ಬ್ರೇಕಿಂಗ್ ನ್ಯೂಸ್
25-01-22 10:13 pm Mangalore Correspondent ಕ್ರೈಂ
ಮಂಗಳೂರು, ಜ.25 : ಒಳ್ಳೆ ಉದ್ಯೋಗ ತೆಗೆಸಿಕೊಡುವುದಾಗಿ ಹೇಳಿ ಯುವಕನೊಬ್ಬನಿಂದ 25 ಲಕ್ಷಕ್ಕೂ ಹೆಚ್ಚು ಮೊತ್ತವನ್ನು ಲಪಟಾಯಿಸಿದ ಪ್ರಕರಣ ನಡೆದಿದ್ದು, ಈ ಬಗ್ಗೆ ನಗರದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ವ್ಯಕ್ತಿ ಆರೋಪಿಗಳನ್ನು ಅಂಕುರ್ ದೇಸಾಯಿ, ಅನಾಮಿಕ ಶರ್ಮಾ, ಅನುರಾಧ, ಸೋನಿಯಾ, ಪ್ರಿಯಾಂಕ ರೆಡ್ಡಿ, ರಾಜೀವ್, ಪೂಜಾ, ಲಕ್ಷ್ಮೀ ಮತ್ತು ಪಲ್ಲವಿ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಉದ್ಯೋಗ ಅರಸುತ್ತಿದ್ದ ವ್ಯಕ್ತಿ ಆನ್ಲೈನಲ್ಲಿ ಸೈನ್ ಡಾಟ್ ಕಾಮ್ ಎಂಬ ವೆಬ್ ಸೈಟ್ ನಲ್ಲಿ ತನ್ನ ಕುರಿತ ವಿವರ ಹಾಕಿದ್ದ. ಈ ಬಗ್ಗೆ ತಿಳಿದ ಅಂಕುರ್ ದೇಸಾಯಿ ಎಂಬಾತ ಕರೆ ಮಾಡಿದ್ದು, ಸೆಕ್ಯುರ್ ಕ್ಯಾರಿಯರ್ ಎಂಬ ವೆಬ್ ಸೈಟಿನಲ್ಲಿ ವಿವರ ಅಪ್ಲೋಡ್ ಮಾಡುವಂತೆ ಸಲಹೆ ನೀಡಿದ್ದಾನೆ.
ಅಲ್ಲದೆ, 2358 ರೂಪಾಯಿ ನೀಡಿ, ತನ್ನ ಹೆಸರನ್ನು ರಿಜಿಸ್ಟರ್ ಮಾಡುವಂತೆ ಸೂಚಿಸಿದ್ದಾನೆ. ಆತನ ಸೂಚನೆಯಂತೆ, ಅದೇ ರೀತಿ ರಿಜಿಸ್ಟರ್ ಮಾಡಿದಾಗ, ವಿದ್ಯಾರ್ಹತೆ ಆಧರಿಸಿ ಹಲವು ಕಂಪೆನಿಗಳ ಲಿಸ್ಟ್ ಬಂದಿತ್ತು. ಆನಂತರ, ಈತನ ದಾಖಲಾತಿ ಪರಿಶೀಲನೆ ಎಂದು ಹೇಳಿ 4130 ರೂಪಾಯಿ ಸಂದಾಯ ಮಾಡುವಂತೆ ತಿಳಿಸಿದ್ದರು. ಅದನ್ನೂ ತನ್ನ ಐಸಿಐಸಿಐ ಬ್ಯಾಂಕಿನಿಂದ ಪಾವತಿ ಮಾಡಿದ್ದಾನೆ.
ಇದೇ ರೀತಿ ಹಲವು ಕಂಪನಿಗಳಿಗೆ ಅರ್ಜಿ ಸಲ್ಲಿಕೆ ನೆಪದಲ್ಲಿ ಹಣವನ್ನು ಕೇಳಿದ್ದು ವ್ಯಕ್ತಿ 10,65,065 ರೂಪಾಯಿ ಪಾವತಿ ಮಾಡಿದ್ದಾನೆ. ಹಲವು ಯುವತಿಯರು ಫೋನ್ ಮಾಡಿ, ಮನವೊಲಿಕೆ ಮಾಡುತ್ತಿದ್ದರು. ನೀವು ಈಗ ಪಾವತಿ ಮಾಡಿರುವ ಹಣವನ್ನು ಆನಂತರ ಉದ್ಯೋಗ ದೊರೆತ ಬಳಿಕ ಹಿಂತಿರುಗಿಸಲಾಗುವುದು ಎಂದು ಹೇಳುತ್ತಿದ್ದರು. ಹೇಗೂ ಇಷ್ಟು ಹಣ ಪಾವತಿ ಆಗಿದ್ಯಲ್ಲ, ದೊಡ್ಡ ಸಂಬಳದ ಉದ್ಯೋಗ ಸಿಕ್ಕಲ್ಲಿ ಆಮೇಲೆ ಡಿಪಾಸಿಟ್ ಇಟ್ಟ ಹಣವೂ ರಿಟರ್ನ್ ಆಗುತ್ತೆ ಎಂದು ನಂಬಿ ಸರದಿಯಂತೆ ಹಣವನ್ನು ನೀಡಿದ್ದಾನೆ.
ಕೊನೆಗೆ ಬರೋಬ್ಬರಿ 25,49,079 ರೂಪಾಯಿ ಹಣವನ್ನು ನೀಡಿದ್ದು ಇಷ್ಟು ಹಣ ಖಾಲಿಯಾದ ಬಳಿಕ ತಾನು ಮೋಸ ಹೋಗಿದ್ದಾಗಿ ಅರಿವಿಗೆ ಬಂದಿದೆ. ಸುರತ್ಕಲ್ ಎಸ್ ಬಿಐ ಮತ್ತು ಐಸಿಐಸಿಐ ಬ್ಯಾಂಕಿನಿಂದ ಹಣ ಪಾವತಿ ಮಾಡಿದ್ದು, ವ್ಯಕ್ತಿ ಉದ್ಯೋಗದ ಆಸೆಯಿಂದ ನಂಬಿ ಹಣ ಕೊಟ್ಟು ಕೆಟ್ಟಿದ್ದ. ಇದೀಗ ತನ್ನ ಹಣ ಹೋಗಿರುವ ಬಗ್ಗೆ ಸೈಬರ್ ಮತ್ತು ಆರ್ಥಿಕ ಅಪರಾಧಗಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Mangalore Youth looses around 25 lakhs after falling prey to Job opportunity. Case has been registered against seven people at cyber crime police station.
03-08-26 01:46 pm
HK News Staffer
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 12:51 pm
HK News Staffer
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm