ಬ್ರೇಕಿಂಗ್ ನ್ಯೂಸ್
17-01-22 03:26 pm Shivamogga Correspondent ಕ್ರೈಂ
ಶಿವಮೊಗ್ಗ, ಜ.17: ಪತ್ನಿಯದ್ದೇ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್ಮೇಲ್ ಮಾಡಿದ್ದಲ್ಲದೆ, ವರದಕ್ಷಿಣೆ ಹಣ ತರುವಂತೆ ಕಿರುಕುಳ ನೀಡುತ್ತಿದ್ದ ಪತಿ ಮತ್ತು ಅತ್ತೆ, ಮಾವನ ವಿರುದ್ಧ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆತ್ತಲೆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟು ಮಾನ ಹರಾಜು ಹಾಕುವುದಾಗಿ ಹೇಳಿ ಬೆದರಿಕೆ ಒಡ್ಡಿದ್ದಲ್ಲದೆ, ತಂದೆಯ ಬಳಿಯಿಂದ ಹಣ ಕೇಳಿ ತರುವಂತೆ ಒತ್ತಡ ಹೇರುತ್ತಿದ್ದ ಬಗ್ಗೆ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಿವಾಸಿ ಸಲ್ಮಾನ್, ಅತ್ತೆ ಸಾಹಿರಾ, ಮಾವ ಶೌಕತ್ ಖಾನ್, ನಾದಿನಿ ಸಮೀನಾ ವಿರುದ್ಧ ದೂರು ನೀಡಿದ್ದು, ಶಿವಮೊಗ್ಗದ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ರಿಪ್ಪನ್ ಪೇಟೆ ಠಾಣೆ ವ್ಯಾಪ್ತಿಯ ಹುಂಚ ನಿವಾಸಿಯಾಗಿದ್ದು, 2021ರ ಮೇ 22ರಂದು ಈಕೆಯನ್ನು ಶೃಂಗೇರಿಯ ಸಲ್ಮಾನ್ ಜೊತೆ ಮದುವೆ ಮಾಡಲಾಗಿತ್ತು. ಮದುವೆಯ ಸಂದರ್ಭ 90 ಗ್ರಾಮ್ ಚಿನ್ನಾಭರಣ ಮತ್ತು ಮೂರು ಲಕ್ಷ ನಗದು ವರದಕ್ಷಿಣೆ ನೀಡುವ ಬಗ್ಗೆ ಮಾತುಕತೆ ನಡೆದಿತ್ತು. ಮದುವೆಯ ನಂತರ 90 ಗ್ರಾಮ್ ಚಿನ್ನಾಭರಣ, ಎರಡು ಲಕ್ಷ ನಗದು ಮತ್ತು ಮನೆಯ ಇನ್ನಿತರ ಸಾಮಾನುಗಳನ್ನು ಖರೀದಿಸಿ ಕೊಡಲಾಗಿತ್ತು.
ಒಂದು ಲಕ್ಷ ನಗದು ಕೊಡಲು ಬಾಕಿಯಾಗಿದ್ದ ವಿಚಾರದಲ್ಲಿ ಇವರ ನಡುವೆ ಜಗಳ ನಡೆದಿದ್ದು, ಪದೇ ಪದೇ ಯುವತಿಗೆ ಕಿರುಕುಳ ನೀಡಲಾಗಿತ್ತು. ಇದಕ್ಕಾಗಿ ಅತ್ತೆ ಮತ್ತು ಮಾವ ನಿರಂತರ ಕಿರುಕುಳ ನೀಡಿದ್ದು, ಇದಕ್ಕೆ ಗಂಡ ಸಲ್ಮಾನ್ ಮತ್ತು ನಾದಿನಿ ಸಮೀನಾ ಸಾಥ್ ನೀಡಿದ್ದರು. ಇದಲ್ಲದೆ, ಗಂಡ ಸಲ್ಮಾನ್ ಈಕೆಯನ್ನು ಬೆತ್ತಲಾಗಿಸಿ ವಿಡಿಯೋ ಮಾಡಿದ್ದು, ಅದೇ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಲಾರಂಭಿಸಿದ್ದ. ಒಂದೋ ಹಣ ತಂದು ಕೊಡಬೇಕು, ಇಲ್ಲದಿದ್ದರೆ ವಿಡಿಯೋ ಹೊರಬಿಟ್ಟು ನಡತೆ ಸರಿ ಇಲ್ಲ ಎಂದು ಸುದ್ದಿ ಹಬ್ಬಿಸುತ್ತೇನೆ ಎಂದು ಬೆದರಿಸಿದ್ದ.
ಗಂಡ ಮತ್ತು ಅತ್ತೆ, ಮಾವಂದಿರ ಕಿರುಕುಳದಿಂದ ಬೇಸತ್ತ ಯುವತಿ ಇತ್ತೀಚೆಗೆ ತನ್ನ ರಿಪ್ಪನ್ ಪೇಟೆ ಬಳಿಯ ತವರು ಮನೆಗೆ ಬಂದಿದ್ದಳು. ಅಲ್ಲಿಗೆ ಬಂದಿದ್ದ ಸಲ್ಮಾನ್, ತಲಾಖ್ ನೀಡುವುದಾಗಿ ಹೇಳಿ ಹೋಗಿದ್ದ. ಆನಂತರ ಫೋನ್ ಮಾಡಿ, ವಿಡಿಯೋ ತನ್ನಲ್ಲಿದೆ, ಅದನ್ನು ಹರಿಯಬಿಡುತ್ತೇನೆ ಎಂದು ಹೇಳಿದ್ದ. ಅಲ್ಲದೆ, ಉಳಿದ ಹಣವನ್ನು ಕೂಡಲೇ ತಂದು ಕೊಡು, ಇಲ್ಲದಿದ್ದರೆ ಕೊಂದು ಹಾಕುತ್ತೇನೆ ಎಂದು ಬೆದರಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
Shivamogga Husband booked for blackmailing, uploading wifes nude video for dowry. A case has been registered at Ripponpet police station.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 09:02 pm
Mangalurur Staffer
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm