ಬ್ರೇಕಿಂಗ್ ನ್ಯೂಸ್
26-01-22 12:20 pm DK Desk news ಕ್ರೈಂ
ಬಿಹಾರ, ಜ 26 : ರೈಲ್ವೆ ನೇಮಕಾತಿ ಮಂಡಳಿಯ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಹಾರದಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ವೇಳೆ ಅರ್ರಾದಲ್ಲಿ ಪ್ರಯಾಣಿಕರ ರೈಲಿಗೆ ಬೆಂಕಿ ಹಚ್ಚಿದಲ್ಲದೆ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ವಿಡಿಯೋಗಳನ್ನು ಚಿತ್ರೀಕರಿಸಲಾಗಿದ್ದು, ತನಿಖೆಯ ಬಳಿಕ ಆರೋಪಿಗಳನ್ನು ಬಂಧನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರೈಲ್ವೆ ನೇಮಕಾತಿ ಮಂಡಳಿಯ ತಾಂತ್ರಿಕೇತರ ಪರೀಕ್ಷೆ 2021ಕ್ಕೆ ಹಾಜರಾಗಿದ್ದ ವಿದ್ಯಾರ್ಥಿಗಳು ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆ ಎಂದು ಆರೋಪಿಸಿ ಬಿಹಾರ ಷರೀಫ್ ರೈಲು ನಿಲ್ದಾಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಅಲ್ಲದೆ, ಪಾಟ್ನಾದ ರಾಜೇಂದ್ರ ನಗರ ಟರ್ಮಿನಲ್ನಲ್ಲಿ ನೂರಾರು ವಿದ್ಯಾರ್ಥಿಗಳು ಕೋಲ್ಕತ್ತಾ-ನವದೆಹಲಿ ಮುಖ್ಯ ರೈಲು ಮಾರ್ಗವನ್ನು ತಡೆದು ಆಕ್ರೋಶ ಹೊರಹಾಕಿದ್ದಾರೆ.
CBT-1 ಪರೀಕ್ಷೆಗಾಗಿ ರೈಲ್ವೆ ನೇಮಕಾತಿ ಮಂಡಳಿಯ ಎನ್ಟಿಪಿಸಿ (NTPC) ಫಲಿತಾಂಶವನ್ನು CBT-2 ಗೆ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಲು ಜನವರಿ 15ರಂದು ಪ್ರಕಟಿಸಲಾಗಿತ್ತು.
ಪ್ರತಿಭಟನಾಕಾರರು ಸುಮಾರು ಐದು ಗಂಟೆಗಳ ಕಾಲ ರೈಲು ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪಾಟ್ನಾ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಡಾ ಚಂದ್ರಶೇಖರ್ ಸಿಂಗ್ ತಿಳಿಸಿದ್ದಾರೆ. ಪೊಲೀಸರು ಪ್ರತಿಭಟನಾಕಾರರನ್ನು ರೈಲು ನಿಲ್ದಾಣದಿಂದ ಹೊರಗೆ ಕಳುಹಿಸಿದ್ದಾರೆ.
Students protesting against the Railway Recruitment Board's Non-Technical Popular Categories (RRB-NTPC) exam 2021 spread to other parts of Bihar on Tuesday. Protestors squatted on rail tracks at several places on Tuesday, hampering train movement in the state.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 06:27 pm
HK News Staffer
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm