ಬ್ರೇಕಿಂಗ್ ನ್ಯೂಸ್
23-02-22 10:23 pm Mangalore Correspondent ಕ್ರೈಂ
ಬಂಟ್ವಾಳ, ಫೆ.23 : ಹಣಕಾಸಿನ ವಿಚಾರದಲ್ಲಿ ಗಂಡ ಹೆಂಡತಿ ನಡುವಿನ ಜಗಳ ಕೊನೆಗೆ ಪತಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಾರದ ಹಿಂದೆ ಬಂಟ್ವಾಳದಲ್ಲಿ ಘಟನೆ ನಡೆದಿದ್ದು, ಮೃತರ ಪೋಸ್ಟ್ ಮಾರ್ಟಂ ವರದಿಯಂತೆ ಪೊಲೀಸರು ಕೇಸು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಬರಮೇಲು ನಿವಾಸಿ ಕೇಶವ ಪೂಜಾರಿ(47) ಮೃತರು. ಮಣಿನಾಲ್ಕೂರು ನಿವಾಸಿ, ಮೃತರ ಭಾವ ಅಶೋಕ್ ಅಲಿಯಾಸ್ ಚಂದಪ್ಪ ಪೂಜಾರಿ(45) ಆರೋಪಿಯಾಗಿದ್ದು, ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಮೃತ ಕೇಶವ ಪೂಜಾರಿ ಮಂಗಳೂರಿನ ಹೊಟೇಲ್ ಒಂದರಲ್ಲಿ ಅಡುಗೆ ಕಾರ್ಮಿಕನಾಗಿದ್ದು, ಜನವರಿ 31ರಂದು ಮನೆಗೆ ಬಂದಿದ್ದ ವೇಳೆ ತನ್ನ ದುಡಿದ ಹಣವನ್ನು ಪತ್ನಿ ಪ್ರೇಮಾಗೆ ಕೊಟ್ಟಿದ್ದರು ಎನ್ನಲಾಗಿದೆ. ಆನಂತರ, ಅದರಲ್ಲಿ ನೂರು ರೂ. ಖರ್ಚಿಗೆ ಕೊಡುವಂತೆ ಕೇಳಿದ್ದು, ಅದೇ ವಿಚಾರದಲ್ಲಿ ಪತಿ- ಪತ್ನಿ ನಡುವೆ ಕಲಹ ನಡೆದಿತ್ತು.
ಆನಂತರ ಪತ್ನಿ ಪ್ರೇಮಾ ಈ ಬಗ್ಗೆ ತನ್ನ ಸೋದರ ಚಂದಪ್ಪನಿಗೆ ವಿಷಯ ತಿಳಿಸಿದ್ದು ಆತ ಇವರ ಮನೆಗೆ ಬಂದಿದ್ದ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿದ್ದು, ಕೇಶವ ಮೇಲೆ ಚಂದಪ್ಪ ಪೂಜಾರಿ ಹಲ್ಲೆ ನಡೆಸಿದ್ದ. ಹಲ್ಲೆಯಿಂದ ಗಾಯಗೊಂಡ ಕೇಶವ ಅವರನ್ನು ತಾಯಿ ಲೀಲಾ ಅವರು ಬಂಟ್ವಾಳ ಸರಕಾರಿ ಸರಕಾರಿ ಆಸ್ಪತ್ರೆಗೆ ಒಯ್ದು ಚಿಕಿತ್ಸೆ ಒದಗಿಸಿದ್ದರು. ಆನಂತರ, ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದರು.
A squabble between a couple has ended in the fatal assault of the husband in the hands of his brother-in-law. Bantwal taluk Tenkakajekar, Baramelu resident Keshava Poojary (47) is the deceased. The police have arrested his brother-in law Maninalkur resident Ashok alias Chandappa Poojary (45).
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm