ಬ್ರೇಕಿಂಗ್ ನ್ಯೂಸ್
27-02-22 04:53 pm HK Desk news ಕ್ರೈಂ
ಬೆಳಗಾವಿ, ಫೆ 27 : ನಿತ್ಯ ಲಕ್ಷಾಂತರ ರೂಪಾಯಿ ಪೆಟ್ರೋಲ್ ಬಂಕ್ ಮಾಲೀಕನ ಅಕೌಂಟ್ಗೆ ಜಮಾವಣೆ ಆಗ್ತಿತ್ತು. ಇತ್ತ ಲೆಕ್ಕಕ್ಕೆ ಲೆಕ್ಕವೂ ಇರ್ತಿತ್ತು. ಆದರೆ, ಪಂಪ್ನ ಮಾಲೀಕ ಮಾತ್ರ ಲಾಸ್ ಅನುಭವಿಸುತ್ತಿದ್ದ. ಒಂದೂವರೆ ವರ್ಷದ ಬಳಿಕ ಬಂಕ್ ಮಾಲೀಕ ತನಗೆ ಆಗ್ತಿರುವ ಹಾನಿ ಕುರಿತು ಠಾಣೆ ಮೇಟ್ಟಿಲೇರಿದ್ದ. ಈ ವೇಳೆ ಸಿಕ್ಕಿದ್ದೇ ಅದೊಬ್ಬ ಖದೀಮನ ಫೋನ್ ಪೇ ಗಿಮಿಕ್ ವಂಚನೆ.
ಬೆಳಗಾವಿ ಫೋನ್ ಪೇ ವಂಚನೆ ಪ್ರಕರಣ ನಗರದ ಮಚ್ಚೆಯಲ್ಲಿರುವ ಸೋಮನಾಥ್ ಪೆಟ್ರೋಲ್ ಬಂಕ್ನ ಮಾಲೀಕ ಸುನೀಲ್ ಶಿಂಧೆ ಮೋಸ ಹೋದ ಮಾಲೀಕ. ರೋಹಿತ್ ರಾಜು ಮೋಸ ಮಾಡಿದಾತ. ಈತ ಕಳೆದ ಮೂರು ವರ್ಷದಿಂದ ಸುನೀಲ್ ಬಂಕ್ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಖದೀಮ ಒಂದು ವರ್ಷದಲ್ಲಿ ಮಾಲೀಕನಿಗೆ ಬರೋಬ್ಬರಿ 44 ಲಕ್ಷ ರೂ.ಗಳನ್ನು ವಂಚಿಸಿದ್ದಾನೆ ಎಂದು ತಿಳಿದು ಬಂದಿದೆ.
ಫೋನ್ ಪೇ ಅಸ್ತ್ರ;
ಇತ್ತಿಚೀನ ದಿನಗಳಲ್ಲಿ ಹೆಚ್ಚಾಗಿ ವಾಹನ ಸವಾರರು ಪೆಟ್ರೋಲ್ ಬಂಕ್ಗಳಲ್ಲಿ ಫೋನ್ ಪೇ, ಗೂಗಲ್ ಪೇ ಮೂಲಕ ಜನ ಪೇಮೆಂಟ್ ಮಾಡ್ತಿದ್ದಾರೆ. ವ್ಯಾಪಾರಸ್ಥರಿಗೆ ಮಾತ್ರ ಈ ಫೋನ್ ಪೇ ಆಯಪ್ನವರು ಹಣ ಮರು ಪಾವತಿಗೆ ವ್ಯವಸ್ಥೆ ಮಾಡಿದ್ದಾರೆ. ಕೆಲವೊಮ್ಮೆ ವಾಹನ ಸವಾರರು ನೂರು ರೂಪಾಯಿ ಪೆಟ್ರೋಲ್ ಹಾಕಿಸಿಕೊಂಡು ಸಾವಿರ ರೂಪಾಯಿ ಫೋನ್ ಪೇ ಮಾಡ್ತಾರೆ. ಆಗ ಅವರಿಗೆ ಹಣ ಹಿಂತಿರುಗಿಸಬೇಕಾಗುತ್ತದೆ. ಈ ವೇಳೆ, ಕ್ಯಾಶ್ ಕೊಡಲು ಬರುವುದಿಲ್ಲ. ಆಗ ಫೋನ್ ಪೇದಲ್ಲೇ ಈ ರಿಫಂಡ್ ಆಪ್ಷನ್ ಬಳಸಿಕೊಂಡು ಉಳಿದ ಹಣ ಮರಳಿಸಬಹುದು. ಇದೇ ಮಾರ್ಗವನ್ನು ಬಳಸಿಕೊಂಡ ಖದೀಮ ನಿತ್ಯವೂ ತನ್ನ ನಂಬರ್ನಿಂದ ಪಂಪ್ ನಂಬರ್ಗೆ ಎಂಟು ಸಾವಿರ ರೂ. ಫೋನ್ ಪೇ ಮಾಡುತ್ತಿದ್ದ. ಹೀಗೆ ಮಾಡಿ ಮಾಲೀಕನಿಗೆ ಲೆಕ್ಕವನ್ನೂ ಕೊಡುತ್ತಿದ್ದ. ಇದಾದ ಬಳಿಕ ರಾತ್ರಿ ಮನೆಗೆ ವಾಪಸ್ ಆಗುವಾಗ ಪಂಪ್ ನಂಬರ್ನಿಂದ ಮತ್ತೆ ತನ್ನ ಅಕೌಂಟ್ಗೆ ತಾನು ಹಾಕಿದ ಹಣವನ್ನು ರಿಫಂಡ್ ಮಾಡಿಕೊಳ್ಳುತ್ತಿದ್ದ.

44 ಲಕ್ಷ ಹಣ ಎಗರಿಸಿದ ಖದೀಮ:
ಹೀಗೆ ರಿಫಂಡ್ ಆದ ಹಣದ ಮೇಸೆಜ್ ಅನ್ನು ಕೂಡಲೇ ಡಿಲಿಟ್ ಮಾಡಿ ತೆರಳುತ್ತಿದ್ದ. ದಿನಕ್ಕೆ 200 ರಿಂದ 300 ಜನ ಫೋನ್ ಪೇಯಿಂದ ಹಣ ವರ್ಗಾವಣೆ ಮಾಡುತ್ತಿದ್ದು, ಯಾರಿಗೆ ರಿಫಂಡ್ ಆಗಿದೆ ಅನ್ನೋದನ್ನು ಮಾಲೀಕ ನೋಡಲು ಹೋಗುತ್ತಿರಲಿಲ್ಲ. ಇದನ್ನು ಬಳಸಿಕೊಂಡು ಸಿಬ್ಬಂದಿ ರೋಹಿತ್ ಒಂದೂವರೆ ವರ್ಷದಲ್ಲಿ 44 ಲಕ್ಷ ರೂ. ಎಗರಿಸಿದ್ದಾನೆ.

ಠಾಣೆ ಮೆಟ್ಟಿಲೇರಿದಾಗ ಸತ್ಯ ಬಯಲು:
ದಿನೇ ದಿನೆ ಲಾಸ್ ಆಗುವ ಕಾರಣಕ್ಕೆ ಕಂಗಾಲಾದ ಮಾಲೀಕ ಕೊನೆಗೆ ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ವೇಳೆ ಬ್ಯಾಂಕ್ನ ವಹಿವಾಟು ನೋಡಿದಾಗ ಬಂಕ್ ಸಿಬ್ಬಂದಿ ರೋಹಿತ್ ನಂಬರ್ಗೆ ನಿತ್ಯವೂ ಹಣ ರಿಫಂಡ್ ಆಗುವುದು ಗೊತ್ತಾಗಿದೆ. ಪೊಲೀಸರು ಆರೋಪಿಯನ್ನು ವಿಚಾರಿಸಿದಾಗ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಆತನಿಂದ 28 ಲಕ್ಷ ಹಣ ವಸೂಲಿ ಮಾಡಿದ್ದು, ಇನ್ನುಳಿದ ಹಣವನ್ನು ವಸೂಲಿ ಮಾಡಿಕೊಡುವುದಾಗಿ ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
Belagavi petrol pump over cheated of 44 lakhs via phone pay and google pay, employee held.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm