ಬ್ರೇಕಿಂಗ್ ನ್ಯೂಸ್
10-02-22 05:56 pm Mangalore Correspondent ಕ್ರೈಂ
ಮಂಗಳೂರು, ಫೆ.10 : ಮಂಗಳೂರಿನ ರೌಡಿಸಂನಲ್ಲಿ ಕುಖ್ಯಾತಿ ಪಡೆದಿರುವ ಪಿಂಕಿ ನವಾಜ್ ಮತ್ತು ಆಕಾಶಭವನ್ ಶರಣ್ ಮೇಲೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಗೂಂಡಾ ಕಾಯ್ದೆ ಪ್ರಯೋಗ ಮಾಡಿದ್ದು ಇಬ್ಬರನ್ನೂ ಬಂಧಿಸಲು ಆದೇಶ ಮಾಡಿದ್ದಾರೆ.
ಆಕಾಶಭವನ್ ಶರಣ್ ಈಗಾಗ್ಲೇ ದರೋಡೆ ಪ್ರಕರಣ ಒಂದರಲ್ಲಿ ತಿಂಗಳ ಹಿಂದೆ ಬಂಧಿತನಾಗಿ ಸದ್ಯ ಮೈಸೂರು ಜೈಲಿನಲ್ಲಿದ್ದು ಆತನನ್ನು ಬಿಜಾಪುರ ಜೈಲಿನಲ್ಲಿ ಬಂಧಿಸಿಡಲು ಆದೇಶ ಮಾಡಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ರೌಡಿಶೀಟರ್ ಆಗಿರುವ ಪಿಂಕಿ ನವಾಜ್ 15ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿದ್ದು, ಎರಡು ದಿನಗಳ ಹಿಂದೆಯಷ್ಟೇ ಮೈಸೂರು ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ. ಆತನನ್ನು ಬುಧವಾರ ಕಾಟಿಪಳ್ಳದ ಮನೆಯಿಂದಲೇ ಮತ್ತೆ ಪೊಲೀಸರು ಬಂಧಿಸಿದ್ದಾರೆ.
ಕಾವೂರು ಠಾಣೆ ವ್ಯಾಪ್ತಿಯ ಆಕಾಶಭವನದ ನಿವಾಸಿಯಾಗಿರುವ ರೋಹಿದಾಸ್ ಅಲಿಯಾಸ್ ಆಕಾಶಭವನ್ ಶರಣ್ (37) ವಿರುದ್ಧ ಕೊಲೆ, ಕೊಲೆಯತ್ನ, ಕೊಲೆಸಂಚು, ಅತ್ಯಾಚಾರ, ಸುಲಿಗೆ, ಅಟ್ರಾಸಿಟಿ ಕೇಸ್ ಸೇರಿದಂತೆ 19 ಪ್ರಕರಣಗಳಿವೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ 15 ಕೇಸು ಇದ್ದು, ಉಡುಪಿ ಜಿಲ್ಲೆಯಲ್ಲಿ ಎರಡು ಮತ್ತು ದಕ್ಷಿಣ ಕನ್ನಡ ಗ್ರಾಮಾಂತರ ವ್ಯಾಪ್ತಿಯಲ್ಲಿ ಎರಡು ಕೇಸ್ ಇದೆ. 19 ಪ್ರಕರಣಗಳ ಪೈಕಿ ಆರು ಪ್ರಕರಣ ಹೊರತುಪಡಿಸಿ ಉಳಿದೆಲ್ಲದರಲ್ಲೂ ಆರೋಪಿ ಶರಣ್ ಖುಲಾಸೆಗೊಂಡಿದ್ದಾನೆ. ಎರಡು ಪ್ರಕರಣ ತನಿಖಾ ಹಂತದಲ್ಲಿದ್ದರೆ, ನಾಲ್ಕು ಕೇಸ್ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.
2017ರಲ್ಲಿ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪಿಂಕಿ ನವಾಜ್(27) ವಿರುದ್ಧ ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ 15 ಪ್ರಕರಣ ದಾಖಲಾಗಿದೆ. ಈ ಪೈಕಿ ಮೂರು ಪ್ರಕರಣಗಳಲ್ಲಿ ಆರೋಪಿ ಖುಲಾಸೆಗೊಂಡಿದ್ದರೆ, ಉಳಿದೆಲ್ಲ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಇತ್ತೀಚೆಗೆ ಸುರತ್ಕಲ್ ಠಾಣೆ ವ್ಯಾಪ್ತಿಯ ಕಾಟಿಪಳ್ಳದಲ್ಲಿ ದೀಪಕ್ ರಾವ್ ಸ್ಮರಣಾರ್ಥ ಬಸ್ ನಿಲ್ದಾಣ ಉದ್ಘಾಟನೆ ನಡೆದಿತ್ತು. ಇದಕ್ಕೆ ಪ್ರತಿಯಾಗಿ ಯಾರನ್ನಾದರೂ ಕೊಲೆ ನಡೆಸಬೇಕೆಂದು ಸಂಚು ನಡೆಸಿದ್ದ ಪ್ರಕರಣದಲ್ಲಿ ಪಿಂಕಿ ನವಾಜ್ ಸೇರಿ ನಾಲ್ವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದರು. ಸದ್ರಿ ಪ್ರಕರಣದಲ್ಲಿ ಜಾಮೀನಿನಲ್ಲಿ ಬಿಡುಗಡೆಯಾಗಿ ಹೊರಬಂದ ಕೂಡಲೇ ಗೂಂಡಾ ಕಾಯ್ದೆ ವಿಧಿಸಲಾಗಿದೆ. ಈತನನ್ನು ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಬಂಧಿಸಿಡಲು ಕಮಿಷನರ್ ಆದೇಶ ಮಾಡಿದ್ದಾರೆ.
The Police Commissioner N Shashi Kumar IPS, using the power to invoke the Goonda act, arrested notorious criminal rowdy sheeter Pinki Nawaz and issued a detention order against Akashbhavan Sharan on February 10.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 03:01 pm
HK News Staffer
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm