ಬ್ರೇಕಿಂಗ್ ನ್ಯೂಸ್
19-09-20 01:27 pm Mangalore Reporter ಕ್ರೈಂ
ಮಂಗಳೂರು, ಸೆಪ್ಟಂಬರ್ 19: ಸ್ಯಾಂಡಲ್ವುಡ್ ಡ್ರಗ್ ಲಿಂಕ್ ಹಿನ್ನೆಲೆಯಲ್ಲಿ ಮಂಗಳೂರು ಮೂಲದ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಶೆಟ್ಟಿಯನ್ನು ಪೊಲೀಸರು ಬಂಧಿಸಿರುವುದು ಖಚಿತವಾಗಿದೆ. ಈತನ ಜೊತೆಗೆ ಸುರತ್ಕಲ್ ಕಾಟಿಪಳ್ಳ ನಿವಾಸಿ ಅಕೀಲ್ ನೌಶೀಲ್ (28) ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಇವರಿಬ್ಬರು ಆಪ್ತರಾಗಿದ್ದು ಎಂಡಿಎಂಎ ಮತ್ತಿತರ ಸಿಂಥೆಟಿಕ್ ಡ್ರಗ್ ಅನ್ನು ವಿವಿಧೆಡೆ ಪೂರೈಕೆ ಮಾಡುತ್ತಿದ್ದರು. ಇವರ ಬಳಿಯಿಂದ ಒಂದು ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಡ್ರಗ್ಸನ್ನು ವಶಕ್ಕೆ ಪಡೆಯಲಾಗಿದೆ. ಆತ ಮಂಗಳೂರು, ಬೆಂಗಳೂರಿನಲ್ಲಿ ಪಾರ್ಟಿ ಮಾಡಿರುವ ಬಗ್ಗೆ ಮಾಹಿತಿಗಳಿವೆ. ಅದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇವರಿಗೆ ಮುಂಬೈನಿಂದ ಡ್ರಗ್ ಪೂರೈಕೆ ಆಗ್ತಾ ಇತ್ತೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಮುಂಬೈನಿಂದ ತರಿಸಿಕೊಂಡು ಮಂಗಳೂರಿನಲ್ಲಿ ಯುವಜನರು, ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದರು. ಇವರ ಜಾಲದಲ್ಲಿ ಇನ್ನಷ್ಟು ಮಂದಿಯಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಆರೋಪಿ ಕಿಶೋರ್ ಅಲಿಯಾಸ್ ಅಮನ್ ಶೆಟ್ಟಿ 2011-12ರಲ್ಲಿ ಝೀಟಿವಿಯಲ್ಲಿ ಪ್ರಸಾರಗೊಂಡಿದ್ದ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಸೀಸನ್ ಎರಡರ ಸ್ಪರ್ಧೆಯಲ್ಲಿ ಬಹುಮಾನ ಪಡೆದಿದ್ದ. ಅಲ್ಲದೆ, ಎಬಿಸಿಡಿ ಎನ್ನುವ ಹಿಂದಿ ಸಿನೆಮಾದಲ್ಲಿ ಅಭಿನಯಿಸಿದ್ದ. ಆಬಳಿಕ ಡ್ಯಾನ್ಸರ್, ಕೊರಿಯೊಗ್ರಾಫರ್ ಆಗಿ ಹೆಸರು ಮಾಡಿದ್ದ. ಬಾಲಿವುಡ್ ಮತ್ತು ಕನ್ನಡ ಚಿತ್ರರಂಗದ ನಂಟು ಹೊಂದಿದ್ದರಿಂದ ಆ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ನೌಶೀಲ್ ಈ ಹಿಂದೆ ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು, ವರ್ಷದ ಹಿಂದೆ ಊರಿಗೆ ಬಂದಿದ್ದ. ಬಳಿಕ ಕೆಲಸ ಇಲ್ಲದೆ ಮುಂಬೈ ನಂಟು ಬೆಳೆಸಿಕೊಂಡು ಮಾದಕ ದ್ರವ್ಯಗಳನ್ನು ತಂದು ಮಾರಾಟ ಮಾಡುತ್ತಿದ್ದ ಎಂದು ಕಮಿಷನರ್ ವಿಕಾಸ್ ಕುಮಾರ್ ಮಾಹಿತಿ ನೀಡಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm