ಬ್ರೇಕಿಂಗ್ ನ್ಯೂಸ್
17-02-22 01:03 pm Mangalore Correspondent ಕ್ರೈಂ
ಬೆಳ್ತಂಗಡಿ, ಫೆ.17 : ಇಲ್ಲಿನ ಉಜಿರೆ ಪೇಟೆಯ ವೈದ್ಯರೊಬ್ಬರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿ, ಹಿಜಾಬ್ ವಿರುದ್ಧ ಟ್ವೀಟ್ ಮಾಡಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಜಿರೆಯ ಬೆನಕ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಶಂತನು ಆರ್. ಪ್ರಭು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ತನ್ನ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿ ಯಾರೋ ದುಷ್ಕರ್ಮಿಗಳು ಹಿಜಾಬ್ ವಿರುದ್ಧ ಟ್ವೀಟ್ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮಹಿಳೆಯರು, ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸುವ ಅಗತ್ಯವಿಲ್ಲ. ನಾವು ಅದನ್ನು ಬಯಸುವುದಿಲ್ಲ. ಹಾಗೆ ನಿಮಗೆ ಬೇಕಾದಂತೆ ಹಿಜಾಬ್ ಧರಿಸಲು ಇದು ತಾಲಿಬಾನ್, ಸೌದಿ ಅರೇಬಿಯಾ ಅಲ್ಲ ಎಂದು ಟ್ವಿಟರ್ ಖಾತೆಯಲ್ಲಿ ಬರೆಯಲಾಗಿದೆ.

ಶಾಲೆ, ಕಾಲೇಜು ಶಿಕ್ಷಣ ಕಲಿಯುವುದಕ್ಕಾಗಿ ಇರುವುದು. ನಿಮಗೆ ಹಿಜಾಬ್ ಹಾಕ್ಕೊಳ್ಳಬೇಕಿದ್ದರೆ ನೀವು ಮದ್ರಸಾಕ್ಕೆ ಹೋಗಿ ಎಂದು ಬರೆದಿದ್ದಾರೆ. ಅಲ್ಲದೆ, ವೈದ್ಯ ಶಂತನು ಪ್ರಭು ಮಗು ಹಿಡಿದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹಾಕ್ಕೊಂಡಿದ್ದ ಫೋಟೋ ಇರುವುದನ್ನು ಸ್ಕ್ರೀನ್ ಶಾಟ್ ತೆಗೆದು ಟ್ವಿಟರ್ ನಲ್ಲಿ ಹಾಕಲಾಗಿದೆ.
ಬೆನಕ ಆಸ್ಪತ್ರೆ ಮತ್ತು ತನ್ನ ಬಗ್ಗೆ ಸಮಾಜದಲ್ಲಿ ಸುಳ್ಳು ಸುದ್ದಿ ಹರಡುವ ರೀತಿ ಟ್ವೀಟ್ ಮಾಡಿದ್ದಾರೆ. ತಾನು ಕೂಡ ಮುಸ್ಲಿಮರು ನಡೆಸುವ ಮೆಡಿಕಲ್ ಕಾಲೇಜಿನಲ್ಲಿ ಕಲಿತು ಬಂದವನು. ಮುಸ್ಲಿಂ ಹುಡುಗಿಯರು ಹಿಜಾಬ್ ಹಾಕ್ಕೊಳ್ಳುವ ಬಗ್ಗೆ ತಿಳಿದುಕೊಂಡಿದ್ದೇನೆ. ನನ್ನ ತೇಜೋವಧೆ ಮಾಡುವುದಕ್ಕಾಗಿ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಡಾ.ಶಂತನು ಪ್ರಭು ದೂರಿನಲ್ಲಿ ತಿಳಿಸಿದ್ದಾರೆ.
A doctor from Ujire here has filed a complaint alleging that his social media account was hacked by miscreants who used it to upload anti-Hijab posts. Dr Shantanu R Prabhu, a pediatrician of Benaka Hospital Ujire in the taluk has complained to Beltangady police, claiming that his Twitter account has been hacked and a tweet against the Hijab has been posted therein.
03-08-26 01:46 pm
HK News Staffer
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm