ಬ್ರೇಕಿಂಗ್ ನ್ಯೂಸ್
19-09-20 01:27 pm Mangalore Reporter ಕ್ರೈಂ
ಮಂಗಳೂರು, ಸೆಪ್ಟಂಬರ್ 19: ಸ್ಯಾಂಡಲ್ವುಡ್ ಡ್ರಗ್ ಲಿಂಕ್ ಹಿನ್ನೆಲೆಯಲ್ಲಿ ಮಂಗಳೂರು ಮೂಲದ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಶೆಟ್ಟಿಯನ್ನು ಪೊಲೀಸರು ಬಂಧಿಸಿರುವುದು ಖಚಿತವಾಗಿದೆ. ಈತನ ಜೊತೆಗೆ ಸುರತ್ಕಲ್ ಕಾಟಿಪಳ್ಳ ನಿವಾಸಿ ಅಕೀಲ್ ನೌಶೀಲ್ (28) ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಇವರಿಬ್ಬರು ಆಪ್ತರಾಗಿದ್ದು ಎಂಡಿಎಂಎ ಮತ್ತಿತರ ಸಿಂಥೆಟಿಕ್ ಡ್ರಗ್ ಅನ್ನು ವಿವಿಧೆಡೆ ಪೂರೈಕೆ ಮಾಡುತ್ತಿದ್ದರು. ಇವರ ಬಳಿಯಿಂದ ಒಂದು ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಡ್ರಗ್ಸನ್ನು ವಶಕ್ಕೆ ಪಡೆಯಲಾಗಿದೆ. ಆತ ಮಂಗಳೂರು, ಬೆಂಗಳೂರಿನಲ್ಲಿ ಪಾರ್ಟಿ ಮಾಡಿರುವ ಬಗ್ಗೆ ಮಾಹಿತಿಗಳಿವೆ. ಅದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇವರಿಗೆ ಮುಂಬೈನಿಂದ ಡ್ರಗ್ ಪೂರೈಕೆ ಆಗ್ತಾ ಇತ್ತೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಮುಂಬೈನಿಂದ ತರಿಸಿಕೊಂಡು ಮಂಗಳೂರಿನಲ್ಲಿ ಯುವಜನರು, ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದರು. ಇವರ ಜಾಲದಲ್ಲಿ ಇನ್ನಷ್ಟು ಮಂದಿಯಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಆರೋಪಿ ಕಿಶೋರ್ ಅಲಿಯಾಸ್ ಅಮನ್ ಶೆಟ್ಟಿ 2011-12ರಲ್ಲಿ ಝೀಟಿವಿಯಲ್ಲಿ ಪ್ರಸಾರಗೊಂಡಿದ್ದ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಸೀಸನ್ ಎರಡರ ಸ್ಪರ್ಧೆಯಲ್ಲಿ ಬಹುಮಾನ ಪಡೆದಿದ್ದ. ಅಲ್ಲದೆ, ಎಬಿಸಿಡಿ ಎನ್ನುವ ಹಿಂದಿ ಸಿನೆಮಾದಲ್ಲಿ ಅಭಿನಯಿಸಿದ್ದ. ಆಬಳಿಕ ಡ್ಯಾನ್ಸರ್, ಕೊರಿಯೊಗ್ರಾಫರ್ ಆಗಿ ಹೆಸರು ಮಾಡಿದ್ದ. ಬಾಲಿವುಡ್ ಮತ್ತು ಕನ್ನಡ ಚಿತ್ರರಂಗದ ನಂಟು ಹೊಂದಿದ್ದರಿಂದ ಆ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ನೌಶೀಲ್ ಈ ಹಿಂದೆ ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು, ವರ್ಷದ ಹಿಂದೆ ಊರಿಗೆ ಬಂದಿದ್ದ. ಬಳಿಕ ಕೆಲಸ ಇಲ್ಲದೆ ಮುಂಬೈ ನಂಟು ಬೆಳೆಸಿಕೊಂಡು ಮಾದಕ ದ್ರವ್ಯಗಳನ್ನು ತಂದು ಮಾರಾಟ ಮಾಡುತ್ತಿದ್ದ ಎಂದು ಕಮಿಷನರ್ ವಿಕಾಸ್ ಕುಮಾರ್ ಮಾಹಿತಿ ನೀಡಿದ್ದಾರೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am