ಬ್ರೇಕಿಂಗ್ ನ್ಯೂಸ್
19-09-20 01:27 pm Mangalore Reporter ಕ್ರೈಂ
ಮಂಗಳೂರು, ಸೆಪ್ಟಂಬರ್ 19: ಸ್ಯಾಂಡಲ್ವುಡ್ ಡ್ರಗ್ ಲಿಂಕ್ ಹಿನ್ನೆಲೆಯಲ್ಲಿ ಮಂಗಳೂರು ಮೂಲದ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಶೆಟ್ಟಿಯನ್ನು ಪೊಲೀಸರು ಬಂಧಿಸಿರುವುದು ಖಚಿತವಾಗಿದೆ. ಈತನ ಜೊತೆಗೆ ಸುರತ್ಕಲ್ ಕಾಟಿಪಳ್ಳ ನಿವಾಸಿ ಅಕೀಲ್ ನೌಶೀಲ್ (28) ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಇವರಿಬ್ಬರು ಆಪ್ತರಾಗಿದ್ದು ಎಂಡಿಎಂಎ ಮತ್ತಿತರ ಸಿಂಥೆಟಿಕ್ ಡ್ರಗ್ ಅನ್ನು ವಿವಿಧೆಡೆ ಪೂರೈಕೆ ಮಾಡುತ್ತಿದ್ದರು. ಇವರ ಬಳಿಯಿಂದ ಒಂದು ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಡ್ರಗ್ಸನ್ನು ವಶಕ್ಕೆ ಪಡೆಯಲಾಗಿದೆ. ಆತ ಮಂಗಳೂರು, ಬೆಂಗಳೂರಿನಲ್ಲಿ ಪಾರ್ಟಿ ಮಾಡಿರುವ ಬಗ್ಗೆ ಮಾಹಿತಿಗಳಿವೆ. ಅದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇವರಿಗೆ ಮುಂಬೈನಿಂದ ಡ್ರಗ್ ಪೂರೈಕೆ ಆಗ್ತಾ ಇತ್ತೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಮುಂಬೈನಿಂದ ತರಿಸಿಕೊಂಡು ಮಂಗಳೂರಿನಲ್ಲಿ ಯುವಜನರು, ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದರು. ಇವರ ಜಾಲದಲ್ಲಿ ಇನ್ನಷ್ಟು ಮಂದಿಯಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಆರೋಪಿ ಕಿಶೋರ್ ಅಲಿಯಾಸ್ ಅಮನ್ ಶೆಟ್ಟಿ 2011-12ರಲ್ಲಿ ಝೀಟಿವಿಯಲ್ಲಿ ಪ್ರಸಾರಗೊಂಡಿದ್ದ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಸೀಸನ್ ಎರಡರ ಸ್ಪರ್ಧೆಯಲ್ಲಿ ಬಹುಮಾನ ಪಡೆದಿದ್ದ. ಅಲ್ಲದೆ, ಎಬಿಸಿಡಿ ಎನ್ನುವ ಹಿಂದಿ ಸಿನೆಮಾದಲ್ಲಿ ಅಭಿನಯಿಸಿದ್ದ. ಆಬಳಿಕ ಡ್ಯಾನ್ಸರ್, ಕೊರಿಯೊಗ್ರಾಫರ್ ಆಗಿ ಹೆಸರು ಮಾಡಿದ್ದ. ಬಾಲಿವುಡ್ ಮತ್ತು ಕನ್ನಡ ಚಿತ್ರರಂಗದ ನಂಟು ಹೊಂದಿದ್ದರಿಂದ ಆ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ನೌಶೀಲ್ ಈ ಹಿಂದೆ ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು, ವರ್ಷದ ಹಿಂದೆ ಊರಿಗೆ ಬಂದಿದ್ದ. ಬಳಿಕ ಕೆಲಸ ಇಲ್ಲದೆ ಮುಂಬೈ ನಂಟು ಬೆಳೆಸಿಕೊಂಡು ಮಾದಕ ದ್ರವ್ಯಗಳನ್ನು ತಂದು ಮಾರಾಟ ಮಾಡುತ್ತಿದ್ದ ಎಂದು ಕಮಿಷನರ್ ವಿಕಾಸ್ ಕುಮಾರ್ ಮಾಹಿತಿ ನೀಡಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm