ಬ್ರೇಕಿಂಗ್ ನ್ಯೂಸ್
07-02-22 11:02 pm Mangalore Correspondent ಕ್ರೈಂ
ಮಂಗಳೂರು, ಫೆ.7 : ಮನೆ ಬಳಿಯಲ್ಲೇ ತಗಡು ಶೀಟಿನ ಕೊಠಡಿ ನಿರ್ಮಿಸಿಕೊಂಡು ಗೃಹ ಬಳಕೆಯ ಎಲ್ ಪಿಜಿ ಗ್ಯಾಸ್ ಪಡೆದು ಅದನ್ನು ವಾಣಿಜ್ಯ ಬಳಕೆಯ ಸಿಲಿಂಡರ್ ಗಳಿಗೆ ತುಂಬಿಸಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಮಂಗಳೂರು ಪೊಲೀಸರು ಪತ್ತೆ ಮಾಡಿದ್ದಾರೆ.
ಮಂಗಳೂರು ತಾಲೂಕಿನ ಪೆರ್ಮನ್ನೂರು ಗ್ರಾಮದ ಚೆಂಬುಗುಡ್ಡೆ ಎಂಬಲ್ಲಿನ ನಿವಾಸಿ ಫ್ರಾನ್ಸಿಸ್ ಎಂಬವರು ಮನೆಗೆ ತಾಗಿಕೊಂಡು ತಗಡು ಶೀಟಿನ ಕೊಠಡಿ ನಿರ್ಮಿಸಿಕೊಂಡು ಅದರಲ್ಲಿ ಅಡುಗೆ ಅನಿಲದ ಸಿಲಿಂಡರ್ ಗಳನ್ನು ತುಂಬಿಸಿಡಲಾಗಿತ್ತು. ಕಮರ್ಶಿಯಲ್ ಬಳಕೆಯ ವಿವಿಧ ಗಾತ್ರದ ಸಿಲಿಂಡರ್ ಗಳಿಗೆ ತಾನೇ ರೆಗ್ಯುಲೇಟರ್ ಬಳಸಿ ಗೃಹ ಬಳಕೆಯ ಸಿಲಿಂಡರ್ ಗಳಿಂದ ಗ್ಯಾಸ್ ತುಂಬಿಸುತ್ತಿದ್ದುದನ್ನು ಪತ್ತೆ ಮಾಡಲಾಗಿದೆ.

ಈ ಬಗ್ಗೆ ಖಚಿತ ಮಾಹಿತಿಯಂತೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ನೇತೃತ್ವದಲ್ಲಿ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ರಂಜಿತ್ ಮತ್ತವರ ತಂಡ ಹಾಗೂ ಉಳ್ಳಾಲ ವಲಯದ ಆಹಾರ ನಿರೀಕ್ಷಕರಾದ ಹ್ಯಾರಿಸ್, ಪ್ರಭಾರ ಆಹಾರ ನಿರೀಕ್ಷಕಿ ರೇಖಾ ಮತ್ತು ಸಿಬಂದಿ ಫೆ.5ರಂದು ಸ್ಥಳಕ್ಕೆ ದಾಳಿ ನಡೆಸಿದ್ದರು. ಈ ವೇಳೆ, ಆರೋಪಿ ಫ್ರಾನ್ಸಿಸ್ ಸದ್ರಿ ಕೋಣೆಯಲ್ಲಿ ಖಾಲಿ ಗ್ಯಾಸ್ ಸಿಲಿಂಡರನ್ನು ನೆಲದಲ್ಲಿಟ್ಟು ಅದರ ಮೇಲ್ಗಡೆ ತುಂಬಿದ ಗ್ಯಾಸ್ ಸಿಲಿಂಡರನ್ನು ಕವುಚಿ ಹಾಕಿ ಗ್ಯಾಸ್ ತುಂಬಿಸುತ್ತಿದ್ದ. ಪೊಲೀಸರು ದಾಳಿ ನಡೆಸಿದ್ದನ್ನು ನೋಡಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಸ್ಥಳದಲ್ಲಿ ಎಚ್ ಪಿ, ಇಂಡೇನ್, ಭಾರತ್, ಪ್ಯೂರ್, ಟೋಟಲ್ ಕಂಪನಿಯ ದೊಡ್ಡ ಮತ್ತು ಸಣ್ಣ ಗಾತ್ರದ ವಿವಿಧ ಮಾದರಿಯ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದೆ. ಗ್ಯಾಸ್ ತುಂಬಿದ ಸಿಲಿಂಡರ್ -15, ತುಂಬಿದ ಆಕ್ಸಿಜನ್ ದೊಡ್ಡ ಸಿಲಿಂಡರ್ – 1, ಖಾಲಿ ಗ್ಯಾಸ್ ಸಿಲಿಂಡರ್ – 112 ಹೀಗೆ ಒಟ್ಟು 128 ಸಿಲಿಂಡರ್ ಪತ್ತೆಯಾಗಿದೆ. ಇದರ ಒಟ್ಟು ಮೌಲ್ಯ 1.92 ಲಕ್ಷ ರೂಪಾಯಿ ಆಗಿದೆ. ಸ್ಥಳದಲ್ಲಿ ದೊರೆತ ವಿವಿಧ ಪರಿಕರಗಳನ್ನು ವಶಕ್ಕೆ ಪಡೆದಿದ್ದು, ಆಹಾರ ನಿರೀಕ್ಷಕರು ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ullal police raided the house of one Francis at Chembugudde of Permannur in the taluk on definite information that the accused is transferring liquefied petroleum gas (LPG) from domestic gas cylinders to commercial ones though artificial regulators without any safety. The accused absconded from the spot.
03-08-26 01:46 pm
HK News Staffer
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm