ಬ್ರೇಕಿಂಗ್ ನ್ಯೂಸ್
23-02-22 11:00 am Mangalore Correspondent ಕ್ರೈಂ
ಉಳ್ಳಾಲ, ಫೆ.23 : ತಲಪಾಡಿಯ ಸಾಮಾಜಿಕ ಕಾರ್ಯಕರ್ತ ಯಶು ಪಕ್ಕಳ ಎಂಬವರ ಮೇಲೆ ತಲಪಾಡಿ ಗ್ರಾಮ ಪಂಚಾಯತ್ ಸದಸ್ಯ ಶೈಲೇಶ್ ಮತ್ತು ತಂಡ ಮಾರಣಾಂತಿಕ ಹಲ್ಲೆ ನಡೆಸಿದ್ದು ಕೇಸು ಕೊಟ್ಟರೆ ಬಿಜೆಪಿ ಪವರ್ ಬಳಸಿ ತಾನೂ ಅಡ್ಮಿಟ್ ಆಗುತ್ತೇನೆಂದು ಹಲ್ಲೆಕೋರ ವ್ಯಕ್ತಿ ಧಮ್ಕಿ ಹಾಕಿದ ಘಟನೆ ನಡೆದಿದೆ.
ಮಂಗಳವಾರ ಸಂಜೆ ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಮುಂಭಾಗದ ಪ್ರದೇಶದಲ್ಲಿ ಯಶು ಪಕ್ಕಳ ಮೇಲೆ ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯ ಶೈಲೇಶ್ ಮತ್ತು ಗ್ಯಾಂಗ್ ಆಕ್ರಮಣ ನಡೆಸಿದ್ದು ಸೋಂಟೆಯಿಂದ ತಲೆಗೆ ಹಲ್ಲೆ ನಡೆಸಿದೆ. ದುರ್ಗಾಪರಮೇಶ್ವರಿ ಕ್ಷೇತ್ರದ ಮುಂಭಾಗದಲ್ಲಿ ಪಂಚಾಯತ್ ಅನುದಾನದಲ್ಲಿ ನಡೆಯುತ್ತಿದ್ದ ಮೋರಿ ಕಾಮಗಾರಿಯನ್ನ ನೋಡಲು ತೆರಳಿದ್ದ ಯಶು ಪಕ್ಕಳ ಅವರಿಗೆ ಹಲ್ಲೆ ನಡೆದಿದ್ದು ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಾಳು ಯಶು ಅವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾ.ಪಂ ಸದಸ್ಯ ಶೈಲೇಶ್ ಮತ್ತು ಇತರ ನಾಲ್ಕೈದು ಮಂದಿ ಸೇರಿ ತನ್ನ ಜಮೀನಿಗೆ ಅಕ್ರಮ ಪ್ರವೇಶಿಸಿ ನನ್ನನ್ನು ಹಿಡಿದಿಟ್ಟು ಸೋಂಟೆಯಿಂದ ಹಲ್ಲೆ ನಡೆಸಿರುವುದಾಗಿ ಯಶು ಆರೋಪಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಕೇಸು ಕೊಟ್ಟರೆ ಬಿಜೆಪಿಯ ಪವರ್ ಬಳಸಿ ನಿನಗಿಂತ ಮೊದಲು ತಾನು ಆಸ್ಪತ್ರೆಗೆ ದಾಖಲಾಗುವುದಾಗಿ ಶೈಲೇಶ್ ಹೇಳಿದ್ದಾಗಿ ಯಶು ಪಕ್ಕಳ ಆರೋಪಿಸಿದ್ದಾರೆ. ಹಲ್ಲೆ ಘಟನೆಯು ದೇವಸ್ಥಾನಕ್ಕೆ ಅಳವಡಿಸಿರುವ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿರುವುದಾಗಿ ಯಶು ತಿಳಿಸಿದ್ದು ಉಳ್ಳಾಲ ಪೊಲೀಸರು ಇದನ್ನ ಪರಿಶೀಲಿಸಬೇಕಿದೆ.

ಆಸ್ಪತ್ರೆಗೆ ಎಸಿಪಿ ದಿನಕರ ಶೆಟ್ಟಿ ಭೇಟಿ ನೀಡಿ ವರದಿ ಪಡೆದಿದ್ದಾರೆ. ಯಶು ಪಕ್ಕಳ ಅವರು ತಲಪಾಡಿ ಗಡಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ, ಸ್ಥಳೀಯ ಗ್ರಾಮ ಪಂಚಾಯತ್ ಮತ್ತು ಪುರಾಣ ಪ್ರಸಿದ್ಧ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ನಿರಂತರ ಧ್ವನಿ ಎತ್ತುತ್ತಿರುವುದು ಕೆಲವರ ಕಣ್ಣು ಕೆಂಪು ಮಾಡಿತ್ತು. ಗ್ರಾಮ ಸದಸ್ಯ ಶೈಲೇಶ್ ಕೂಡ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಯಶು ಪಕ್ಕಳ ವಿರುದ್ಧ ದೂರು ದಾಖಲಿಸಿದ್ದಾರೆ.
In an incident reported from near Talapady Devinagara, a social activist, Yashu Pakala, came under savagely attack. Talapady gram panchayat member Shylesh, and eight others reportedly formed a gang and attacked Yashu Pakala. Pakala is now being treated in a private hospital in Natekal.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm