ಬ್ರೇಕಿಂಗ್ ನ್ಯೂಸ್
25-02-22 11:00 pm Mangalore Correspondent ಕ್ರೈಂ
ಬೆಳ್ತಂಗಡಿ, ಫೆ.25 : ಧರ್ಮಸ್ಥಳ ಭಾಗದಲ್ಲಿ ಬಜರಂಗದಳ ಮತ್ತು ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿರುವ ವ್ಯಕ್ತಿಯೊಬ್ಬ ದಲಿತ ವ್ಯಕ್ತಿಗೆ ಕ್ಷುಲ್ಲಕ ಕಾರಣಕ್ಕೆ ತುಳಿದು ಹಲ್ಲೆಗೊಳಿಸಿದ ಘಟನೆ ನಡೆದಿದ್ದು, ತರುವಾಯ ಎರಡು ದಿನಗಳ ಬಳಿಕ ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಕೊಲೆಯಾದ ವ್ಯಕ್ತಿ ದಿನೇಶ್ ನಾಯ್ಕ (41) ಎಂಬವನಾಗಿದ್ದು, ಆರೋಪಿಯನ್ನು ಕಿಟ್ಟ ಅಲಿಯಾಸ್ ಕೃಷ್ಣ ಡಿ. ಎಂದು ಗುರುತಿಸಲಾಗಿದೆ. ಫೆ.23ರಂದು ದಿನೇಶ್ ನಾಯ್ಕ, ಕೃಷ್ಣನಿಗೆ ಸೇರಿದ ಅಂಗಡಿಯ ಮುಂದೆ ಬಂದು ಜಾಗದ ದಾಖಲೆಗಳನ್ನು ಮಾಡಿಕೊಟ್ಟಿರುವ ವಿಚಾರದಲ್ಲಿ ತಗಾದೆ ತೆಗೆದಿದ್ದು, ಮಾತಿಗೆ ಮಾತು ಬೆಳೆದು ಕೃಷ್ಣ, ದಿನೇಶ ನಾಯ್ಕನ ಮೇಲೆ ಹಲ್ಲೆಗೈದು ಹೊಟ್ಟೆಗೆ ತುಳಿದಿದ್ದ. ಇದರಿಂದ ತೀವ್ರ ನೋವಿಗೆ ಒಳಗಾಗಿದ್ದ ದಿನೇಶ ನಾಯ್ಕ ಮನೆಗೆ ತೆರಳಿ, ಆಗಿರುವ ವಿಚಾರವನ್ನು ಮನೆಯವರಲ್ಲಿ ಹೇಳಿ ನೋವಿನಲ್ಲಿ ಮಲಗಿದ್ದ.
ಆನಂತರ, ಹೊಟ್ಟೆಯ ಭಾಗಕ್ಕೆ ಹಲ್ಲೆಯಾಗಿದ್ದರಿಂದ ನೋವಿನಿಂದ ಬಳಲುತ್ತಿದ್ದ ಮಗನ ಬಗ್ಗೆ, ದಿನೇಶ್ ನಾಯ್ಕನ ತಾಯಿ ಆರೋಪಿ ಕೃಷ್ಣನ ಬಳಿಗೆ ಬಂದು, ನೀನು ಹಲ್ಲೆ ನಡೆಸಿದ್ದರಿಂದ ಗಾಯಗೊಂಡಿದ್ದಾನೆ. ನನಗೆ ಆತನನ್ನು ಆಸ್ಪತ್ರೆಗೆ ಒಯ್ಯಲು ಹಣ ಇಲ್ಲ. ನೀನೇ ಆಸ್ಪತ್ರೆಗೆ ಕರೆದುಕೊಂಡು ಹೋಗು ಎಂದು ಹೇಳಿದ್ದರು. ಅದರಂತೆ, ಆರೋಪಿ ಕೃಷ್ಣ, ದಿನೇಶ್ ನಾಯ್ಕನನ್ನು ಆತನ ಪತ್ನಿಯ ಜೊತೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ದಾಖಲು ಮಾಡಿದ್ದ. ಅಲ್ಲದೆ, ವೈದ್ಯರಲ್ಲಿ ಮೆಟ್ಟಿಲಿನಿಂದ ಬಿದ್ದು ಗಾಯಗೊಂಡಿರುವುದಾಗಿ ಸುಳ್ಳು ಹೇಳಿದ್ದ. ಆದರೆ ದಿನೇಶ್ ಫೆ.25ರಂದು ನಸುಕಿನಲ್ಲಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಇದರ ಬಗ್ಗೆ ದಿನೇಶ್ ನಾಯ್ಕನ ತಾಯಿ ಪದ್ಮಾವತಿ, ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದು ಆರೋಪಿ ಕೃಷ್ಣನ ಹಲ್ಲೆಯಿಂದಲೇ ಮೃತಪಟ್ಟಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾರೆ.
Dharmasthala BJP member alleged of assault and Murder, case filed. The deceased has been identified as Dinesh Nayak.
26-08-25 02:04 pm
Bangalore Correspondent
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am