ಬ್ರೇಕಿಂಗ್ ನ್ಯೂಸ್
30-01-22 05:38 pm HK Desk news ಕ್ರೈಂ
ಚಿಕ್ಕಮಗಳೂರು, ಜ.30 : ಅಪ್ರಾಪ್ತ ಹುಡುಗನೊಬ್ಬ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತ ಹುಡುಗಿಯನ್ನು ಸಿಟ್ಟಿನ ಭರದಲ್ಲಿ ಹೊಡೆದು ಕೊಂದು ಬಿಟ್ಟಿದ್ದಲ್ಲದೆ, ಆಬಳಿಕ ಆಘಾತಕ್ಕೊಳಗಾಗಿ ಆಕೆಯ ಶವದ ಜೊತೆಗೇ ರಾತ್ರಿ ಕಳೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಜಡಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಒಂದೇ ಗ್ರಾಮದವರಾದ ಹುಡುಗ ಮತ್ತು ಹುಡುಗಿ ಕಳೆದ ಒಂದು ವರ್ಷದಿಂದ ಪ್ರೀತಿಸುತ್ತಿದ್ದು, ಈ ವಿಚಾರ ಎರಡು ಮನೆಯವರಿಗೂ ತಿಳಿದಿತ್ತು. ಪ್ರಾಪ್ತ ವಯಸ್ಸಿಗೆ ಬಂದ ಮೇಲೆ ಮದುವೆ ಮಾಡಿಸುವ ಭರವಸೆಯನ್ನೂ ನೀಡಿದ್ದರು. ಆದರೆ, ಶುಕ್ರವಾರ ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮ ಇದೆಯೆಂದು ಹೇಳಿ ತನ್ನ ಹುಡುಗಿಯನ್ನು ಜೊತೆಗೆ ಕರೆದೊಯ್ದಿದ್ದ.
ಅಲ್ಲಿಂದ ಹಿಂತಿರುಗುವ ಸಂದರ್ಭದಲ್ಲಿ ನಿರ್ಜನ ಪ್ರದೇಶದಲ್ಲಿ ಬೈಕ್ ನಿಲ್ಲಿಸಿ, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆದರೆ, ಯುವತಿ ಮದುವೆಗೂ ಮುನ್ನ ಈ ರೀತಿಯ ಸಂಬಂಧ ಬೇಡವೆಂದು ನಿರಾಕರಿಸಿದ್ದಾಳೆ. ಈ ವೇಳೆ ಯುವಕ ಬಲವಂತದಿಂದ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗುತ್ತಿದೆ. ಇದರಿಂದ ಸಿಟ್ಟಿಗೆದ್ದ ಯುವತಿ, ಈ ಬಗ್ಗೆ ಮನೆಯವರಿಗೆ ತಿಳಿಸುವುದಾಗಿ ಗದರಿಸಿದ್ದಾಳೆ. ಇದೇ ವಿಚಾರದಲ್ಲಿ ಇಬ್ಬರ ಮಧ್ಯೆ ಜಗಳ ನಡೆದಿದ್ದು ಯುವಕ, ಯುವತಿಯ ಮೇಲೆ ಹಲ್ಲೆ ನಡೆಸಿದ್ದಾನೆ.
ಈ ವೇಳೆ, ಹೊಡೆದ ಏಟಿನಿಂದಾಗಿ ಯುವತಿ ಪ್ರಜ್ಞೆ ತಪ್ಪಿ ಬಿದ್ದಿದ್ದು ಮತ್ತೆ ಏಳಲೇ ಇಲ್ಲ. ಇದರಿಂದ ದಿಗ್ಭ್ರಾಂತನಾದ ಯುವಕ ರಾತ್ರಿ ಏನೂ ಮಾಡಲಾಗದೇ ಅಲ್ಲಿಯೇ ಉಳಿದಿದ್ದಾನೆ. ಯುವತಿ ಬಿದ್ದ ಜಾಗದಲ್ಲೇ ಹೆಣವಾಗಿದ್ದಾಳೆ. ರಾತ್ರಿಯಿಡೀ ಕಾಡಿನ ಮಧ್ಯೆ ಶವದ ಜೊತೆಗೇ ಯುವಕ ಕಾಲ ಕಳೆದಿದ್ದು, ಬೆಳಗ್ಗೆ ಬಿಸಿಲೇರಿದಾಗ ಜನರು ನೋಡಿ ಗಾಬರಿಗೊಂಡಿದ್ದಾರೆ. ವಿಷಯ ಕೇಳಿದಾಗ, ಆಗಿರುವ ಪ್ರಮಾದವನ್ನು ಯುವಕ ಹೇಳಿಕೊಂಡಿದ್ದಾನೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Chikmagalur Minor youth kills lover girlfriend, spends whole night with the dead body. It is said that he took the girl to a isolated place and tried to rape her for which the girl objected. Angered by her behavior he killed her. The youth has been arrested by the Police.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm