ಬ್ರೇಕಿಂಗ್ ನ್ಯೂಸ್
12-02-22 10:55 pm HK Desk news ಕ್ರೈಂ
ನವದೆಹಲಿ, ಫೆ.12 : ‘ಡಾರ್ಕ್ನೆಟ್’ ಹಾಗೂ ಕ್ರಿಪ್ಟೊಕರೆನ್ಸಿ ನೆರವಿನಲ್ಲಿ ಕೊರಿಯರ್ ಮೂಲಕ ದೇಶದಾದ್ಯಂತ ಮನೆ, ಮನೆಗಳಿಗೆ ಡ್ರಗ್ಸ್ ತಲುಪಿಸುತ್ತಿದ್ದ ಜಾಲವನ್ನು ಎನ್ಸಿಬಿ ಅಧಿಕಾರಿಗಳು ಭೇದಿಸಿದ್ದು, ಬೆಂಗಳೂರಿನ ಎಂಬಿಬಿಎಸ್ ವಿದ್ಯಾರ್ಥಿ ಸೇರಿ 22 ಮಂದಿಯನ್ನು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆದಿತ್ಯ ರೆಡ್ಡಿ, ‘ಎಲ್ಎಸ್ಡಿ ಕಿಂಗ್’ ಎಂದೇ ಕರೆಯಲಾಗುತ್ತಿರುವ ರಘುನಾಥ ಕುಮಾರ್ ಹಾಗೂ ಡ್ರಗ್ಸ್ ಮಾರಾಟ ಜಾಲದ ಮಾಸ್ಟರ್ ಮೈಂಡ್ ಎಂದು ಗುರುತಿಸಲಾದ ಮೊಹ್ಮದ್ ಅಸ್ಲಾಂ ಎಂಬವರು ಬಂಧಿತರಲ್ಲಿ ಪ್ರಮುಖರು. ಡ್ರಗ್ಸ್ ಸಂಬಂಧಿಸಿ ಕರ್ನಾಟಕ ಪೊಲೀಸರು ರಘುನಾಥ ಕುಮಾರ್ ಎಂಬಾತನನ್ನು ಈಗಾಗಲೇ ಬಂಧಿಸಿದ್ದರು. ಆತನ ಮಾಹಿತಿಯಂತೆ ದೇಶದ ವಿವಿಧೆಡೆ ದಾಳಿ ನಡೆಸಲಾಗಿತ್ತು.
ಡಾರ್ಕ್ನೆಟ್ ವೆಬ್ ಮೂಲಕ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಡಿಎನ್ಎಂ ಇಂಡಿಯಾ, ಡಿಆರ್ಇಡಿ ಹಾಗೂ ದಿ ಓರಿಯಂಟ್ ಎಕ್ಸ್ಪ್ರೆಸ್ ಎಂಬ ಆನ್ಲೈನ್ ಮಾರುಕಟ್ಟೆಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಎನ್ಸಿಬಿ ಮಹಾ ನಿರ್ದೇಶಕ (ಉತ್ತರ ವಲಯ) ಜ್ಞಾನೇಶ್ವರ ಸಿಂಗ್ ತಿಳಿಸಿದ್ದಾರೆ.
‘ಆರೋಪಿಗಳು 20–35 ವರ್ಷ ವಯೋಮಾನದವರು. ಕೆಲವರು ಶಾಲೆ ಬಿಟ್ಟವರೂ ಇದ್ದಾರೆ. ಕೌಟುಂಬಿಕ ಸಮಸ್ಯೆ ಎದುರಿಸುತ್ತಿದ್ದವರಿದ್ದರು, ಮತ್ತೆ ಕೆಲವರು ಅಪರಾಧ ಕೃತ್ಯಗಳನ್ನೆಸಗುತ್ತಿದ್ದವರು ತಂಡದಲ್ಲಿ ಇದ್ದಾರೆ ಎಂಬುದು ವಿಚಾರಣೆಯಲ್ಲಿ ತಿಳಿದುಬಂದಿದೆ.
ಸೂರತ್, ಪುಣೆ, ಬೆಂಗಳೂರು, ಕೋಲ್ಕತ್ತ, ಡಾರ್ಜಿಲಿಂಗ್, ದೆಹಲಿ, ಗಾಜಿಯಾಬಾದ್, ರಾಂಚಿ ಹಾಗೂ ಗುವಾಹಟಿಗಳಲ್ಲಿ ನಾಲ್ಕು ತಿಂಗಳ ಕಾಲ ಕಾರ್ಯಾಚರಣೆ ನಡೆಸಲಾಗಿತ್ತು. ಎನ್ಸಿಬಿಯ ಕೋಲ್ಕತ್ತ ಹಾಗೂ ದೆಹಲಿ ವಲಯಕ್ಕೆ ಲಭಿಸಿದ್ದ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿ ಮಹಿಳೆ ಶ್ರದ್ಧಾ ಸುರಾನಾ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಫೈನಾನ್ಸಿಯಲ್ ಕನ್ಸಲ್ಟಂಟ್ ಆಗಿದ್ದಾರೆ. ಡಾರ್ಕ್ನೆಟ್ ಮೂಲಕ ವಿದೇಶಗಳಿಂದ ಡ್ರಗ್ಸ್ ಆಮದು ಮಾಡಿಕೊಳ್ಳುವುದು ಹಾಗೂ ಹಣಕಾಸು ವ್ಯವಹಾರ ನಿರ್ವಹಣೆ ಕಾರ್ಯದಲ್ಲಿ ಆಕೆ ಮತ್ತೊಬ್ಬ ಆರೋಪಿ ಜಸ್ಬೀರ್ ಎಂಬಾತನಿಗೆ ಸಹಕರಿಸುತ್ತಿದ್ದ ಆರೋಪ ಎದುರಿಸುತ್ತಿದ್ದಾರೆ.
Newdelhi a 23-year-old woman financial analyst earning nearly Rs 70,000 a month; threeNetflix enthusiasts emulating their favourite characters from popular narco-series Narcos and Breaking Bad, ‘LSD King’ running his drug network from Bellary jail in Karnataka; a budding psychiatrist who wanted to spread love through drugs; and a Gujarati couple that switched to drugs trade after lockdown hit their legit business.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm