ಬ್ರೇಕಿಂಗ್ ನ್ಯೂಸ್
17-02-22 01:03 pm Mangalore Correspondent ಕ್ರೈಂ
ಬೆಳ್ತಂಗಡಿ, ಫೆ.17 : ಇಲ್ಲಿನ ಉಜಿರೆ ಪೇಟೆಯ ವೈದ್ಯರೊಬ್ಬರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿ, ಹಿಜಾಬ್ ವಿರುದ್ಧ ಟ್ವೀಟ್ ಮಾಡಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಜಿರೆಯ ಬೆನಕ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಶಂತನು ಆರ್. ಪ್ರಭು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ತನ್ನ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿ ಯಾರೋ ದುಷ್ಕರ್ಮಿಗಳು ಹಿಜಾಬ್ ವಿರುದ್ಧ ಟ್ವೀಟ್ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮಹಿಳೆಯರು, ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸುವ ಅಗತ್ಯವಿಲ್ಲ. ನಾವು ಅದನ್ನು ಬಯಸುವುದಿಲ್ಲ. ಹಾಗೆ ನಿಮಗೆ ಬೇಕಾದಂತೆ ಹಿಜಾಬ್ ಧರಿಸಲು ಇದು ತಾಲಿಬಾನ್, ಸೌದಿ ಅರೇಬಿಯಾ ಅಲ್ಲ ಎಂದು ಟ್ವಿಟರ್ ಖಾತೆಯಲ್ಲಿ ಬರೆಯಲಾಗಿದೆ.

ಶಾಲೆ, ಕಾಲೇಜು ಶಿಕ್ಷಣ ಕಲಿಯುವುದಕ್ಕಾಗಿ ಇರುವುದು. ನಿಮಗೆ ಹಿಜಾಬ್ ಹಾಕ್ಕೊಳ್ಳಬೇಕಿದ್ದರೆ ನೀವು ಮದ್ರಸಾಕ್ಕೆ ಹೋಗಿ ಎಂದು ಬರೆದಿದ್ದಾರೆ. ಅಲ್ಲದೆ, ವೈದ್ಯ ಶಂತನು ಪ್ರಭು ಮಗು ಹಿಡಿದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹಾಕ್ಕೊಂಡಿದ್ದ ಫೋಟೋ ಇರುವುದನ್ನು ಸ್ಕ್ರೀನ್ ಶಾಟ್ ತೆಗೆದು ಟ್ವಿಟರ್ ನಲ್ಲಿ ಹಾಕಲಾಗಿದೆ.
ಬೆನಕ ಆಸ್ಪತ್ರೆ ಮತ್ತು ತನ್ನ ಬಗ್ಗೆ ಸಮಾಜದಲ್ಲಿ ಸುಳ್ಳು ಸುದ್ದಿ ಹರಡುವ ರೀತಿ ಟ್ವೀಟ್ ಮಾಡಿದ್ದಾರೆ. ತಾನು ಕೂಡ ಮುಸ್ಲಿಮರು ನಡೆಸುವ ಮೆಡಿಕಲ್ ಕಾಲೇಜಿನಲ್ಲಿ ಕಲಿತು ಬಂದವನು. ಮುಸ್ಲಿಂ ಹುಡುಗಿಯರು ಹಿಜಾಬ್ ಹಾಕ್ಕೊಳ್ಳುವ ಬಗ್ಗೆ ತಿಳಿದುಕೊಂಡಿದ್ದೇನೆ. ನನ್ನ ತೇಜೋವಧೆ ಮಾಡುವುದಕ್ಕಾಗಿ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಡಾ.ಶಂತನು ಪ್ರಭು ದೂರಿನಲ್ಲಿ ತಿಳಿಸಿದ್ದಾರೆ.
A doctor from Ujire here has filed a complaint alleging that his social media account was hacked by miscreants who used it to upload anti-Hijab posts. Dr Shantanu R Prabhu, a pediatrician of Benaka Hospital Ujire in the taluk has complained to Beltangady police, claiming that his Twitter account has been hacked and a tweet against the Hijab has been posted therein.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm