ಬ್ರೇಕಿಂಗ್ ನ್ಯೂಸ್
10-02-22 04:05 pm HK Desk news ಕ್ರೈಂ
ಬಂಟ್ವಾಳ, ಫೆ.10 : ವಿದ್ಯುತ್ ಬಿಲ್ ತಪಾಸಣೆ ಹೆಸರಲ್ಲಿ ಮನೆಯಂಗಳಕ್ಕೆ ಬಂದಿದ್ದ ಅದೇ ನೆಪದಲ್ಲಿ ಮನೆ ಒಳಗೆ ಬಂದು ಮಹಿಳೆಯನ್ನು ಥಳಿಸಿ ದರೋಡೆಗೈದ ಘಟನೆ ವಿಟ್ಲ ಪೇಟೆಯ ಅಡ್ಡದ ಬೀದಿಯಲ್ಲಿ ನಡೆದಿದೆ. ಬುಧವಾರ ಸಂಜೆ ವೇಳೆಗೆ ಮನೆಗೆ ಆಗಮಿಸಿದ್ದ ಇಬ್ಬರು ಆಗಂತುಕರು ಬೀಫಾತುಮ್ಮ ಎಂಬ ಮಹಿಳೆಯ ಮೇಲೆ ಹಲ್ಲೆಗೈದು, ಆಕೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ವಿಟ್ಲ ಕಸಬಾ ಗ್ರಾಮದ ನಿವಾಸಿ ಬೀಫಾತುಮ್ಮ (50) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೀಫಾತುಮ್ಮ ಅವರ ಪತಿ ಸುಲೈಮಾನ್, ವಿಟ್ಲದ ಅಡ್ಡದ ಬೀದಿಯ ಸಮೀಪದಲ್ಲೇ ರಸ್ತೆ ಬದಿ ಎಳನೀರು ಮಾರುವ ವ್ಯಾಪಾರ ಮಾಡುತ್ತಿದ್ದು, ಮಧ್ಯಾಹ್ನ ಊಟಕ್ಕೆ ಬಂದು ಆನಂತರ ಹಿಂತಿರುಗಿದ್ದರು. ಕೆಲಹೊತ್ತಿನಲ್ಲಿಯೇ ಬೈಕಿನಲ್ಲಿ ಇಬ್ಬರು ಬಂದಿದ್ದು, ಹೆಲ್ಮೆಟ್ ಹಾಕ್ಕೊಂಡಿದ್ದರು.
ಮಹಿಳೆಯ ಬಳಿ ಕರೆಂಟ್ ಬಿಲ್ ಕಟ್ಟಿಲ್ಲವಾ ಎಂದು ವಿಚಾರಿಸಿದ್ದಾರೆ. ಬಿಲ್ ಇದೆಯೆಂದು ಒಳಗೆ ಹೋದ ಮಹಿಳೆಯನ್ನು ಯುವಕರು ಹಿಂಬಾಲಿಸಿ ಒಳಗೆ ಬಂದಿದ್ದು, ಕೈಯಲ್ಲಿದ್ದ ಚೂರಿಯಿಂದ ಕೈ, ಹೊಟ್ಟೆ, ಕುತ್ತಿಗೆಗೆ ಹಲ್ಲೆ ಮಾಡಿದ್ದಾರೆ. ಆನಂತರ ಮಹಿಳೆ ಧರಿಸಿದ್ದ ಚಿನ್ನದ ಒಡವೆಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಆನಂತರ ಮನೆಯ ಹೊರಗೆ ಬಂದ ಮಹಿಳೆ ಸ್ಥಳೀಯರಿಗೆ ಹೇಳಿದ್ದಾರೆ. ಮಹಿಳೆಯನ್ನು ವಿಟ್ಲ ಸಮುದಾಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿ, ಮಂಗಳೂರಿಗೆ ಒಯ್ಯಲಾಗಿದೆ.
ಮನೆಯ ಕೊಠಡಿಯ ಕಪಾಟು ಒಡೆದ ರೀತಿಯಲ್ಲಿ ಕಂಡುಬಂದಿದ್ದು ಹಣ ಅಥವಾ ಇನ್ನಿತರ ವಸ್ತುಗಳು ಕಳವಾಗಿದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಟ್ವಾಳ ಸರ್ಕಲ್ ಇನ್ಸ್ ಪೆಕ್ಟರ್ ನಾಗರಾಜ್ ಸೇರಿದಂತೆ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದಾರೆ. ಮಂಗಳೂರಿನ ಬೆರಳಚ್ಚು ತಜ್ಞರು ತೆರಳಿ, ತಪಾಸಣೆ ನಡೆಸಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Miscreants flee with good and cash in the name of collecting electricity bill at Vitla.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm