ಬ್ರೇಕಿಂಗ್ ನ್ಯೂಸ್
31-01-22 10:30 pm HK Desk news ಕ್ರೈಂ
ಕರಾಚಿ, ಜ.31 : ಮೊಬೈಲಿನಲ್ಲಿ ಪಬ್ ಜಿ ವಿಡಿಯೋ ಗೇಮ್ ಹುಚ್ಚಾಟಕ್ಕೆ ಬಿದ್ದ 14 ವರ್ಷದ ಹುಡುಗನೊಬ್ಬ ತಾಯಿ, ಇಬ್ಬರು ಸೋದರಿಯರು ಸೇರಿ ಒಂದೇ ಕುಟುಂಬದ ನಾಲ್ವರನ್ನು ಗುಂಡಿಟ್ಟು ಕೊಂದು ಹಾಕಿದ ಘಟನೆ ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.
ತಾಯಿ ನಹೀದ್ ಮುಬಾರಕ್ (45), ಆಕೆಯ ಮಗ 22 ವರ್ಷದ ತೈಮೂರ್, ಇನ್ನಿಬ್ಬರು 17 ಮತ್ತು 11 ವರ್ಷದ ಇಬ್ಬರು ಹೆಣ್ಮಕ್ಕಳು ದಾರುಣ ಸಾವಿಗೀಡಾದವರು. ಇವರನ್ನು ಕೊಂದು ಹಾಕಿದ 14 ವರ್ಷದ ಹುಡುಗ ಮಾತ್ರ ಈ ಕುಟುಂಬದಲ್ಲಿ ಉಳಿದಿರುವ ಏಕೈಕ ವ್ಯಕ್ತಿ. ಉಳಿದೆಲ್ಲರೂ ಒಂದೇ ಕುಟುಂಬದ ಕುಡಿಗಳು ಒಡಹುಟ್ಟಿದವನ ಗುಂಡಿನಿಂದಲೇ ಸಾವಿಗೀಡಾಗಿದ್ದಾರೆ.

Unknown Battle ground ಎನ್ನುವ ಹೆಸರಿನ ಪಬ್ ಜಿ ವಿಡಿಯೋ ಗೇಮನ್ನು ಹೆಚ್ಚು ಕಾಲ ಆಡುತ್ತಿದ್ದ ಹುಡುಗ ಅದರಿಂದ ಮಾನಸಿಕವಾಗಿ ಸಮಸ್ಯೆಗೀಡಾಗಿದ್ದ. ಅದೇ ವಿಚಾರದಲ್ಲಿ ಕುಟುಂಬದಲ್ಲಿ ಕಲಹ ಏರ್ಪಟ್ಟು ಹುಡುಗ ಗುಂಡು ಹಾರಿಸಿದ್ದಾನೆ ಎನ್ನಲಾಗುತ್ತಿದೆ. ತಾಯಿ ನಹೀದ್ ಮುಬಾರಕ್ ಗಂಡನಿಂದ ಬೇರ್ಪಟ್ಟಿದ್ದು ಮಕ್ಕಳೊಂದಿಗೆ ವಾಸವಿದ್ದಳು. ಆರೋಗ್ಯ ಕಾರ್ಯಕರ್ತೆಯಾಗಿ ಕೆಲಸ ಮಾಡಿ ಮಕ್ಕಳನ್ನು ಸಾಕುತ್ತಿದ್ದಳು.

ಆದರೆ 14 ವರ್ಷದ ಹುಡುಗ ಮೊಬೈಲ್ ವಿಡಿಯೋ ಗೇಮ್ ನಲ್ಲಿ ಆಡುತ್ತಾ ಕಲಿಯುವುದರಲ್ಲಿ ಹಿಂದೆ ಬಿದ್ದಿದ್ದ. ಇದೇ ವಿಚಾರದಲ್ಲಿ ಹುಡುಗನಿಗೆ ತಾಯಿ ಬೈದಿದ್ದು, ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದಳು. ಇದರಿಂದ ಸಿಟ್ಟಿಗೆದ್ದ ಹುಡುಗ ಕಪಾಟಿನಲ್ಲಿದ್ದ ಪಿಸ್ತೂಲ್ ತೆಗೆದು ತಾಯಿ ಮತ್ತು ಮನೆಯಲ್ಲಿದ್ದ ತನ್ನ ಒಡ ಹುಟ್ಟಿದವರ ಮೇಲೆ ಗುಂಡು ಹಾರಿಸಿದ್ದಾನೆ. ಅವರು ಸ್ಥಳದಲ್ಲೇ ಸಾವು ಕಂಡಿದ್ದಾರೆ.
A 14-year-old boy allegedly shot dead his entire family, including mother and two minor sisters, allegedly "under the influence" of online game PUBG, police in the capital of Pakistan's Punjab province said.
02-02-26 09:52 pm
HK News Desk
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm