ಬ್ರೇಕಿಂಗ್ ನ್ಯೂಸ್
19-09-20 01:27 pm Mangalore Reporter ಕ್ರೈಂ
ಮಂಗಳೂರು, ಸೆಪ್ಟಂಬರ್ 19: ಸ್ಯಾಂಡಲ್ವುಡ್ ಡ್ರಗ್ ಲಿಂಕ್ ಹಿನ್ನೆಲೆಯಲ್ಲಿ ಮಂಗಳೂರು ಮೂಲದ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಶೆಟ್ಟಿಯನ್ನು ಪೊಲೀಸರು ಬಂಧಿಸಿರುವುದು ಖಚಿತವಾಗಿದೆ. ಈತನ ಜೊತೆಗೆ ಸುರತ್ಕಲ್ ಕಾಟಿಪಳ್ಳ ನಿವಾಸಿ ಅಕೀಲ್ ನೌಶೀಲ್ (28) ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಇವರಿಬ್ಬರು ಆಪ್ತರಾಗಿದ್ದು ಎಂಡಿಎಂಎ ಮತ್ತಿತರ ಸಿಂಥೆಟಿಕ್ ಡ್ರಗ್ ಅನ್ನು ವಿವಿಧೆಡೆ ಪೂರೈಕೆ ಮಾಡುತ್ತಿದ್ದರು. ಇವರ ಬಳಿಯಿಂದ ಒಂದು ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಡ್ರಗ್ಸನ್ನು ವಶಕ್ಕೆ ಪಡೆಯಲಾಗಿದೆ. ಆತ ಮಂಗಳೂರು, ಬೆಂಗಳೂರಿನಲ್ಲಿ ಪಾರ್ಟಿ ಮಾಡಿರುವ ಬಗ್ಗೆ ಮಾಹಿತಿಗಳಿವೆ. ಅದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇವರಿಗೆ ಮುಂಬೈನಿಂದ ಡ್ರಗ್ ಪೂರೈಕೆ ಆಗ್ತಾ ಇತ್ತೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಮುಂಬೈನಿಂದ ತರಿಸಿಕೊಂಡು ಮಂಗಳೂರಿನಲ್ಲಿ ಯುವಜನರು, ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದರು. ಇವರ ಜಾಲದಲ್ಲಿ ಇನ್ನಷ್ಟು ಮಂದಿಯಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಆರೋಪಿ ಕಿಶೋರ್ ಅಲಿಯಾಸ್ ಅಮನ್ ಶೆಟ್ಟಿ 2011-12ರಲ್ಲಿ ಝೀಟಿವಿಯಲ್ಲಿ ಪ್ರಸಾರಗೊಂಡಿದ್ದ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಸೀಸನ್ ಎರಡರ ಸ್ಪರ್ಧೆಯಲ್ಲಿ ಬಹುಮಾನ ಪಡೆದಿದ್ದ. ಅಲ್ಲದೆ, ಎಬಿಸಿಡಿ ಎನ್ನುವ ಹಿಂದಿ ಸಿನೆಮಾದಲ್ಲಿ ಅಭಿನಯಿಸಿದ್ದ. ಆಬಳಿಕ ಡ್ಯಾನ್ಸರ್, ಕೊರಿಯೊಗ್ರಾಫರ್ ಆಗಿ ಹೆಸರು ಮಾಡಿದ್ದ. ಬಾಲಿವುಡ್ ಮತ್ತು ಕನ್ನಡ ಚಿತ್ರರಂಗದ ನಂಟು ಹೊಂದಿದ್ದರಿಂದ ಆ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ನೌಶೀಲ್ ಈ ಹಿಂದೆ ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು, ವರ್ಷದ ಹಿಂದೆ ಊರಿಗೆ ಬಂದಿದ್ದ. ಬಳಿಕ ಕೆಲಸ ಇಲ್ಲದೆ ಮುಂಬೈ ನಂಟು ಬೆಳೆಸಿಕೊಂಡು ಮಾದಕ ದ್ರವ್ಯಗಳನ್ನು ತಂದು ಮಾರಾಟ ಮಾಡುತ್ತಿದ್ದ ಎಂದು ಕಮಿಷನರ್ ವಿಕಾಸ್ ಕುಮಾರ್ ಮಾಹಿತಿ ನೀಡಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am