ಬ್ರೇಕಿಂಗ್ ನ್ಯೂಸ್
25-02-22 07:39 pm HK Desk news ಕ್ರೈಂ
ಶಿವಮೊಗ್ಗ, ಫೆ.25 : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಹತ್ತು ಮಂದಿಯನ್ನು ಬಂಧಿಸಿದ್ದೇವೆ. ವಶಕ್ಕೆ ಪಡೆದವರ ವಿಚಾರಣೆ ಆರಂಭಿಸುತ್ತೇವೆ. ವಿಚಾರಣೆ ಬಳಿಕ ಬೇರೆ ಈ ಪ್ರಕರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದು ತಿಳಿಯಲಿದೆ. 14 ದಿನಗಳ ಬಳಿಕ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ ಎಂದು ಶಿವಮೊಗ್ಗ ಎಸ್ಪಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹರ್ಷನ ಕೊಲೆಗೆ ಬಳಸಿದ್ದ ಕಾರನ್ನು ಹಾಗೂ ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿದ್ದ ಕಾರು ಹಾಗೂ ಬೈಕನ್ನು ವಶಕ್ಕೆ ಪಡೆದಿದ್ದೇವೆ. ಕೊಲೆ ಮಾಡಲು ಬೇರೆ ರಾಜ್ಯದ ಕಾರನ್ನು ಬಳಸಿಕೊಂಡಿದ್ದಾರೆ. ಆ ಕಾರು ಯಾರದ್ದು, ಶಿವಮೊಗ್ಗಕ್ಕೆ ಯಾಕೆ ಬಂತು, ಕಾರಿನ ಮಾಲಕರು ಯಾರು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದರು.

ವಿಡಿಯೋ ಕಾಲ್ ಮಾಡಿದವರ ಪತ್ತೆ
ಕೊಲೆಯಾದ ಹರ್ಷನ ಮೊಬೈಲ್ ಫೋನ್ ಇದುವರೆಗೂ ಪತ್ತೆಯಾಗಿಲ್ಲ. ಆದರೆ ಆತನಿಗೆ ಕೊಲೆಯಾಗೋದಕ್ಕೂ ಮುನ್ನ ವೀಡಿಯೋ ಕರೆ ಮಾಡಿದವರನ್ನು ಪತ್ತೆ ಮಾಡಿದ್ದೇವೆ. ವಿಡಿಯೋ ಕರೆ ಮಾಡಿದವರಿಗೂ ಹಂತಕರಿಗೂ ಯಾವುದೇ ಸಂಬಂಧ ಇಲ್ಲ. ಅದರ ಬಗ್ಗೆ ವಿಚಾರಣೆ ಮಾಡಿದ್ದೇವೆ. ಮೆರವಣಿಗೆ ವೇಳೆ ಪೊಲೀಸರಿಗೆ ಲಾಂಗ್- ಮಚ್ಚು ತೋರಿಸಿ ಬೆದರಿಕೆ ಹಾಕಿದವರು ಯಾರು ಎಂಬುದು ಗೊತ್ತಾಗಿದೆ. ಸಿಸಿಟಿವಿ ಆಧರಿಸಿ ಅವರನ್ನು ಶೀಘ್ರವೇ ಬಂಧಿಸುತ್ತೇವೆ ಎಂದು ಎಸ್ಪಿ ಮಾಹಿತಿ ನೀಡಿದರು.
ಹರ್ಷ ಕೊಲೆ ಪ್ರಕರಣದಲ್ಲಿ ಸಾತು ಆ್ಯಂಡ್ ಗ್ಯಾಂಗ್ ಭಾಗಿಯಾಗಿತ್ತೇ ಎಂಬ ಪ್ರಶ್ನೆಗೆ, ಆ ಬಗ್ಗೆ ತನಿಖೆ ನಡೆಸುತಿದ್ದೇವೆ. ಕೊಲೆ ಹಿಂದೆ ಯಾವುದಾದರೂ ಸಂಘಟನೆಗಳಿವೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಖಾಸಿಫ್, ಆಸಿಫ್ ಮೇಲೆ ಐದು, ರಿಹಾನ್ ಮೇಲೆ ಮೂರು ಹಾಗೂ ಅಫ್ನಾನ್ ಮೇಲೆ ಎರಡು ಕಾನೂನು ಸುವ್ಯವಸ್ಥೆಗೆ ಧಕ್ಕೆ ಎಸಗಿದ ಕೋಮು ವೈಷಮ್ಯದ ಪ್ರಕರಣಗಳಿವೆ. ಉಳಿದಂತೆ ಡಕಾಯಿತಿ, ಕಳ್ಳತನ ಪ್ರಕರಣಗಳು ದಾಖಲಾಗಿವೆ. ಕೊಲೆಯಾದ ಹರ್ಷನ ಮೇಲೆ ಧರ್ಮ ದ್ವೇಷ ಸಂಬಂಧಿಸಿದ ಎರಡು ಪ್ರಕರಣ ದಾಖಲಾಗಿತ್ತು ಎಂದು ಎಸ್ಪಿ ಹೇಳಿದರು.
Harsha Murder case 10 arrested so far, investigating organisation support angle says SP Lakshmi Prasad.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm