೆ ಮತ್ತು ಮಾವ ನಿರಂತರ ಕಿರುಕುಳ ನೀಡಿದ್ದು, ಇದಕ್ಕೆ ಗಂಡ ಸಲ್ಮಾನ್ ಮತ್ತು ನಾದಿನಿ ಸಮೀನಾ ಸಾಥ್ ನೀಡಿದ್ದರು. ಇದಲ್ಲದೆ, ಗಂಡ ಸಲ್ಮಾನ್ ಈಕೆಯನ್ನು ಬೆತ್ತಲಾಗಿಸಿ ವಿಡಿಯೋ ಮಾಡಿದ್ದು, ಅದೇ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಲಾರಂಭಿಸಿದ್ದ. ಒಂದೋ ಹಣ ತಂದು ಕೊಡಬೇಕು, ಇಲ್ಲದಿದ್ದರೆ ವಿಡಿಯೋ ಹೊರಬಿಟ್ಟು ನಡತೆ ಸರಿ ಇಲ್ಲ ಎಂದು ಸುದ್ದಿ ಹಬ್ಬಿಸುತ್ತೇನೆ ಎಂದು ಬೆದರಿಸಿದ್ದ.
ಗಂಡ ಮತ್ತು ಅತ್ತೆ, ಮಾವಂದಿರ ಕಿರುಕುಳದಿಂದ ಬೇಸತ್ತ ಯುವತಿ ಇತ್ತೀಚೆಗೆ ತನ್ನ ರಿಪ್ಪನ್ ಪೇಟೆ ಬಳಿಯ ತವರು ಮನೆಗೆ ಬಂದಿದ್ದಳು. ಅಲ್ಲಿಗೆ ಬಂದಿದ್ದ ಸಲ್ಮಾನ್, ತಲಾಖ್ ನೀಡುವುದಾಗಿ ಹೇಳಿ ಹೋಗಿದ್ದ. ಆನಂತರ ಫೋನ್ ಮಾಡಿ, ವಿಡಿಯೋ ತನ್ನಲ್ಲಿದೆ, ಅದನ್ನು ಹರಿಯಬಿಡುತ್ತೇನೆ ಎಂದು ಹೇಳಿದ್ದ. ಅಲ್ಲದೆ, ಉಳಿದ ಹಣವನ್ನು ಕೂಡಲೇ ತಂದು ಕೊಡು, ಇಲ್ಲದಿದ್ದರೆ ಕೊಂದು ಹಾಕುತ್ತೇನೆ ಎಂದು ಬೆದರಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
Shivamogga Husband booked for blackmailing, uploading wifes nude video for dowry. A case has been registered at Ripponpet police station.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm