ಬ್ರೇಕಿಂಗ್ ನ್ಯೂಸ್
31-01-22 10:30 pm HK Desk news ಕ್ರೈಂ
ಕರಾಚಿ, ಜ.31 : ಮೊಬೈಲಿನಲ್ಲಿ ಪಬ್ ಜಿ ವಿಡಿಯೋ ಗೇಮ್ ಹುಚ್ಚಾಟಕ್ಕೆ ಬಿದ್ದ 14 ವರ್ಷದ ಹುಡುಗನೊಬ್ಬ ತಾಯಿ, ಇಬ್ಬರು ಸೋದರಿಯರು ಸೇರಿ ಒಂದೇ ಕುಟುಂಬದ ನಾಲ್ವರನ್ನು ಗುಂಡಿಟ್ಟು ಕೊಂದು ಹಾಕಿದ ಘಟನೆ ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.
ತಾಯಿ ನಹೀದ್ ಮುಬಾರಕ್ (45), ಆಕೆಯ ಮಗ 22 ವರ್ಷದ ತೈಮೂರ್, ಇನ್ನಿಬ್ಬರು 17 ಮತ್ತು 11 ವರ್ಷದ ಇಬ್ಬರು ಹೆಣ್ಮಕ್ಕಳು ದಾರುಣ ಸಾವಿಗೀಡಾದವರು. ಇವರನ್ನು ಕೊಂದು ಹಾಕಿದ 14 ವರ್ಷದ ಹುಡುಗ ಮಾತ್ರ ಈ ಕುಟುಂಬದಲ್ಲಿ ಉಳಿದಿರುವ ಏಕೈಕ ವ್ಯಕ್ತಿ. ಉಳಿದೆಲ್ಲರೂ ಒಂದೇ ಕುಟುಂಬದ ಕುಡಿಗಳು ಒಡಹುಟ್ಟಿದವನ ಗುಂಡಿನಿಂದಲೇ ಸಾವಿಗೀಡಾಗಿದ್ದಾರೆ.

Unknown Battle ground ಎನ್ನುವ ಹೆಸರಿನ ಪಬ್ ಜಿ ವಿಡಿಯೋ ಗೇಮನ್ನು ಹೆಚ್ಚು ಕಾಲ ಆಡುತ್ತಿದ್ದ ಹುಡುಗ ಅದರಿಂದ ಮಾನಸಿಕವಾಗಿ ಸಮಸ್ಯೆಗೀಡಾಗಿದ್ದ. ಅದೇ ವಿಚಾರದಲ್ಲಿ ಕುಟುಂಬದಲ್ಲಿ ಕಲಹ ಏರ್ಪಟ್ಟು ಹುಡುಗ ಗುಂಡು ಹಾರಿಸಿದ್ದಾನೆ ಎನ್ನಲಾಗುತ್ತಿದೆ. ತಾಯಿ ನಹೀದ್ ಮುಬಾರಕ್ ಗಂಡನಿಂದ ಬೇರ್ಪಟ್ಟಿದ್ದು ಮಕ್ಕಳೊಂದಿಗೆ ವಾಸವಿದ್ದಳು. ಆರೋಗ್ಯ ಕಾರ್ಯಕರ್ತೆಯಾಗಿ ಕೆಲಸ ಮಾಡಿ ಮಕ್ಕಳನ್ನು ಸಾಕುತ್ತಿದ್ದಳು.

ಆದರೆ 14 ವರ್ಷದ ಹುಡುಗ ಮೊಬೈಲ್ ವಿಡಿಯೋ ಗೇಮ್ ನಲ್ಲಿ ಆಡುತ್ತಾ ಕಲಿಯುವುದರಲ್ಲಿ ಹಿಂದೆ ಬಿದ್ದಿದ್ದ. ಇದೇ ವಿಚಾರದಲ್ಲಿ ಹುಡುಗನಿಗೆ ತಾಯಿ ಬೈದಿದ್ದು, ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದಳು. ಇದರಿಂದ ಸಿಟ್ಟಿಗೆದ್ದ ಹುಡುಗ ಕಪಾಟಿನಲ್ಲಿದ್ದ ಪಿಸ್ತೂಲ್ ತೆಗೆದು ತಾಯಿ ಮತ್ತು ಮನೆಯಲ್ಲಿದ್ದ ತನ್ನ ಒಡ ಹುಟ್ಟಿದವರ ಮೇಲೆ ಗುಂಡು ಹಾರಿಸಿದ್ದಾನೆ. ಅವರು ಸ್ಥಳದಲ್ಲೇ ಸಾವು ಕಂಡಿದ್ದಾರೆ.
A 14-year-old boy allegedly shot dead his entire family, including mother and two minor sisters, allegedly "under the influence" of online game PUBG, police in the capital of Pakistan's Punjab province said.
03-08-26 01:46 pm
HK News Staffer
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 12:51 pm
HK News Staffer
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm