ಬ್ರೇಕಿಂಗ್ ನ್ಯೂಸ್
19-09-20 01:27 pm Mangalore Reporter ಕ್ರೈಂ
ಮಂಗಳೂರು, ಸೆಪ್ಟಂಬರ್ 19: ಸ್ಯಾಂಡಲ್ವುಡ್ ಡ್ರಗ್ ಲಿಂಕ್ ಹಿನ್ನೆಲೆಯಲ್ಲಿ ಮಂಗಳೂರು ಮೂಲದ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಶೆಟ್ಟಿಯನ್ನು ಪೊಲೀಸರು ಬಂಧಿಸಿರುವುದು ಖಚಿತವಾಗಿದೆ. ಈತನ ಜೊತೆಗೆ ಸುರತ್ಕಲ್ ಕಾಟಿಪಳ್ಳ ನಿವಾಸಿ ಅಕೀಲ್ ನೌಶೀಲ್ (28) ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಇವರಿಬ್ಬರು ಆಪ್ತರಾಗಿದ್ದು ಎಂಡಿಎಂಎ ಮತ್ತಿತರ ಸಿಂಥೆಟಿಕ್ ಡ್ರಗ್ ಅನ್ನು ವಿವಿಧೆಡೆ ಪೂರೈಕೆ ಮಾಡುತ್ತಿದ್ದರು. ಇವರ ಬಳಿಯಿಂದ ಒಂದು ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಡ್ರಗ್ಸನ್ನು ವಶಕ್ಕೆ ಪಡೆಯಲಾಗಿದೆ. ಆತ ಮಂಗಳೂರು, ಬೆಂಗಳೂರಿನಲ್ಲಿ ಪಾರ್ಟಿ ಮಾಡಿರುವ ಬಗ್ಗೆ ಮಾಹಿತಿಗಳಿವೆ. ಅದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಇವರಿಗೆ ಮುಂಬೈನಿಂದ ಡ್ರಗ್ ಪೂರೈಕೆ ಆಗ್ತಾ ಇತ್ತೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಮುಂಬೈನಿಂದ ತರಿಸಿಕೊಂಡು ಮಂಗಳೂರಿನಲ್ಲಿ ಯುವಜನರು, ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದರು. ಇವರ ಜಾಲದಲ್ಲಿ ಇನ್ನಷ್ಟು ಮಂದಿಯಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಆರೋಪಿ ಕಿಶೋರ್ ಅಲಿಯಾಸ್ ಅಮನ್ ಶೆಟ್ಟಿ 2011-12ರಲ್ಲಿ ಝೀಟಿವಿಯಲ್ಲಿ ಪ್ರಸಾರಗೊಂಡಿದ್ದ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಸೀಸನ್ ಎರಡರ ಸ್ಪರ್ಧೆಯಲ್ಲಿ ಬಹುಮಾನ ಪಡೆದಿದ್ದ. ಅಲ್ಲದೆ, ಎಬಿಸಿಡಿ ಎನ್ನುವ ಹಿಂದಿ ಸಿನೆಮಾದಲ್ಲಿ ಅಭಿನಯಿಸಿದ್ದ. ಆಬಳಿಕ ಡ್ಯಾನ್ಸರ್, ಕೊರಿಯೊಗ್ರಾಫರ್ ಆಗಿ ಹೆಸರು ಮಾಡಿದ್ದ. ಬಾಲಿವುಡ್ ಮತ್ತು ಕನ್ನಡ ಚಿತ್ರರಂಗದ ನಂಟು ಹೊಂದಿದ್ದರಿಂದ ಆ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ನೌಶೀಲ್ ಈ ಹಿಂದೆ ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು, ವರ್ಷದ ಹಿಂದೆ ಊರಿಗೆ ಬಂದಿದ್ದ. ಬಳಿಕ ಕೆಲಸ ಇಲ್ಲದೆ ಮುಂಬೈ ನಂಟು ಬೆಳೆಸಿಕೊಂಡು ಮಾದಕ ದ್ರವ್ಯಗಳನ್ನು ತಂದು ಮಾರಾಟ ಮಾಡುತ್ತಿದ್ದ ಎಂದು ಕಮಿಷನರ್ ವಿಕಾಸ್ ಕುಮಾರ್ ಮಾಹಿತಿ ನೀಡಿದ್ದಾರೆ.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm