ಬ್ರೇಕಿಂಗ್ ನ್ಯೂಸ್
10-02-22 03:06 pm HK Desk news ಕ್ರೈಂ
ಬೆಂಗಳೂರು, ಫೆ.10 : ಗಂಡ ಹೃದಯಾಘಾತದಿಂದ ತೀರಿಕೊಂಡಿದ್ದಾನೆಂದು ಸುಳ್ಳು ಹೇಳಿ ಇನ್ ಶೂರೆನ್ಸ್ ಕಂಪನಿಯಿಂದ ಮೂರು ಕೋಟಿ ರೂಪಾಯಿ ವಿಮೆ ಪಡೆದು ವಂಚನೆ ನಡೆಸಿರುವ ಬಗ್ಗೆ ಮಹಿಳೆಯೊಬ್ಬರ ವಿರುದ್ಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಿಟ್ಟಸಂದ್ರ ನಿವಾಸಿ ಸುಪ್ರಿಯಾ ಲಾಕಾಕುಲ ಎಂಬ ಮಹಿಳೆಯ ವಿರುದ್ಧ ಇನ್ ಶೂರೆನ್ಸ್ ಕಂಪನಿಯ ಲೀಗಲ್ ಅಡ್ವೈಸರ್ ಪಿ.ಎಸ್.ಗಣಪತಿ ದೂರು ನೀಡಿದ್ದಾರೆ. ಆಂಧ್ರಪ್ರದೇಶ ಮೂಲದ, ಬೆಂಗಳೂರಿನಲ್ಲಿ ನೆಲೆಸಿದ್ದ ಕೃಷ್ಣಪ್ರಸಾದ್ ಗರಳಪಟ್ಟಿ(31) ಎಂಬವರು ಎರಡು ವರ್ಷಗಳ ಹಿಂದೆ ಖಾಸಗಿ ಇನ್ಶೂರೆನ್ಸ್ ಕಂಪನಿಯಿಂದ ಮೂರು ಕೋಟಿ ರೂಪಾಯಿ ಮೊತ್ತದ ಲೈಫ್ ಇನ್ಶೂರೆನ್ಸ್ ವಿಮೆ ಮಾಡಿಸಿದ್ದರು. ಈ ವೇಳೆ, ತನ್ನ ಪತ್ನಿ ಸುಪ್ರಿಯಾಳನ್ನು ನಾಮಿನಿ ಆಗಿ ತೋರಿಸಿದ್ದರು. ವರ್ಷಕ್ಕೆ 50 ಸಾವಿರ ಪ್ರೀಮಿಯಂ ಕಟ್ಟಲು ಬರುತ್ತಿತ್ತು. ಆನ್ಲೈನಲ್ಲೇ ವಿಮೆಯನ್ನು ಮಾಡಿಸಿಕೊಂಡಿದ್ದರು.
ಆದರೆ, 2021ರ ಮೇ 14ರಂದು ಕೃಷ್ಣಪ್ರಸಾದ್ ಮೃತಪಟ್ಟಿದ್ದು, ಪತ್ನಿ ಸುಪ್ರಿಯಾ ಗಂಡ ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ಹೇಳಿ ಇನ್ಶೂರೆನ್ಸ್ ಕಂಪನಿಯಿಂದ ಕ್ಲೈಮ್ ಮಾಡಿಕೊಂಡಿದ್ದರು. ವೈದ್ಯಕೀಯ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ ಕಂಪನಿ, 3.2 ಕೋಟಿ ರೂಪಾಯಿ ವಿಮಾ ಹಣವನ್ನು ಸುಪ್ರಿಯಾ ಬ್ಯಾಂಕ್ ಖಾತೆಗೆ ಹಾಕಿತ್ತು. ಆದರೆ ಈ ನಡುವೆ, ರವಿ ಎಂಬ ವ್ಯಕ್ತಿ ಈ ಬಗ್ಗೆ ಇನ್ಶೂರೆನ್ಸ್ ಕಂಪನಿಗೆ ದೂರು ನೀಡಿದ್ದು, ಕೃಷ್ಣಪ್ರಸಾದ್ ಕ್ಯಾನ್ಸರ್ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿದ್ದಲ್ಲ. ವಿಮೆ ಪಡೆಯುವಾಗಲೇ ಅವರಿಗೆ ಕ್ಯಾನ್ಸರ್ ಕಾಯಿಲೆ ಇತ್ತು. ಸುಪ್ರಿಯಾ ಅವರು ನಕಲಿ ದಾಖಲೆ ಪತ್ರಗಳನ್ನು ಸಿದ್ಧಪಡಿಸಿ ವಿಮಾ ಹಣವನ್ನು ಪಡೆದಿದ್ದಾರೆಂದು ದೂರಿದ್ದರು.
ಇದರಂತೆ, ಪರಿಶೀಲನೆ ನಡೆಸಿದ ವಿಮಾ ಕಂಪನಿ ಅಧಿಕಾರಿಗಳು ದೂರಿನಲ್ಲಿ ನಿಜಾಂಶ ಇರುವುದನ್ನು ಪತ್ತೆಹಚ್ಚಿದ್ದು, ಮಹಿಳೆ ಕಂಪನಿಗೆ ವಂಚನೆ ಎಸಗಿದ್ದಾಳೆಂದು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸ್ ದೂರು ದಾಖಲಾಗುತ್ತಿದ್ದಂತೆ ಮಹಿಳೆ ನಾಪತ್ತೆಯಾಗಿದ್ದಾಳೆ.
A private insurance company has realised with delay that the wife of a policyholder had falsely claimed that her husband died of heart attack with an eye on claiming the insurance amount of three crore rupees. The company has now filed a complaint against her.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm