ಬ್ರೇಕಿಂಗ್ ನ್ಯೂಸ್
17-01-22 10:35 pm HK News Desk ಕ್ರೈಂ
ಹೈದರಾಬಾದ್, ಜ.17: ಪತ್ನಿ ಪರ ಪುರುಷರ ಜೊತೆಗಿದ್ದ ಅಶ್ಲೀಲ ವಿಡಿಯೋ ನೋಡಿದ ವ್ಯಕ್ತಿಯೊಬ್ಬ ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪೂರ್ವ ಗೋದಾವರಿ ಜಿಲ್ಲೆಯ ವಂಗಲಪುಡಿ ಗ್ರಾಮದಲ್ಲಿ ನಡೆದಿದೆ.
ವಂಗಲಪುಡಿ ಗ್ರಾಮದ 35 ವರ್ಷದ ವಿವಾಹಿತ ಮಹಿಳೆ ಉದ್ಯೋಗಕ್ಕಾಗಿ ಕುವೈತ್ ತೆರಳಿದ್ದು ಗಂಡ ಮತ್ತು ಮಕ್ಕಳನ್ನು ಊರಲ್ಲಿ ಬಿಟ್ಟಿದ್ದರು. ಗೋಕಾವರಂನಲ್ಲಿ ಇಬ್ಬರು ಗಂಡು ಮಕ್ಕಳು (13, 10 ವರ್ಷ) ಮತ್ತು ಒಬ್ಬ ಮಗಳು (12) ಅಜ್ಜಿಯ ಮನೆಯಲ್ಲಿ ವಾಸವಿದ್ದರು. ಆಟೋ ರಿಕ್ಷಾ ಓಡಿಸುತ್ತಿದ್ದ ತಂದೆ ಕೆಲವೊಮ್ಮೆ ಅಲ್ಲಿಗೆ ಹೋಗಿ ಮಕ್ಕಳನ್ನು ನೋಡಿಕೊಂಡು ತೆರಳುತ್ತಿದ್ದ.
ಶನಿವಾರ ಸಂಜೆ ಮಕ್ಕಳ ಬಳಿ ಬಂದಿದ್ದ ತಂದೆ, ಅವರನ್ನು ಹೊರಗೆ ಕರೆದೊಯ್ಯುವುದಾಗಿ ಹೇಳಿ ಹೋಗಿದ್ದ. ತೋಟಕ್ಕೆ ಕರೆದೊಯ್ದು ಇಲಿಗೆ ಹಾಕುವ ವಿಷವನ್ನು ತಾನೇ ಸೇವಿಸಿದ್ದು ಬಳಿಕ ತನ್ನ ಮೂವರು ಮಕ್ಕಳಿಗೆ ವಿಷ ನೀಡಲು ಯತ್ನಿಸಿದ್ದಾನೆ.
ಹತ್ತು ವರ್ಷದ ಮಗ ವಿಷ ಸೇವಿಸಿದ್ದರೆ, ಇನ್ನಿಬ್ಬರು ಮಕ್ಕಳು ವಿಷ ಸೇವಿಸಲಿಲ್ಲ. ಅಷ್ಟರಲ್ಲಿ ತಂದೆ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದು ಮಕ್ಕಳಿಬ್ಬರು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಅಸ್ವಸ್ಥಗೊಂಡಿದ್ದ ತಂದೆ, ಮಗನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ
ನನಗೆ ಹತ್ತಿರದ ಸಂಬಂಧಿಯಿಂದ ನನ್ನ ಪತ್ನಿ ಪರ ಪುರುಷರ ಜೊತೆಗಿರುವ ಅಶ್ಲೀಲ ವಿಡಿಯೋ ಸಿಕ್ಕಿತ್ತು. ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದೇನೆ ಎಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಆದರೆ, ಆತ ಹೇಳುತ್ತಿರುವ ವಿಡಿಯೋಗಳನ್ನು ಪರಿಶೀಲಿಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷ ಸೇವಿಸಲು ಒತ್ತಾಯಿಸಿದ್ದ ತಂದೆ
‘ನಮ್ಮ ತಂದೆ ನಮ್ಮ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅಜ್ಜಿಯ ಮನೆಯಲ್ಲಿಯೇ ಇದ್ದು ಓದುತ್ತಿದ್ದೇವೆ. ಅವರು ಆಗಾಗ ಬಂದು ಹೋಗುತ್ತಿದ್ದರು. ಹಬ್ಬದ ಹಿನ್ನೆಲೆ ತಂದೆ ನಮ್ಮ ಬಳಿಗೆ ಬಂದಿದ್ದರು. ಹೀಗಾಗಿ ನಾವು ಅವರ ಜೊತೆ ಹೊರಗೆ ಹೋಗಿದ್ದೆವು. ಕಹಿ ಔಷಧಿ ಕುಡಿಯಲು ಹೇಳಿದ್ದರು. ವಿಷವೆಂದು ಸಂಶಯ ಬಂದು ಕುಡಿದಿರಲಿಲ್ಲ’ ಎಂದು ಇನ್ನಿಬ್ಬರು ಮಕ್ಕಳು ಹೇಳಿದ್ದಾರೆ.
Wife Sex video with other man leaked, husband attempts for suicide by killing two children in hyderabad.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm