ಬ್ರೇಕಿಂಗ್ ನ್ಯೂಸ್
03-02-22 06:18 pm Mangalore Correspondent ಕ್ರೈಂ
ಮಂಗಳೂರು, ಫೆ.3 : ಕಾಲೇಜಿಗೆ ತೆರಳುವ ಅಪ್ರಾಪ್ತ ಹುಡುಗಿಯರಿಗೆ ನಾನಾ ರೀತಿಯ ಆಮಿಷವೊಡ್ಡಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಪ್ರಕರಣವನ್ನು ಪತ್ತೆ ಮಾಡಿರುವ ಮಂಗಳೂರು ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ.
ಅತ್ತಾವರದ ನಂದಿಗುಡ್ಡೆ ಬಳಿಯ ಎಸ್.ಎಮ್.ಆರ್ ಲಿಯಾನಾ ರೆಸಿಡೆನ್ಸಿ ಹೆಸರಿನ ಅಪಾರ್ಟ್ಮೆಂಟಿನಲ್ಲಿ ಶಮೀನಾ ಎಂಬ ಮಹಿಳೆ ಮತ್ತು ಆಕೆಯ ಗಂಡ ಸಿದ್ಧಿಕ್ ಎಂಬವರು ಮನೆಯೊಂದನ್ನು ಬಾಡಿಗೆ ಪಡೆದು ಅಲ್ಲಿ ಕೃತ್ಯ ಎಸಗುತ್ತಿದ್ದರು. ಅಪ್ರಾಪ್ತ ಬಾಲಕಿಯರು ಮತ್ತು ಮಹಿಳೆಯರನ್ನು ಒತ್ತಾಯಪೂರ್ವಕ ಕರೆತಂದು ಹಣ ಇನ್ನಿತರ ಆಮಿಷವೊಡ್ಡಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದರು. ಆನಂತರ, ವಿಡಿಯೋ ಮಾಡಿ ಬ್ಲಾಕ್ಮೇಲ್ ಮಾಡುತ್ತಾ ಮತ್ತೆ ಮತ್ತೆ ತಮ್ಮ ಕೃತ್ಯಕ್ಕೆ ಸಹಕರಿಸುವಂತೆ ಒತ್ತಡ ಹೇರುತ್ತಿದ್ದರು.
ಈ ಬಗ್ಗೆ 17 ವರ್ಷದ ಅಪ್ರಾಪ್ತ ಯುವತಿ ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿದ್ದು, ಅದರಂತೆ ಪ್ರಕರಣ ದಾಖಲಾಗಿ ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಶಮೀನಾ ಮತ್ತು ಸಿದ್ದಿಕ್ ನಡೆಸುತ್ತಿದ್ದ ದಂಧೆಗೆ ಆಯಿಷಮ್ಮ ಎಂಬ ಮಹಿಳೆ ಸಾಥ್ ನೀಡಿದ್ದು, ಮೂವರನ್ನೂ ಪೊಲೀಸರು ಬಂಧಿಸಿದ್ದಾರೆ. ಇವರಿಗೆ ಇನ್ನೂ ಕೆಲವರು ಸಹಕರಿಸುತ್ತಿದ್ದು, ತಂಡವಾಗಿ ದಂಧೆ ನಡೆಸುತ್ತಿದ್ದರು. ಕಾಲೇಜಿಗೆ ಹೋಗುವ ಯುವತಿಯರನ್ನು ಟಾರ್ಗೆಟ್ ಮಾಡಿ, ಆಮಿಷ ಒಡ್ಡಿ ವೇಶ್ಯಾವಾಟಿಕೆಗೆ ಬಳಸುತ್ತಿರುವುದು ಕಂಡುಬಂದಿದೆ. ಆರೋಪಿಗಳ ಬಳಿಯಿಂದ 5 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದು, ಅದನ್ನು ಆಧರಿಸಿ ಇತರ ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
The Women's Police Station of Pandeshwar has arrested five persons for allegedly forcing minor girls and women into prostitution with false entrappments and blackmail in SMR Liana Apartments near Nandigudda of Attavar in the city. The action was taken based on a complaint by a victim, a 17-year-old girl against two women and a man. As per the complaint, Shameena has rented an apartment in Leona Apartments and has been committing this crime with the help of her husband Siddique.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm