ಬ್ರೇಕಿಂಗ್ ನ್ಯೂಸ್
25-02-22 11:00 pm Mangalore Correspondent ಕ್ರೈಂ
ಬೆಳ್ತಂಗಡಿ, ಫೆ.25 : ಧರ್ಮಸ್ಥಳ ಭಾಗದಲ್ಲಿ ಬಜರಂಗದಳ ಮತ್ತು ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿರುವ ವ್ಯಕ್ತಿಯೊಬ್ಬ ದಲಿತ ವ್ಯಕ್ತಿಗೆ ಕ್ಷುಲ್ಲಕ ಕಾರಣಕ್ಕೆ ತುಳಿದು ಹಲ್ಲೆಗೊಳಿಸಿದ ಘಟನೆ ನಡೆದಿದ್ದು, ತರುವಾಯ ಎರಡು ದಿನಗಳ ಬಳಿಕ ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಕೊಲೆಯಾದ ವ್ಯಕ್ತಿ ದಿನೇಶ್ ನಾಯ್ಕ (41) ಎಂಬವನಾಗಿದ್ದು, ಆರೋಪಿಯನ್ನು ಕಿಟ್ಟ ಅಲಿಯಾಸ್ ಕೃಷ್ಣ ಡಿ. ಎಂದು ಗುರುತಿಸಲಾಗಿದೆ. ಫೆ.23ರಂದು ದಿನೇಶ್ ನಾಯ್ಕ, ಕೃಷ್ಣನಿಗೆ ಸೇರಿದ ಅಂಗಡಿಯ ಮುಂದೆ ಬಂದು ಜಾಗದ ದಾಖಲೆಗಳನ್ನು ಮಾಡಿಕೊಟ್ಟಿರುವ ವಿಚಾರದಲ್ಲಿ ತಗಾದೆ ತೆಗೆದಿದ್ದು, ಮಾತಿಗೆ ಮಾತು ಬೆಳೆದು ಕೃಷ್ಣ, ದಿನೇಶ ನಾಯ್ಕನ ಮೇಲೆ ಹಲ್ಲೆಗೈದು ಹೊಟ್ಟೆಗೆ ತುಳಿದಿದ್ದ. ಇದರಿಂದ ತೀವ್ರ ನೋವಿಗೆ ಒಳಗಾಗಿದ್ದ ದಿನೇಶ ನಾಯ್ಕ ಮನೆಗೆ ತೆರಳಿ, ಆಗಿರುವ ವಿಚಾರವನ್ನು ಮನೆಯವರಲ್ಲಿ ಹೇಳಿ ನೋವಿನಲ್ಲಿ ಮಲಗಿದ್ದ.
ಆನಂತರ, ಹೊಟ್ಟೆಯ ಭಾಗಕ್ಕೆ ಹಲ್ಲೆಯಾಗಿದ್ದರಿಂದ ನೋವಿನಿಂದ ಬಳಲುತ್ತಿದ್ದ ಮಗನ ಬಗ್ಗೆ, ದಿನೇಶ್ ನಾಯ್ಕನ ತಾಯಿ ಆರೋಪಿ ಕೃಷ್ಣನ ಬಳಿಗೆ ಬಂದು, ನೀನು ಹಲ್ಲೆ ನಡೆಸಿದ್ದರಿಂದ ಗಾಯಗೊಂಡಿದ್ದಾನೆ. ನನಗೆ ಆತನನ್ನು ಆಸ್ಪತ್ರೆಗೆ ಒಯ್ಯಲು ಹಣ ಇಲ್ಲ. ನೀನೇ ಆಸ್ಪತ್ರೆಗೆ ಕರೆದುಕೊಂಡು ಹೋಗು ಎಂದು ಹೇಳಿದ್ದರು. ಅದರಂತೆ, ಆರೋಪಿ ಕೃಷ್ಣ, ದಿನೇಶ್ ನಾಯ್ಕನನ್ನು ಆತನ ಪತ್ನಿಯ ಜೊತೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ದಾಖಲು ಮಾಡಿದ್ದ. ಅಲ್ಲದೆ, ವೈದ್ಯರಲ್ಲಿ ಮೆಟ್ಟಿಲಿನಿಂದ ಬಿದ್ದು ಗಾಯಗೊಂಡಿರುವುದಾಗಿ ಸುಳ್ಳು ಹೇಳಿದ್ದ. ಆದರೆ ದಿನೇಶ್ ಫೆ.25ರಂದು ನಸುಕಿನಲ್ಲಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಇದರ ಬಗ್ಗೆ ದಿನೇಶ್ ನಾಯ್ಕನ ತಾಯಿ ಪದ್ಮಾವತಿ, ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದು ಆರೋಪಿ ಕೃಷ್ಣನ ಹಲ್ಲೆಯಿಂದಲೇ ಮೃತಪಟ್ಟಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾರೆ.
Dharmasthala BJP member alleged of assault and Murder, case filed. The deceased has been identified as Dinesh Nayak.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm