ಬ್ರೇಕಿಂಗ್ ನ್ಯೂಸ್
18-09-20 04:37 pm Headline Karnataka News Network ಕ್ರೈಂ
ನೈಜೀರಿಯಾ, ಸೆಪ್ಟಂಬರ್ 18: ಅತ್ಯಾಚಾರ ಪ್ರಕರಣ ಕೇಳಿಬಂದಾಗೆಲ್ಲ ಕೆಲವರು ಗೊಣಗುವುದು ಕೇಳಿರಬಹುದು. ಆತನ ‘ಅದನ್ನೇ’ ಕತ್ತರಿಸಬೇಕು ಎಂದು. ಆದರೆ, ಅಂಥ ಕಾನೂನು ಮಾತ್ರ ಎಲ್ಲಿಯೂ ಜಾರಿಯಾಗಿರಲಿಲ್ಲ. ಈಗ ನೈಜೀರಿಯಾ ಅಂಥದ್ದೊಂದು ಕಠಿಣ ಕಾನೂನು ಜಾರಿಗೆ ಮುಂದಾಗಿದೆ.
ಅತ್ಯಾಚಾರ ಪ್ರಕರಣಗಳಲ್ಲಿ ಬೇರೆ ಬೇರೆ ದೇಶಗಳಲ್ಲಿ ಶಿಕ್ಷೆಗಳೂ ಥರಾವರಿ ಇವೆ. ಕೆಲವೊಂದು ದೇಶಗಳಲ್ಲಿ ಗಲ್ಲು ಶಿಕ್ಷೆ, ಜೀವಾವಧಿ, 20 ವರ್ಷ ಜೈಲು ಹೀಗೆ ಶಿಕ್ಷೆಯ ಪ್ರಕಾರ ಇವೆ. ಇಂಥ ಕಠಿಣ ಶಿಕ್ಷೆಗಳಿದ್ದರೂ, ಅತ್ಯಾಚಾರ ಪ್ರಕರಣಗಳು ಮಾತ್ರ ಕಡಿಮೆಯಾಗಿಲ್ಲ. ಈಗ ನೈಜೀರಿಯಾ ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದಿಟ್ಟಿದ್ದು, ಪುರುಷನ ಲೈಂಗಿಕ ಶಕ್ತಿಯನ್ನೇ ನಿಶ್ಶಕ್ತಿಗೊಳಿಸುವ ಶಿಕ್ಷೆ ಜಾರಿಗೆ ಮುಂದಾಗಿದೆ.

ನೈಜೀರಿಯಾದಲ್ಲಿ ಕಳೆದ ಲಾಕ್ಡೌನ್ ಸಂದರ್ಭದಲ್ಲಿ ಅತ್ಯಾಚಾರ ಪ್ರಕರಣ ಹೆಚ್ಚಿದ್ದರಿಂದ ಹೊಸ ಕಾನೂನು ತರಲಾಗಿದೆ. ನೈಜೀರಿಯಾದ ಕಾಡುನ ಎನ್ನುವ ರಾಜ್ಯದ ಗವರ್ನರ್ ನಾಸಿರ್ ಅಹ್ಮದ್ ಎಲ್ ರಫಾಯಿ, ಅತ್ಯಾಚಾರ ಕಾನೂನಿಗೆ ತಿದ್ದುಪಡಿ ತಂದಿದ್ದು, ಹೊಸ ಕಾಯ್ದೆ ಪ್ರಕಾರ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಪುರುಷನ ವೃಷಣಕ್ಕೆ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಆತನ ಲೈಂಗಿಕ ಶಕ್ತಿಯನ್ನು ತೆಗೆದು ಹಾಕುತ್ತಾರೆ. ಆತನಿಗೆ ಮುಂದೆಂದೂ ಲೈಂಗಿಕ ಆಸಕ್ತಿಯೇ ಬರದಂತೆ ಮಾಡಲಾಗುತ್ತದೆ. ಹಾಗೆಯೇ ಮಹಿಳೆಯರು ಕೂಡ ಇಂಥ ಕೃತ್ಯ ಎಸಗಿದಲ್ಲಿ ಅವರಿಗೂ ಇದೇ ರೀತಿಯ ಶಿಕ್ಷೆ ವಿಧಿಸಲಾಗುವುದು. ಇನ್ನು 14 ವರ್ಷದ ಒಳಗಿನ ಮಕ್ಕಳ ಮೇಲೆ ಅತ್ಯಾಚಾರ ನಡೆಸಿದಲ್ಲಿ ಗಲ್ಲು ಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೊಳಿಸಲಾಗಿದೆ.
ಈ ಹಿಂದೆ ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳಿಗೆ ನೈಜೀರಿಯಾದಲ್ಲಿ ಜೀವಾವಧಿ ಶಿಕ್ಷೆ ಮತ್ತು ಇತರೇ ಪ್ರಕರಣಗಳಿಗೆ 21 ವರ್ಷದ ಶಿಕ್ಷೆ ಜಾರಿಯಲ್ಲಿತ್ತು.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm